Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೃಷ್ಣಾ ತೀರದಲ್ಲಿ ಜಲಕ್ಷಾಮ, ರೈತರು ಕಂಗಾಲು
(ರಾಜ್ಯ ) ಜಿಲ್ಲೆ

ಕೃಷ್ಣಾ ತೀರದಲ್ಲಿ ಜಲಕ್ಷಾಮ, ರೈತರು ಕಂಗಾಲು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬರಿದಾದ ಚಿಕ್ಕಪಡಸಲಗಿ ಶ್ರಮಬಿಂದು ಸಾಗರ I ಮಹಾರಾಷ್ಟ್ರದ ಕೊಯ್ನಾದಿಂದ ಹರಿಯದ ನೀರು

ಉದಯರಶ್ಮಿ ದಿನಪತ್ರಿಕೆ

ವರದಿ: ಎಸ್.ಎಮ್.ಇಟ್ಟಿ ಜಮಖಂಡಿ: ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಬಿಡಿಸುವ ಬಗ್ಗೆ ಎರಡು ರಾಜ್ಯಗಳ ಸರ್ಕಾರದ ನಡುವೆ ಮಾತುಕತೆ ನಡೆದಿಲ್ಲ. ಹಿಪ್ಪರಗಿ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆ ಆಗುತ್ತಿದೆ. ಮತ್ತೊಂದೆಡೆ ಚಿಕ್ಕಪಡಸಲಗಿ ಶ್ರಮಬಿಂದು ಸಾಗರ ಸಂಪೂರ್ಣ ಖಾಲಿಯಾಗಿ ಜಮಖಂಡಿ ತಾಲೂಕಿನ ಕೃಷ್ಣಾ ತೀರದಲ್ಲಿ ಬಾಯಾರಿಕೆ ದಾಹ ಹೆಚ್ಚಾಗುತ್ತಿದೆ.
ರೈತರ ಬ್ಯಾರೇಜ್ ಎಂದೇ ಖ್ಯಾತಿ ಪಡೆದಿರುವ ಚಿಕ್ಕಪಡಸಲಗಿ ಗ್ರಾಮದ ಶ್ರಮಬಿಂದು ಸಾಗರ 4 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಒಂದು ವಾರದ ಹಿಂದೆಯೇ ಸಂಪೂರ್ಣ ಖಾಲಿ ಆಗಿದೆ. ಇತ್ತೀಚಿನ ವರ್ಷಗಳಲ್ಲಿ ಮಾರ್ಚ್ ತಿಂಗಳಲ್ಲಿ ರೈತರೇ ಸೇರಿಕೊಂಡು ವಂತಿಗೆ ಕೂಡಿಸಿ ಕೃಷ್ಣಾ ನದಿ ನೀರು ಎತ್ತಿ ಬ್ಯಾರೇಜ್ ತುಂಬಿಸಿಕೊಳ್ಳುತ್ತಿದ್ದರು.
ಖರ್ಚು ಜಾಸ್ತಿ ಆಗುತ್ತದೆ ಎಂದು ಪ್ರಸಕ್ತ ವರ್ಷ ಗಲಗಲಿ ಬ್ಯಾರೇಜ್ ತುಂಬಿಸಲು ಪ್ಯಾನ್ ಮಾಡಲಾಗಿತ್ತು. ಅದಕ್ಕಾಗಿ ಜಲಸಂಪನ್ಮೂಲ ಇಲಾಖೆಯಿಂದ ಅನುದಾನ ಕೊಡಲು ಸಚಿವರು ಒಪ್ಪಿಗೆ ನೀಡಿದ್ದರಂತೆ. ಆದರೆ, ಕೆಲ ತಾಂತ್ರಿಕ ಕಾರಣದಿಂದಾಗಿ ಗಲಗಲಿ ಬ್ಯಾರೇಜ್ ತುಂಬಿಸಲು ಆಗಲಿಲ್ಲ. ಪರಿಣಾಮ ಚಿಕ್ಕಪಡಸಲಗಿ ಬ್ಯಾರೇಜ್ ಇದೀಗ ಸಂಪೂರ್ಣ ಖಾಲಿ ಆಗಿದೆ.
ಜಮಖಂಡಿ ಹಾಗೂ ಅಥಣಿ ತಾಲೂಕಿನ 32 ಗ್ರಾಮಗಳು ಕುಡಿಯುವ ನೀರಿಗೆ ಚಿಕ್ಕಪಡಸಲಗಿ ಬ್ಯಾರೇಜ್ ಅವಲಂಬಿಸಿವೆ. 60 ಸಾವಿರ ಎಕರೆ ಪ್ರದೇಶದ ಬೆಳೆಗಳಿಗೆ ನೀರು ದೊರೆಯುತ್ತದೆ. ಈಗ ಬೇಸಿಗೆ ಬಿರುಬಿಸಿಲಿಗೆ ನದಿ ಸಂಪೂರ್ಣ ಖಾಲಿ ಆಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ. ಕಬ್ಬು ಸೇರಿದಂತೆ ಪ್ರಮುಖ ವಾಣಿಜ್ಯ ಬೆಳೆಗಳಿಗೆ ನೀರಿಲ್ಲದೆ ರೈತರು ನಷ್ಟ ಅನುಭವಿಸಬೇಕಾಗುತ್ತದೆ. ಇನ್ನಾದರೂ ಸಂಬಂಧಿಸಿದ ಜನಪ್ರತಿನಿಧಿಗಳು, ಅಧಿಕಾರಿಗಳು ವಿಳಂಬ ಮಾಡದೆ ತಮ್ಮ ಜವಾಬ್ದಾರಿ ಮೆರೆಯಬೇಕಿದೆ.

