ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪ್ರತಿ ವರ್ಷದಂತೆ ಈ ವರ್ಷವೂ ಸಿಂದಗಿ ನಗರದಲ್ಲಿ ಬಸವ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಆರಚಣೆ ಮಾಡಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಬಸವ ಮಂಟಪದಲ್ಲಿ ಬಸವ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಏ.೩೦ರಂದು ಬೆಳಿಗ್ಗೆ ೧೦ಗಂಟೆಗೆ ಬಸವೇಶ್ವರ ವೃತ್ತದಲ್ಲಿ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರ ಸಾನಿಧ್ಯದಲ್ಲಿ ಧ್ವಜಾರೋಹಣ ನಡೆಯಲಿದೆ. ಬಳಿಕ ಬಸವೇಶ್ವರ ವೃತ್ತದಿಂದ ಮೆರವಣಿಗೆ ಪ್ರಾರಂಭವಾಗಿ ಸ್ವಾಮಿ ವಿವೇಕಾನಂದರ ವೃತ್ತ, ಟಿಪ್ಪು ಸುಲ್ತಾನ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಅಂಬಿಗೇರ ಚೌಡಯ್ಯ ವೃತ್ತದ ಮಾರ್ಗವಾಗಿ ಬಸವ ಮಂಟಪ ತಲುಪಲಿದೆ. ಬಳಿಕ ವೇದಿಕೆ ಕಾರ್ಯಕ್ರಮ ಬಸವ ಮಂಟಪದಲ್ಲಿ ಸಾಯಂಕಾಲ ನಡೆಯಲಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ನೀರು ಮತ್ತು ಉಪಹಾರದ ವ್ಯವಸ್ಥೆ ಮಾಡಿಸಲಾಗುತ್ತದೆ. ತಾಲೂಕಿನ ಎಲ್ಲ ಜನತೆ ಸೇರಿಕೊಂಡ ಬಸವ ಜಯಂತಿಯನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಣೆ ಮಾಡೋಣ. ಎಲ್ಲ ಸಮಾಜ ಬಾಂಧವರು ಬಸವ ಜಯಂತಿಯಲ್ಲಿ ಭಾಗವಹಿಸಬೇಕು. ಮೆರವಣಿಯು ಸಕಲ ವಾದ್ಯ ವೈಭವಗಳೊಂದಿಗೆ ಹಾಗೂ ವಿವಿಧ ಕಲಾ-ತಂಡಗಳೊಂದಿಗೆ ಭವ್ಯ ಮೆರವಣಿಗೆ ಜರುಗಲಿದೆ. ತಾಲೂಕಿನ ಎಲ್ಲ ಜನತೆ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಈ ವೇಳೆ ಬಸವ ದಳದ ಅಧ್ಯಕ್ಷ ಮಲ್ಲಿಕಾರ್ಜುನ ಅರ್ಜುಣಗಿ, ಗುರುಪಾದ ತಾರಾಪೂರ, ಶಿವಾನಂದ ಕಲಬುರ್ಗಿ, ವಿಶ್ವನಾಥ ಜೋಗುರ, ಮುತ್ತು ಮುಂಡೇವಾಡಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಆರ್.ಡಿ.ದೇಸಾಯಿ, ಎಂ.ಎಂ.ಹಂಗರಗಿ, ಬಸವರಾಜ ಗುಗ್ಗರಿ, ಆರ್.ಆರ್.ಪಾಟೀಲ, ಡಾ.ಮಹಾಂತೇಶ ಹಿರೇಮಠ, ರಾಜು ನರಗೋದಿ, ಶರಣು ಲಂಗೋಟಿ, ಸಂಗನಗೌಡ ಪಾಟೀಲ ಅಗಸಬಾಳ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಶಿವಾನಂದ ಬಡಾನೂರ, ಅಂಬರೀಷ ಚೌಗಲೆ, ಸತೀಶ ಬಿರಾದಾರ, ಸಂಗಣ್ಣ ಬ್ಯಾಕೋಡ, ಸಾಯಬಣ್ದ ಪುರದಾಳ, ರಾಜಣ್ಣ ನಾರಾಯಣಕರ, ಸುನಂದಾ ಯಂಪುರೆ, ಶೈಲಜಾ ಸ್ಥಾವರಮಠ, ಅನಸುಯಾ ಪರಗೊಂಡ, ಶಾಂತೂ ರಾಣಾಗೋಳ ಸೇರಿದಂತೆ ಸಾರ್ವಜನಿಕರು ಹಾಗೂ ಬಸವಾಭಿಮಾನಿಗಳು ಇದ್ದರು.

