Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೇಂದ್ರಸ್ಥಾನದಲ್ಲಿಯೇ ಗ್ರಾಮ ಆಡಳಿತಾಧಿಕಾರಿಗಳ ವಾಸ್ತವ್ಯ :ಸಿಎಂ
(ರಾಜ್ಯ ) ಜಿಲ್ಲೆ

ಕೇಂದ್ರಸ್ಥಾನದಲ್ಲಿಯೇ ಗ್ರಾಮ ಆಡಳಿತಾಧಿಕಾರಿಗಳ ವಾಸ್ತವ್ಯ :ಸಿಎಂ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

1,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇಶ | 9,834 ಮಂಜೂರಾದ ಹುದ್ದೆಗಳಿಗೆ ಲ್ಯಾಪ್‌ಟಾಪ್ ನೀಡಲು ಸರ್ಕಾರ ನಿರ್ಧಾರ |

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳು ತಮ್ಮ ವ್ಯಾಪ್ತಿಯ ಪಂಚಾಯಿತಿಯ ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯವಿದ್ದು, ರೈತರ ಕುಂದುಕೊರತೆಗಳನ್ನು ಆಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ನೂತನವಾಗಿ ಆಯ್ಕೆಯಾಗಿರುವ 1,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇಶ ನೀಡಿ ಮಾತನಾಡಿದ ಮುಖ್ಯಮಂತ್ರಿ, ಗ್ರಾಮ ಆಡಳಿತಾಧಿಕಾರಿಗಳ 9,834 ಮಂಜೂರಾದ ಹುದ್ದೆಗಳಿಗೆ ಲ್ಯಾಪ್‌ಟಾಪ್ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲನೇ ಹಂತದಲ್ಲಿ 4,000 ಲ್ಯಾಪ್ ಟಾಪ್ ಗಳನ್ನು ಇಂದು ನೀಡಲಾಗುತ್ತಿದೆ. ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಕೊಡುವುದಾಗಲಿ, ಭ್ರಷ್ಟಾಚಾರಕ್ಕಾಗಲಿ ಅವಕಾಶ ಕೊಡಬಾರದು ಎಂದು ಎಚ್ಚರಿಕೆ ನೀಡಿದರು.
ಕೃಷಿ ಲಾಭದಾಯಕ ವೃತ್ತಿಯಾಗಿ ಉಳಿದುಕೊಂಡಿಲ್ಲ. ಅನ್ನದಾತರು ನಾಡಿನ ಒಳಿತಿಗೆ ಕೆಲಸ ಮಾಡುತ್ತಿರುವವರು ಎಂಬ ಅರಿವಿರಬೇಕು. ರೈತರಿಗೆ ಭೂಮಿ ಬೀಟ್ ಕಾರ್ಯಕ್ರಮವನ್ನು ಸರ್ಕಾರ ಜಾರಿಗೆ ತಂದಿದೆ ಎಂದು ತಿಳಿಸಿದರು.
ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ. ಸದಾ ಇಷ್ಟೇ ಪಾರದರ್ಶಕ ನೇಮಕಾತಿ ನಡೆದರೆ ಅರ್ಹರಿಗೆ ಉದ್ಯೋಗ ದೊರೆಯುತ್ತದೆ, ಯೋಗ್ಯರು ಸರ್ಕಾರಿ ಸೇವೆಗೆ ದೊರೆತು ಸಮಾಜದ ಏಳಿಗೆ ಸಾಧ್ಯವಾಗುತ್ತದೆ. ಪ್ರಸ್ತುತ ಆರು ಲಕ್ಷ ಅರ್ಜಿಗಳಲ್ಲಿ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿಗಳು ಆಯ್ಕೆಯಾಗಿದ್ದು, ಆಯ್ಕೆಯಾಗಿರುವವರು ಪುಣ್ಯವಂತರು ಎಂದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿದ್ದೀರಿ. 9,834 ಒಟ್ಟು ಗ್ರಾಮ ಆಡಳಿತಾಧಿಕಾರಿಗಳಿದ್ದು, ಅದರಲ್ಲಿ 8,003 ಜನ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ 1,000 ಜನ ಸೇರ್ಪಡೆಯಾಗುತ್ತಿದ್ದಾರೆ. ಯಾವುದೇ ಗ್ರಾಮ ಆಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ. ಇಂದು ಆಯ್ಕೆಯಾದವರು ಸಾಧ್ಯವಾದಷ್ಟು ಮಟ್ಟಿಗೆ ಕೆಲಸ ಮಾಡುವ ಗ್ರಾಮಗಳಲ್ಲಿಯೇ ವಾಸ ಮಾಡುವುದು ಉತ್ತಮ ಎಂದು ತಿಳಿಸಿದರು.
ಗ್ರಾಮ ಆಡಳಿತಾಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ, ರೈತರಿಗೆ ಅನ್ಯಾಯವಾಗದಂತೆ ಕರ್ತವ್ಯ ನಿರ್ವಹಿಸಬೇಕು. ಜಮೀನಿನ ದಾಖಲಾತಿಗಳ ಹಾಗೂ ಸರ್ವೇಗಳು ಸಮರ್ಪಕವಾಗಿ ನಡೆದರೆ ಗ್ರಾಮಗಳಲ್ಲಿ ಭೂಮಿ ಕಲಹವಿಲ್ಲದೇ ಬಹುಮಟ್ಟಿಗೆ ನೆಮ್ಮದಿ ನೆಲಸಲು ಸಾಧ್ಯವಿದೆ. ಇಂದು ನೇಮಕಗೊಂಡಿರುವ ಗ್ರಾಮ ಆಡಳಿತಾಧಿಕಾರಿಗಳು ಉದಾಸೀನತೆಯ ಭಾವನೆಯನ್ನು ತಳೆಯದೇ ಪ್ರಾಮಾಣಿಕವಾಗಿ ದುಡಿಯಬೇಕು ಎಂದು ಕರೆ ನೀಡಿದರು.

