Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಮಿಳುನಾಡು ನಡೆಮಾನವೀಯ ನ್ಯಾಯಕ್ಕೆ ವಿರುದ್ಧ!
(ರಾಜ್ಯ ) ಜಿಲ್ಲೆ

ತಮಿಳುನಾಡು ನಡೆ
ಮಾನವೀಯ ನ್ಯಾಯಕ್ಕೆ ವಿರುದ್ಧ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿ

ಸಿಡಬ್ಲೂಆರ್ಸಿ ಆದೇಶ ಕನ್ನಡಿಗರ ಪಾಲಿಗೆ ಮರಣಶಾಸನ | ಸಂಕಷ್ಟ ಹಂಚಿಕೆ ಸೂತ್ರ ರೂಪಿಸಿದ ಹೊರತು ನೀರು ಬಿಡಬಾರದು

ಬೆಂಗಳೂರು: ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲೂಆರ್ಸಿ) ತಮಿಳುನಾಡಿಗೆ ಇನ್ನೂ 18 ದಿನಗಳ ಕಾಲ ನಿತ್ಯವೂ 3,000 ಕ್ಯೂಸೆಕ್ ಹರಿಸಲು ಕರ್ನಾಟಕಕ್ಕೆ ಇಂದು ಆದೇಶ ನೀಡಿದೆ. ಇದು ನಿಜಕ್ಕೂ ಆಘಾತಕಾರಿ, ಕಾವೇರಿ ಮತ್ತು ಕನ್ನಡಿಗರ ಪಾಲಿಗೆ ಮರಣಶಾಸನ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಪೆಟ್ಟಿನ ಮೇಲೆ ಪೆಟ್ಟು ತಿನ್ನುತ್ತಿರುವ ಕರ್ನಾಟಕಕ್ಕೆ ಈಗ ಮತ್ತೆ ದೊಡ್ಡ ಹಿನ್ನಡೆ ಆಗಿದೆ. ಹಿನ್ನಡೆ ಎನ್ನುವುದು ನಿರಂತರವಾಗಿದ್ದು, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (ಸಿಡಬ್ಲೂಎಮ್ಎ) ಮತ್ತು ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲೂಆರ್ಸಿ) ಸಂಕಷ್ಟ ಹಂಚಿಕೆ ಸೂತ್ರ ರೂಪಿಸಿದ ಹೊರತು ತಮಿಳುನಾಡಿಗೆ ನೀರು ಹರಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.
ರಾಜ್ಯ ಸರಕಾರದ ವೈಫಲ್ಯಗಳನ್ನು ತಮಿಳುನಾಡು ಅತ್ಯಂತ ಜಾಣತನದಿಂದ ಲಾಭ ಮಾಡಿಕೊಳ್ಳುತ್ತಿದೆ. ಅಲ್ಲದೆ, ಡಿಎಂಕೆ ಯೋಗಕ್ಷೇಮವನ್ನಷ್ಟೇ ಆಲೋಚನೆ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಕಾವೇರಿ ಕೊಳ್ಳ ಮತ್ತು ಬೆಂಗಳೂರು ನಗರದ ಜನರ ಕತ್ತು ಹಿಚುಕುವುದಕ್ಕೆಂದೇ ರಾಜ್ಯ ಕಾಂಗ್ರೆಸ್ ಸರಕಾರ ಬಂದಿದೆಯೇನೋ ಎಂದು ಬಹಳ ನೋವಿನಿಂದ ಹೇಳಲೇಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕೆಆರ್ ಎಸ್ ಜಲಾಶಯಕ್ಕೆ ನಿತ್ಯವೂ 10,000 ಕ್ಯೂಸೆಕ್ ಒಳಹರಿವು ಇದೆ ಎನ್ನುತ್ತಾರೆ ಜಲ ಸಂಪನ್ಮೂಲ ಸಚಿವರು. ಇದಕ್ಕೆ ತದ್ವಿರುದ್ಧವಾಗಿ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು “ನಮ್ಮಲ್ಲಿ ನೀರೇ ಇಲ್ಲ” ಎಂಬ ಮಾಹಿತಿ ನೀಡುತ್ತಾರೆ. ಇನ್ನೊಂದೆಡೆ ಹಿರಿಯ ಅಧಿಕಾರಿಯೊಬ್ಬರು “ಈ ಆದೇಶದಿಂದ ರಾಜ್ಯಕ್ಕೆ 2.5 ಟಿಎಂಸಿ ನೀರು ಉಳಿತಾಯವಾಗಿದೆ” ಎನ್ನುತ್ತಾರೆ. ‘ಎತ್ತು ಏರಿಗೆ, ಕೋಣ ನೀರಿಗೆ’ ಎನ್ನುವಂತಿದೆ ಜಲ ಸಂಪನ್ಮೂಲ ಇಲಾಖೆ ಮತ್ತು ಸರಕಾರದ ಪರಿಸ್ಥಿತಿ ಎಂದು ಕಿಡಿಕಾರಿದರು.
