ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಇವತ್ತಿನ ಸಾಮಾಜಿಕ ಜಾಲತಾಣಗಳು ಹಾಗೂ ಪತ್ರಿಕೆಗಳ ಮೂಲಕ ಎಲ್ಲರಿಗೂ ತಿಳುವಳಿಕೆ ಬಂದಿದೆ ಡಾ|| ಬಿ.ಆರ್.ಅಂಬೇಡ್ಕರ ಅವರು ಮೂಲಭೂತ ಹಕ್ಕುಗಳನ್ನು ದೇಶದ ಜನರಿಗೆ ಕೊಡದೆ ಹೋಗಿದ್ದರೆ ನಾವ್ಯಾರು ಈ ವೇದಿಕೆ ಮೇಲೆ ಇರುತ್ತಿರಲಿಲ್ಲ ಅಸ್ಪೃಶ್ಯತೆ ಎನ್ನುವದು ಸಮಾಜಕ್ಕೆ ಅಂಟಿದ ಶಾಪ ಅದನ್ನು ಕಿತ್ತೊಗೆಯಬೇಕು ಅಂತಹ ತಪ್ಪನ್ನು ಇನ್ನೊಂದು ಬಾರಿ ಸಮಾಜ ಮಾಡಬಾರದು ಎಂದು ತಹಶೀಲ್ದಾರ್ ಎಸ್.ಎಸ್.ನಾಯ್ಕಲಮಠ ಹೇಳಿದರು.
ತಾಲೂಕಿನ ಮಸೂತಿ ಗ್ರಾಮದಲ್ಲಿ ನಡೆದ ಬಾಬಾ ಸಾಹೇಬ್ ಅಂಬೇಡ್ಕರ್ ೧೩೪ ನೇ ಜಯಂತಿಯ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಈ ದೇಶದ ಜನ ತಮ್ಮ ತಪ್ಪು ಭಾವನೆಗಳಿಂದ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅರ್ಥ ಮಾಡಿಕೊಂಡಿರಲಿಲ್ಲ ಈಗ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲ್ಲಿ ಸತ್ಯ ನಿಷ್ಠ ವರದಿಗಳು ಬರುತ್ತಿರುವದರಿಂದ ಸಂವಿಧಾನದ ಮೂಲ ಆಶಯ ಜನರಿಗೆ ತಿಳಿಯುವಂತಾಗಿದೆ ಎಂದರು.
ಕೂಡಗಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಬಸವರಾಜ ಜಾಲವಾದಿ ಮಾತನಾಡಿ ಸಮಗ್ರ ತಳ ಸಮುದಾಯಗಳು ತಮ್ಮ ಪಂಚೇAದ್ರಿಯಗಳನ್ನು ಸರಿಯಾದ ನಿಟ್ಟಿನಲ್ಲಿ ಬಳಸಿಕೊಂಡು ಶಿಕ್ಷಣ ಸಂಘಟನೆ ಹೋರಾಟದ ಕಡೆಗೆ ಗಮನಕೊಡಬೇಕು ಹೆಣ್ಣು ಮಕ್ಕಳಿಗೆ ಶಿಕ್ಷಣ ಕಡ್ಡಾಯವಾಗಿ ಕಲಿಸಬೇಕು, ಶಿಕ್ಷಣವು ನಿಜವಾಗಲೂ ಹುಲಿ ಹಾಲಿದ್ದಂತೆ ಅದನ್ನು ಕುಡಿದವರು ಗರ್ಜಿಸಿಯೇ ಘರ್ಜಿಸುತ್ತಾರೆ ಅದಕ್ಕೆ ಸಾಕ್ಷಿ ಅಂಬೇಡ್ಕರ್ ಎಂದರು.
ಮಸೂತಿಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಸ್.ಎಸ್.ಹೊಸಮಠ, ನವೀನ್ ಸಾಲಹಳ್ಳಿ ಕಾರ್ಯಕ್ರಮ ನಿರೂಪಿಸಿದರು. ರುದ್ರೇಶ್ ದೊಡ್ಡಮನಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಬಸವರಾಜ್ ವೀರಪ್ಪ ಚಲವಾದಿ ವಂದಿಸಿದರು. ಕಾರ್ಯಕ್ರಮದ ನಂತರ ಅಂಬೇಡ್ಕರ್ ಅವರ ಭಾವಚಿತ್ರವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಅನೇಕ ಪ್ರಮುಖರು ಉಪಸ್ಥಿತರಿದ್ದರು.