ಹಿಂದಿನ ನೆನಪುಗಳಿಗೆ ಜಾರಿದ ಮುಖ್ಯಮಂತ್ರಿ

ಹಿಂದೆ ಗ್ರಾಮಗಳಲ್ಲಿ ಜಮೀನಿನ ವಿವರಗಳನ್ನು ಶಾನುಭೋಗರು ನೋಡಿಕೊಳ್ಳುತ್ತಿದ್ದರು. ಶಾನುಭೋಗರು ಎಂದರೆ ರೈತರಿಗೆ ಗುರುಗಳಿದ್ದಂತೆ. ಶಾನುಭೋಗರು ಹೇಳಿದ್ದೇ ಅಂತಿಮ ಎಂಬಂತಿತ್ತು. ಕೆಲವರು ಉತ್ತಮ ಕೆಲಸ ಮಾಡುತ್ತಿದ್ದರೆ, ಕೆಲವರು ಕಿತಾಪತಿಯನ್ನೂ ಮಾಡುತ್ತಿದ್ದರು. ಶಾನುಭೋಗರು ದಾಖಲೆ ಬರೆಯುತ್ತಿದ್ದರು. ಅವರು ಏನು ಬರೆದಿದ್ದರು ಎಂದು ಯಾರಿಗೂ ಓದಿ ಹೇಳುತ್ತಿರಲಿಲ್ಲ. 1978 ರಲ್ಲಿ ತಾಲ್ಲೂಕು ಮಂಡಳಿ ಚುನಾವಣೆಗೆ ನಿಂತಾಗ ನನ್ನ ತಂದೆ ಶಾನುಬೋಗರ ಬಳಿ ನನ್ನನ್ನು ಚುನಾವಣೆಗೆ ನಿಲ್ಲಿಸಬೇಕೋ ಬೇಡವೋ ಎಂದು ಕೇಳಿ ನಿಲ್ಲಬಾರದು ಎಂದು ಹಠ ಮಾಡಿದ್ದರು, ನಂತರ ನಾನು ಅವರ ಮಾತು ಕೇಳದೆ ಸ್ಪರ್ಧಿಸಿ ಗೆದ್ದಿದ್ದೆ. ಚುನಾವಣೆಗೆ ಆಗ ರೂ. 3,500 ಮಾತ್ರ ವೆಚ್ಚವಾಗಿತ್ತು ಎಂದು ಮುಖ್ಯಮಂತ್ರಿ ನೆನಪಿಸಿಕೊಂಡರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.