ಮಹಾರಾಷ್ಟ್ರದಿಂದ ನೀರು ಬರಬೇಕು

ಬೇಸಿಗೆಯಲ್ಲಿ ರಾಜ್ಯ ಸರ್ಕಾರ ಮಹಾರಾಷ್ಟ್ರ ಸರ್ಕಾರದ ಜೊತೆಗೆ ನಿರಂತರ ಸಂಪರ್ಕ ಇಟ್ಟುಕೊಂಡು, ದುಡ್ಡು ಕೊಟ್ಟು ಕೊಯ್ತಾದಿಂದ ನೀರು ಬಿಡಿಸುತ್ತದೆ. ಆದರೆ, ಪ್ರಸಕ್ತ ವರ್ಷ ಆ ಪ್ರಕ್ರಿಯೆ ನಿರೀಕ್ಷಿತ ಮಟ್ಟದಲ್ಲಿ ಸಾಗಿಲ್ಲ. ಮಹಾರಾಷ್ಟ್ರ ಸರ್ಕಾರ ಬೇಸಿಗೆಯಲ್ಲಿ ದುಡ್ಡು ಪಡೆದು ನೀರು ಬಿಡುವುದಕ್ಕಿಂತ ಈಗ ತಾವು ಹರಿಸುವ ನೀರನ್ನು ಮಳೆಗಾಲದಲ್ಲಿ ಕೃಷ್ಣಾ ನದಿಯಿಂದ ಮಹಾರಾಷ್ಟ್ರದ ಜತ್ತ ಭಾಗಕ್ಕೆ ನೀರು ಹರಿಸಬೇಕು ಎನ್ನುವ ಬೇಡಿಕೆ ಇಡುತ್ತ ಬಂದಿದೆ. ಈ ಬಗ್ಗೆ ಎರಡು ಸರ್ಕಾರಗಳ ನಡುವೆ ಒಪ್ಪಂದ ಆಗಬೇಕು. ಅದು ಸರಾಗವಾಗಿ ನಡೆದರೆ ಬೇಸಿಗೆಯಲ್ಲಿ ಕೃಷ್ಣಾ ತೀರದಲ್ಲಿ ನೀರಿನ ದಾಹ ನೀಗಿಸಬಹುದು ಎನ್ನುತ್ತಾರೆ ಜಮಖಂಡಿ ಮಾಜಿ ಶಾಸಕ ಆನಂದ ನ್ಯಾಮಗೌಡ.
ಸದ್ಯ ಮಹಾರಾಷ್ಟ್ರದಿಂದ 2 ರಿಂದ 3 ಟಿಎಂಸಿ ನೀರು ಬಿಡಿಸಿದರೆ ಬೇಸಿಗೆಯಲ್ಲಿ ಯಾವುದೇ ತೊಂದರೆ ಆಗಲ್ಲ. ಸದ್ಯಕ್ಕೆ ಚಿಕ್ಕಪಡಸಲಗಿ ಬ್ಯಾರೇಜ್‌ಗೆ ಹಿಪ್ಪರಗಿಯಿಂದ ನೀರು ಹರಿಸುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ಆದಷ್ಟು ಬೇಗ ನೀರು ಬಿಡಬಹುದು. ಸದ್ಯ ಅಷ್ಟು ನೀರು ಬಿಟ್ಟರೆ ಸ್ವಲ್ಪ ದಿನಗಳ ಕಾಲ ಸಮಸ್ಯೆ ದೂರವಾಗುತ್ತದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ
ಹೇಳುತ್ತಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.