Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಷ್ಟಗಳನ್ನು ಮೆಟ್ಟಿ ನಿಲ್ಲುವ ಶಕ್ತಿ ಕೊಟ್ಟಿದ್ದು ಬಸವಣ್ಣ :ವೀಣಾ
(ರಾಜ್ಯ ) ಜಿಲ್ಲೆ

ಕಷ್ಟಗಳನ್ನು ಮೆಟ್ಟಿ ನಿಲ್ಲುವ ಶಕ್ತಿ ಕೊಟ್ಟಿದ್ದು ಬಸವಣ್ಣ :ವೀಣಾ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಹೆಣ್ಣು ಮಕ್ಕಳಿಗೆ ಕಷ್ಟದ ಬುತ್ತಿ ತಲೆಯ ಮೇಲೆ ಸದಾ ಇದ್ದೆ ಇರುತ್ತದೆ. ಆದರೆ, ಕಷ್ಟಗಳನ್ನು ಮೆಟ್ಟಿನಿಂತು ಬದುಕನ್ನು ಜಯಿಸಲು ಅಣ್ಣ ಬಸವಣ್ಣ ಹೆಣ್ಣು ಮಕ್ಕಳಿಗೆ ಶಕ್ತಿ ಕೊಟ್ಟಿದ್ದಾನೆ. ಆ ಶಕ್ತಿಯನ್ನು ಬಳಸಿ ಹುಟ್ಟಿದ ಮನೆಗೆ ಮತ್ತು ಕೊಟ್ಟ ಮನೆಗೆ ಕೀರ್ತಿ ತರುವ ಕೆಲಸವನ್ನು ಮಹಿಳೆಯರು ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹೇಳಿದರು.
ಜಮಖಂಡಿ ನಗರದ ಐತಿಹಾಸಿಕ ಓಲೇಮಠದ ಆಶ್ರಯದಲ್ಲಿ ಬಸವ ಜಯಂತಿ ನಿಮಿತ್ತ ಏ.15 ರಿಂದ ಏ.29 ರವರೆಗೆ ಹಮ್ಮಿಕೊಂಡಿರುವ ಶರಣರ ವಚನ ಪ್ರವಚನ ಮತ್ತು ಸದ್ಭಾವನಾ ಪಾದಯಾತ್ರೆ ಅಂಗವಾಗಿ ಹದಿನಾಲ್ಕನೆಯ ದಿನವಾದ ಸೋಮವಾರ ಸಂಜೆ ನಡೆದ ವಚನ ಜಾತ್ರಾ ಮಹೋತ್ಸವದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಮುಕ್ಕೋಟಿ ದೇವರಿಗೆ ಕೈಮುಗಿಯುವ ಬದಲಾಗಿ ಜೀವ ಕೊಟ್ಟ ತಂದೆ-ತಾಯಿಗೆ ದಿನಾಲು ಕೈಮುಗಿದು ಏನೇ ಬಂದರೂ ಮೆಟ್ಟಿ ನಿಲ್ಲುವ ಶಕ್ತಿ ಬರಲಿ ಎಂದು ಪ್ರಾರ್ಥಿಸಬೇಕು. ತಂದೆ-ತಾಯಿಯ ಆದರ್ಶಗಳನ್ನು ಪಾಲಿಸಬೇಕು ಎಂದರು. ಮಹಿಳೆಯನ್ನು ಭೂತಾಯಿ, ಗೋಮಾತೆ, ನದಿ ಇತ್ಯಾದಿಗಳಿಗೆ ಹೋಲಿಸಲಾಗುತ್ತದೆ. ಬಹುತೇಕ ಎಲ್ಲ ಹಬ್ಬಗಳು ಹೆಣ್ಣು ಮಕ್ಕಳಿಗಾಗಿ ಇವೆ. ಅದು ಈ ನಾಡಿನ ಸಂಸ್ಕೃತಿ ಮತ್ತು ಸಂಸ್ಕಾರ. ನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಹೊಣೆ ಮಹಿಳೆಯರ ಮೇಲಿದೆ ಎಂದರು.
ಓಲೇಮಠದ ಆನಂದ ದೇವರು ಶ್ರೀಗಳು ನೇತೃತ್ವ ವಹಿಸಿ ಮಾತನಾಡಿ, ‘ದ್ವೇಷ ಬಿಡು, ಪ್ರೀತಿ ಮಾಡು’ ಎಂಬ ತತ್ತ್ವವನ್ನು ಅಳವಡಿಸಿಕೊಳ್ಳಬೇಕು. ಒಂದು ಒಳ್ಳೆಯ ವಿಚಾರವನ್ನು ಮನಸ್ಸಿನಲ್ಲಿ ಇಟ್ಟುಕೊಂಡರೆ ತಲೆಯಲ್ಲಿನ ನೂರು ಕೆಟ್ಟ ವಿಚಾರಗಳು ದೂರವಾಗುತ್ತವೆ ಎಂದು ಆಶೀರ್ವಚನ ನೀಡಿದರು.
