ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ತಾಲ್ಲೂಕಿನ ಕೊಂಡಗೂಳಿ ಗ್ರಾಮದಲ್ಲಿ ಬಸವ ಜಯಂತಿ ಅಂಗವಾಗಿ ಶ್ರೀಗುರು ವೀರಘಂಟಿ ಮಡಿವಾಳೇಶ್ವರ ಜಾತ್ರಾ ಮಹೋತ್ಸವ ಜರುಗಲಿದೆ.
ದಿ:೩೦ ರಂದು ಬುಧವಾರ ಬೆಳಿಗ್ಗೆ ಬಸವ ಜಯಂತಿ ಅಂಗವಾಗಿ ವೀರಘಂಟಿ ಮಡಿವಾಳೇಶ್ವರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ೧೦ ಗಂಟೆಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಹಾಗೂ ಬಸವೇಶ್ವರ ವೃತ್ತದ ಪ್ರತಿಮೆಗೆ ಪೂಜೆ, ರಾತ್ರಿ ೭ ಗಂಟೆಗೆ ಬಸವೇಶ್ವರರ ತೊಟ್ಟಿಲು ಕಾರ್ಯಕ್ರಮ ಹಾಗೂ ‘ಶರಣಚರಿತಾಮೃತ’ ಧಾರ್ಮಿಕ ಪ್ರವಚನ ಮುಕ್ತಾಯ ಸಮಾರಂಭ ಜರುಗಲಿದೆ.
ದಿ:೦೧ ಮೇ ಗುರುವಾರರಂದು ಬೆಳಿಗ್ಗೆ ವೀರಘಂಟಿ ಮಡಿವಾಳೇಶ್ವರರ ಉತ್ಸವ ಮೂರ್ತಿಯೊಂದಿಗೆ ಪಲ್ಲಕ್ಕಿ ಉತ್ಸವ, ನಂದಿಕೋಲ ಮೆರವಣಿಗೆ, ಸುಮಂಗಲೆಯರ ಕುಂಭ, ಕಳಸಕನ್ನಡಿಯೊಂದಿಗೆ ಯಾಳವಾರ ಗ್ರಾಮದ ಶ್ರೀಭೀರಲಿಂಗೇಶ್ವರ ಡೊಳ್ಳಿನ ಸಂಘ ಮತ್ತು ಸಮಸ್ತ ಗ್ರಾಮಸ್ಥರೊಡನೆ ಸಕಲ ವಾಧ್ಯವೈಭವಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಯಲಿದೆ. ನಂತರ ಮಹಾಪ್ರಸಾದ ವಿತರಣೆಯಾಗಲಿದೆ. ಸಾಯಂಕಾಲ ೫ ಗಂಟೆಗೆ ಜಂಗಿ ನಿಕಾಲಿ ಕುಸ್ತಿಗಳು ಹಾಗೂ ರಾತ್ರಿ ೧೦.೩೦ ಗಂಟೆಗೆ ಸಿದ್ದು ಮೇಲಿನಮನಿ ಅವರ ದೀಪಕ ಮೆಲೋಡಿಸ್ ದೇವರಹಿಪ್ಪರಗಿ ಇವರಿಂದ ಸಂಗೀತ ಸಂಜೆ ಜರುಗಲಿದೆ.
ಮಹೋತ್ಸವದಲ್ಲಿ ಬೀದರ ಚಳಕಾಪೂರ ಮಠದ ಶಂಕರಾನAದ ಸ್ವಾಮೀಜಿ, ಜಾಲವಾದ ಗ್ರಾಮದ ಮಹಾಂತಲಿAಗ ಶ್ರೀ, ಬೋರಗಿ-ಪುರದಾಳದ ಮಹಾಲಿಂಗೇಶ್ವರ ಸ್ವಾಮೀಜಿ, ಕಡಕೋಳದ ಮಹಾಲಿಂಗ ಸ್ವಾಮೀಜಿ, ತೋಳನೂರಿನ ಸಿದ್ಧಯ್ಯಶಾಸ್ತಿç ಭಾಗವಹಿಸಲಿದ್ದಾರೆ ಎಂದು ಜಾತ್ರಾ ಕಮೀಟಿ ಪ್ರಕಟಣೆ ಮೂಲಕ ತಿಳಿಸಿದೆ.
