ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಇಸ್ರೋ ಮಾಜಿ ಅಧ್ಯಕ್ಷ, ಪದ್ಮವಿಭೂಷಣ ಡಾ. ಕೆ. ಕಸ್ತೂರಿ ರಂಗನ್ಅವರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, 1994ರಿಂದ 2003ರವರೆಗೆ ಇಸ್ರೋ ಅಧ್ಯಕ್ಷರಾಗಿ ಬಾಹ್ಯಾಕಾಶ ವಿಜ್ಞಾನದಲ್ಲಿ ಅಪಾರ ಸೇವೆ ಸಲ್ಲಿಸಿ ದೇಶಕ್ಕೆ ಗಣನೀಯ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆ ದೇಶದ ವಿಜ್ಞಾನ ಕ್ಷೇತ್ರಕ್ಕೆ ಭರಿಸಲಾರದ ನಷ್ಟ ಉಂಟುಮಾಡಿದೆ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ರಾಜ್ಯಸಭಾ ಸದಸ್ಯರಾಗಿ, ಭಾರತ ಸರ್ಕಾರದ ಯೋಜನಾ ಆಯೋಗದ ಸದಸ್ಯರಾಗಿ ಹಾಗೂ ಬೆಂಗಳೂರಿನಲ್ಲಿರುವ ನ್ಯಾಷನಲ್ ಇನ್ಸಟ್ಯೂಟ್ ಆಫ್ಆಡ್ವಾನ್ಸ್ಡ್ನಿರ್ದೇಶಕರಾಗಿ ಅವರು ನೀಡಿರುವ ಕೊಡುಗೆಯನ್ನು ಸ್ಮರಿಸಿದ್ದಾರೆ. ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ಅವರು ಕೇಂದ್ರ ಸರ್ಕಾರದ ಮೂರು ಪ್ರಮುಖ ನಾಗರಿಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಭಾರತದ ಮೊದಲ ಎರಡು ಪ್ರಾಯೋಗಿಕ ಭೂ ವೀಕ್ಷಣೆಯ ಉಪಗ್ರಹಗಳಾದ ಭಾಸ್ಕರ – 1 ಭಾಸ್ಕರ – 2ರ ಯೋಜನಾ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಕಸ್ತೂರಿ ರಂಗನ್ಅವರ ನಾಯಕತ್ವದಲ್ಲಿ ಹಲವು ಪ್ರಮುಖ ಸಾಧನೆಗಳನ್ನು ಕೈಗೊಳ್ಳಲಾಗಿದೆ. ಭಾರತ ಹೆಚ್ಚು ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಆಧಾರಿತ ಅಧಿಕ ಸಾಮರ್ಥ್ಯದ ಖಗೋಳ ವಿಜ್ಞಾನ ವೀಕ್ಷಕ ಮತ್ತು ಸಂಬಂಧಿತ ಚಟುವಟಿಕೆಗಳ ಪ್ರಾರಂಭಿಸುವಿಕೆ ಕೂಡ ಕಸ್ತೂರಿ ರಂಗನ್ನಾಯಕತ್ವದ ಪ್ರಮುಖ ಸಾಧನೆಗಳಾಗಿವೆ ಎಂದು ಸಚಿವರು ಸ್ಮರಿಸಿದ್ದಾರೆ.

