Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತಕ್ಷೇತ್ರದಲ್ಲಿ ಆದ್ಯತೆ ಮೇರೆಗೆ ಅಭಿವೃದ್ಧಿ ಕಾರ್ಯ :ಶಾಸಕ ರಾಜುಗೌಡ
(ರಾಜ್ಯ ) ಜಿಲ್ಲೆ

ಮತಕ್ಷೇತ್ರದಲ್ಲಿ ಆದ್ಯತೆ ಮೇರೆಗೆ ಅಭಿವೃದ್ಧಿ ಕಾರ್ಯ :ಶಾಸಕ ರಾಜುಗೌಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ ಬರುವ ೧೨೮ ಗ್ರಾಮಗಳಲ್ಲಿ, ೩೧ ತಾಂಡಾಗಳಲ್ಲಿ ಯಾವ ಸಮಸ್ಯೆಗಳಿವೆ ಎಂಬುವದನ್ನು ಅರಿತು ಅಗತ್ಯತೆ ಇರುವ ಕಾಮಗಾರಿಗಳನ್ನು ಮತಕ್ಷೇತ್ರದಲ್ಲಿ ಆದ್ಯತೆ ಮೇರೆಗೆ ಮೊದಲು ಕೈಗೊಳ್ಳುವ ಮೂಲಕ ಮತಕ್ಷೇತ್ರದ ಎಲ್ಲ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡುವ ಮೂಲಕ ಮತಕ್ಷೇತ್ರದ ಮತದಾರರ ಋಣ ತೀರಿಸುವುದಾಗಿ ದೇವರಹಿಪ್ಪರಗಿ ಶಾಸಕ ಭೀಮನಗೌಡ(ರಾಜುಗೌಡ) ಪಾಟೀಲ ಹೇಳಿದರು.
ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ೫೦೫೪ ಸಿಆರ್ಐಎಫ್ ೨೦೨೩-೨೪ ಸಾಲಿನ ಕೇಂದ್ರ ರಸ್ತೆ ನಿಧಿ ಯೋಜನೆಯಡಿಯಲ್ಲಿ ಅಂದಾಜು ರೂ.೬ ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿಜಯಪುರ-ಉಕ್ಕಲಿ-ದಿಂಡವಾರ-ಸಾಸನೂರ ರಸ್ತೆ(ಆಯ್ದ ಭಾಗಗಳಲ್ಲಿ) ಸುಧಾರಣೆ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಆಡಳಿತ ಸರ್ಕಾರದ ಟೀಕೆ ಮಾಡಲು ನಾನು ಹೋಗಲ್ಲ. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆಯಾಗುತ್ತಿದೆ ಎಂಬುವದು ಜಗಜಾಹೀರರಾಗಿದೆ. ಇಂತಹ ಸನ್ನಿವೇಶದಲ್ಲಿಯೂ ನಾನು ವಿವಿಧ ಇಲಾಖೆಗಳನ್ನು ಸಂಪರ್ಕಿಸಿ ಮತಕ್ಷೇತ್ರದಲ್ಲಿರುವ ಗ್ರಾಮಗಳಿಗೆ ಬೇಕಾದ ಅಭಿವೃದ್ಧಿ ಕಾಮಗಾರಿಗೆ ಬೇಕಾದ ಅನುದಾನ ತರುವ ಮೂಲಕ ಮತಕ್ಷೇತ್ರದಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇನೆ. ಮತಕ್ಷೇತ್ರದಲ್ಲಿ ಸಂಚರಿಸಿ ಜನರಿಗೆ ಬೇಕಾದ ಕಾರ್ಯಗಳನ್ನು ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ ಎಂದ ಅವರು, ಈಗ ಕೈಗೊಂಡಿರುವ ಏಳು ಕಿ.ಮೀ. ರಸ್ತೆ ಸುಧಾರಣೆಯನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.