ಹೆಜ್ಜೆಹೆಜ್ಜೆಗೂ ಅನರ್ಥಗಳನ್ನೇ ಮಾಡುತ್ತಿರುವ ಈ ಸರಕಾರದ ವೈಫಲ್ಯದ ಲಾಭವನ್ನು ತಮಿಳುನಾಡು ಅತ್ಯಂತ ಜಾಣತನದಿಂದ ಪಡೆದುಕೊಳ್ಳುತ್ತಿದೆ ಎಂದು ಸರಕಾರಕ್ಕೆ ತರಾಟೆಗೆ ತೆಗೆದುಕೊಂಡಿದ್ದಾರೆ.
ನಾವು ಕುಡಿಯಲು ನೀರು ಕೇಳುತ್ತಿದ್ದೇವೆ, ತಮಿಳುನಾಡು ಅಕ್ರಮವಾಗಿ ಮಿತಿಮೀರಿದ ವಿಸ್ತೀರ್ಣದಲ್ಲಿ ಬೆಳೆದ ಕುರುವೈ ಬೆಳೆಗೆ ನೀರು ಕೇಳುತ್ತಿದೆ. ಅಲ್ಲಿ ಸ್ವಾರ್ಥ ಇದೆ, ಇಲ್ಲಿ ಜನರ ಬದುಕಿದೆ. ಮಾನವೀಯ ನ್ಯಾಯಕ್ಕೆ ವಿರುದ್ಧವಾದ ತಮಿಳುನಾಡು ನಡೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ಆ ರಾಜ್ಯದ ಇಂಥ ಮನಃಸ್ಥಿತಿಯ ವಿರುದ್ಧ ಪ್ರಬಲ ಹೋರಾಟ ಮಾಡುವ ಇಚ್ಛಾಶಕ್ತಿ ಈ ಸರಕಾರಕ್ಕೆ ಇಲ್ಲದಾಗಿದೆ. ಕೇವಲ ಪಾಲುದಾರ ಪಕ್ಷ ಡಿಎಂಕೆಯ ಯೋಗಕ್ಷೇಮವನ್ನೇ ಕೈ ಸರಕಾರ ನೋಡುತ್ತಾ, ಕರ್ನಾಟಕದ ಹಿತವನ್ನು ಸಂಪೂರ್ಣ ಬಲಿ ಕೊಟ್ಟಿದೆ. ಕನ್ನಡಿಗರ ಮೇಲೆ ‘ಬಂಡೆ’ ಎಳೆದಿದೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ ಸಮಾನರು. ಈಗಾಗಲೇ ಕಾವೇರಿ ನೀರು ಹಂಚಿಕೆಯನ್ನು ನ್ಯಾಯಾಧಿಕರಣ ಅಖೈರುಗೊಳಿಸಿದ್ದು, ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ, ಸಂಕಷ್ಟ ಕಾಲದಲ್ಲಿ ಪರಿಹಾರವೇನು? ಮಾತೆತ್ತಿದರೆ ನೀರು ಬಿಡಿ ಎಂದು ಆದೇಶಿಸುವ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ಜಲ ನಿಯಂತ್ರಣ ಸಮಿತಿ ಈ ಕೂಡಲೇ ‘ಸಂಕಷ್ಟ ಹಂಚಿಕೆ ಸೂತ್ರ’ವನ್ನು ರೂಪಿಸಲೇಬೇಕು. ಆ ನಿಟ್ಟಿನಲ್ಲಿ ಸರಕಾರ ಒತ್ತಡ ಹೇರಿ, ಆ ಸೂತ್ರ ರೂಪಿಸದ ಹೊರತು ತಮಿಳುನಾಡಿಗೆ ನೀರು ಹರಿಸುವ ಪ್ರಶ್ನೆಯೇ ಇಲ್ಲವೆಂದು ಕಡ್ಡಿ ತುಂಡು ಮಾಡಿದಂತೆ ಸ್ಪಷ್ಟವಾಗಿ ಹೇಳಲೇಬೇಕು. ಯಾವುದೇ ಕಾರಣಕ್ಕೂ ಈಗ ನೀರು ಹರಿಸಬಾರದು ಎಂದು ಒತ್ತಾಯ ಮಾಡಿದ್ದಾರೆ.

BIJAPUR NEWS public Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
  • ಟೆಂಡರ್ ರದ್ದಿಗೆ ಆಗ್ರಹಿಸಿ ದಿನಗೂಲಿ ನೌಕರರ ಸಂಘದಿಂದ ಧರಣಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಮತ್ತು ನೇತ್ರ ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಲ್ಲಕ್ಕಿ ಉತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.