ಝುಂಜರವಾಡದ ಬಸವರಾಜೇಂದ್ರ ಶರಣರು ಪ್ರವಚನ ನುಡಿಗಳನ್ನು ಹಂಚಿಕೊಳ್ಳುತ್ತ ಮಾತನಾಡಿ, ಶರಣರು ತಮಗಾಗಿ ಬದುಕಲಿಲ್ಲ. ಬದಲಾಗಿ ನಮಗಾಗಿ ಬದುಕಿದರು. ಕಲ್ಯಾಣದಲ್ಲಿ 12ನೇ ಶತಮಾನದಲ್ಲಿ ನಡೆದದ್ದು ರಕ್ತಕ್ರಾಂತಿಯಲ್ಲ. ಅದು ಭಕ್ತಿಕ್ರಾಂತಿ. ವಚನ ಸಾಹಿತ್ಯವನ್ನು ಉಳಿಸಿಕೊಳ್ಳಲು ಶರಣರು ರಾತ್ರೋರಾತ್ರಿ ಕಲ್ಯಾಣವನ್ನು ತೊರೆದಿದ್ದರು ಎಂದರು.
ನಡೆದಾಡುವ ಕಂಪ್ಯೂಟರ್ ಎಂದೆ ಖ್ಯಾತರಾಗಿರುವ ಅಥಣಿಯ ಬಸವರಾಜ ಉಮರಾಣಿ ಮಾತನಾಡಿ, ಅಂಕಿ-ಸಂಖ್ಯೆಗಳ ಗುಣಾಕಾರ, ಭಾಗಾಕಾರ ಸಲೀಸಾಗಿ ಮಾಡಿ ತೋರಿಸಿದರು. ಯಾವಗಲೋ ಒಮ್ಮೆ ಭೇಟಿಯಾದಾಗ ನೀಡಿದವರ ಮೊಬೈಲ್ ಸಂಖ್ಯೆಯನ್ನು ಹೇಳಿ ಬೆರಗು ಮೂಡಿಸಿದರು. ಜನ್ಮ ದಿನಾಂಕ ಹೇಳಿದವರ ಹುಟ್ಟಿದ ದಿನದ ವಾರವನ್ನು ಥಟ್ಟನೆ ಹೇಳಿ ಎಲ್ಲರನ್ನು ವಿಸ್ಮಯಗೊಳಿಸಿದರು. ಮಕ್ಕಳ ಕೈಗೆ ಮೊಬೈಲ್ ಫೋನ್ ಕೊಡಬೇಡಿ, ಪುಸ್ತಕ ಕೊಡಿ ಎಂದು ಪಾಲಕರಲ್ಲಿ ಮನವಿ ಮಾಡಿದರು.
ಜಿ.ಪಂ. ಮಾಜಿ ಉಪಾಧ್ಯಕ್ಷ ಸುಶೀಲಕುಮಾರ ಬೆಳಗಲಿ ಮಾತನಾಡಿದರು.
ಮುತ್ತಿನಕಂತಿ ಹಿರೇಮಠದ ಶಿವಲಿಂಗ ಶ್ರೀಗಳು, ಮುತ್ತೂರಿನ ರಾಚೋಟೇಶ್ವರ ಮಠದ ಗುರುಸಿದ್ದೇಶ್ವರ ಮಹಾಸ್ವಾಮಿಗಳು, ಕಡಪಟ್ಟಿಯ ಜಗದೀಶ್ವರ ಮಠದ ಅಭಿನವ ರಾಚೋಟೇಶ್ವರ ದೇವರು ಶ್ರೀಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶಿವಯ್ಯ ನಾಗರಾಳಮಠ, ಪ್ರದೀಪ ಮಹಾಲಿಂಗಪುರಮಠ, ಮೊನಿಕಾ ಹಿರೇಮಠ, ರಾಜು ವಾರದ, ಶ್ರೀಶೈಲ ತೇಲಿ, ಸದಾಶಿವ ಸೊನ್ನದ, ಚನ್ನಪ್ಪ ಬಿರಾದಾರ, ಶಂಕರ ಜಾಲಿಗಿಡದ ಇತರರು ಇದ್ದರು.
ರಜನಿ ಕರಡಿ ವಚನ ಗಾಯನ ಸಾದರ ಪಡಿಸಿದರು. ಸಾನ್ವಿ ಅರಕೆ ನೃತ್ಯ ಪ್ರದರ್ಶಿಸಿದರು. ಗದುಗಿನ ಗವಾಯಿ ರವಿಕುಮಾರ ಬೆಣ್ಣೆ, ತಬಲಾ ವಾದಕ ಹನಮಂತ ಅಂಕದ ಸಂಗೀತ ಸೇವೆ ಸಲ್ಲಿಸಿದರು. ಶಿವಲೀಲಾ ಲಿಗಾಡಿ ಸ್ವಾಗತಿಸಿದರು. ಬಿಆರ್‌ಪಿ ದಾನಮ್ಮ ಪಂಚಕಟ್ಟಿಮಠ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.