ತಾಲೂಕಿನ ದಿಂಡವಾರದಿಂದ ನಾಲತವಾಡದವರೆಗೂ ಈಗಾಗಲೇ ೧ ಸಾವಿರ ಕೋಟಿ ಅನುದಾನದಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿ ಮುಂಬರುವ ದಿನಗಳಲ್ಲಿ ಆರಂಭವಾಗಲಿದೆ. ನಮ್ಮ ಮತಕ್ಷೇತ್ರದಲ್ಲಿ ದಿಂಡವಾರದಿಂದ ಸಾಸನೂರದವರೆಗೂ ಈ ರಾಜ್ಯ ಹೆದ್ದಾರಿ ಹಾಯ್ದುಹೋಗಲಿದೆ. ಈ ರಸ್ತೆ ನಿರ್ಮಾಣದಿಂದಾಗಿ ಈ ಭಾಗದ ಜನರ ಸಂಚಾರಕ್ಕೆ ತುಂಬಾ ಅನುಕೂಲವಾಗುತ್ತದೆ. ರಾಜ್ಯ ಹೆದ್ದಾರಿ ನಿರ್ಮಾಣದ ವೇಳೆ ರೈತರ ಜಮೀನು, ಗಿಡ-ಮರ, ಏನಾದರೂ ಹೋಗುತ್ತಿದ್ದರೆ ಅದಕ್ಕೆ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.ಲಿಂಗಸೂರು-ಶಿರಾಳಡೋಣ ರಾಷ್ಟ್ರೀಯ ಹೆದ್ದಾರಿಗೂ ಮೂಹರ್ತ ಕೂಡಿಬರುವ ಲಕ್ಷಣಗಳು ಸಹ ಕಾಣುತ್ತಿವೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಇದಕ್ಕೆ ಇಷ್ಟರಲ್ಲೇ ಇದಕ್ಕೆ ಅನುಮೋದನೆ ನೀಡುವ ನಿರೀಕ್ಷೆಯಿದೆ ಎಂದರು.
ನಾನು ಮೂಲ ಬೂದಿಹಾಳ ಗ್ರಾಮದವನಾಗಿರುವದರಿಂದ ಈ ಗ್ರಾಮದಲ್ಲಿ ಈಗಾಗಲೇ ಮೂರು ದೇವಸ್ಥಾನಗಳಿಗೆ, ಶಾಲಾ ದುರಸ್ತಿಗೆ, ಸಿಸಿ ರಸ್ತೆ ಸೇರಿದಂತೆ ವಿವಿಧ ಕಾಮಗಾರಿ ಸೇರಿದಂತೆ ರೂ.೧ ಕೋಟಿ ಈಗಾಗಲೇ ಬಿಡುಗಡೆ ಮಾಡಿಸಿ ಕಾಮಗಾರಿ ಕೈಗೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಡಾ.ಅಂಬೇಡ್ಕರ ಭವನ, ಯಾಳವಾರಕ್ಕೆ ಹೋಗುವ ರಸ್ತೆ ಸೇರಿದಂತೆ ಗ್ರಾಮಸ್ಥರ ಉಳಿದ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದರು.
ಆನಂದ ತಾಳಿಕೋಟಿ ಮಾತನಾಡಿ, ಈಗಾಗಲೇ ಬೂದಿಹಾಳ ಗ್ರಾಮಸ್ಥರ ಮನವಿಯಂತೆ ಶಾಸಕರು ಸಾಕಷ್ಟು ಅಭಿವೃದ್ಧಿ ಗ್ರಾಮದಲ್ಲಿ ಕೈಗೊಂಡಿದ್ದಾರೆ. ಮುಂಬರುವ ದಿನಗಳಲ್ಲಿ ಮಹಾಲಕ್ಷ್ಮೀ ದೇವಿ ದೇವಸ್ಥಾನದ ಕಲ್ಯಾಣ ಮಂಟಪ ನಿರ್ಮಾಣ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡರು.
ಕಾರ್ಯಕ್ರಮದಲ್ಲಿ ಮುಖಂಡರಾದ ಸಚೀನಗೌಡ ಪಾಟೀಲ, ಗುರನಗೌಡ ಪಾಟೀಲ, ವಿಜಯಾನಂದ ಪಾಟೀಲ, ಸದಪ್ಪಗೌಡ ರೂಡಗಿ, ನಿಂಗಯ್ಯ ಹಿರೇಮಠ, ಸಿದ್ದನಗೌಡ ಬಿರಾದಾರ, ರುದ್ರಗೌಡ ಹಂಚಲಿ, ಗುರನಗೌಡ ತಾವರಖೇಡ, ಈರಯ್ಯ ಹಿರೇಮಠ, ಪ್ರಲ್ಹಾದ ತಳವಾರ, ಭೀಮನಗೌಡ ಬಿರಾದಾರ, ಅಕ್ಷಯ ಗಬ್ಬೂರ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಎಇ ಪ್ರಶಾಂತ ಚಟ್ಟರಕ್ಕಿ, ಗುತ್ತಿಗೆದಾರ ಎಸ್.ಐ.ಡೋಣೂರಮಠ ಇತರರು ಇದ್ದರು.
ಬಸವರಾಜ ಬಾಗೇವಾಡಿ ಸ್ವಾಗತಿಸಿ, ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.