ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಶಿವಶರಣ ಬಸವಣ್ಣನವರು ೧೨ ನೇ ಶತಮಾನದಲ್ಲಿಯೇ ಜಾತಿರಹಿತ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದು ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ್ದಾರೆ ಎಂದು ಪ್ರಾಚಾರ್ಯೆ ಆರ್.ಎಂ.ಮಿರ್ದೆ ಹೇಳಿದರು.
ನಗರದ ಬಿಎಲ್ಡಿಇ ಸಂಸ್ಥೆಯ ಎಸ್ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹನ್ನೆರಡನೇ ಶತಮಾನದಲ್ಲಿಯೇ ಸಮಾನತೆಯ ಬೀಜವನ್ನು ಬಿತ್ತಿ ಹೆಮ್ಮರವಾಗಿ ಬೆಳೆಯುವಂತೆ ಮಾಡಿದ ಮಹಾನ್ ವ್ಯಕ್ತಿ ಬಸವಣ್ಣ. ವಚನ ಸಾಹಿತ್ಯದ ಮೂಲಕ ಸಮಾಜದಲ್ಲಿ ಶಾಂತಿ, ಸಹಬಾಳ್ವೆ, ಸತ್ಯ ಮತ್ತು ಕಾಯಕ ನಿಷ್ಠೆಯನ್ನು ಸಾರಿದರು. ಸಮಾನ ಮನಸ್ಕರನ್ನು ಒಂದುಗೂಡಿಸಿ ಮನುಕುಲವನ್ನು ಎಚ್ಚರಗೊಳ್ಳುವಂತೆ ಮಾಡಿದರು. ಅವರಿಂದ ಕೇವಲ ವಚನ ಸಾಹಿತ್ಯವಷ್ಠೆ ಅಲ್ಲ ಕನ್ನಡ ಸಾಹಿತ್ಯವೂ ಶ್ರೀಮಂತಗೊAಡಿದೆ ಎಂದರು.
ಈ ವೇಳೆಯಲ್ಲಿ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ ದೊಡ್ಡಮನಿ ಮಾತನಾಡಿ ಹಿಂದೆ ಬಸವಣ್ಣ ಎಂದರೆ ಎಲ್ಲರೂ ಎತ್ತು ಎಂದು ಭಾವಿಸಿದ್ದರು. ಆದರೆ ಬಸವಣ್ಣ ಎಂದರೆ ಯಾರು ಎನ್ನುವುದನ್ನು ಪ.ಗು.ಹಳಕಟ್ಟಿ ಸಂಶೋಧನಾ ಕೇಂದ್ರ ವಚನ ಸಾಹಿತ್ಯವನ್ನು ಬೆಳಕಿಗೆ ತಂದಾಗಲೇ ಗೊತ್ತಾಗಿದ್ದು ಅವರೊಬ್ಬ ಸಂಸ್ಕೃತಿಕ ನಾಯಕ ಎನ್ನುವುದು ಎಂದರು.
ಬಸವ ರತ್ನ ಪ್ರಶಸ್ತಿ ಪುರಸ್ಕೃತ ಪ್ರೊ.ಆರ್.ಡಿ.ಜೋಶಿ ಮಾತನಾಡಿ, ಬಸವಣ್ಣವರ ಇತಿಹಾಸ ಬಗ್ಗೆ ವಿವರಿಸಿದರು.
ಡಾ.ಉಷಾದೇವಿ ಹಿರೇಮಠ ಮಾತನಾಡಿದರು.
ಡಾ.ಧಾನೇಶ್ವರಿ ಮೂಲಿಮನಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಉಪ ಪ್ರಾಚಾರ್ಯ ಡಾ.ಅನಿಲ ಬಿ ನಾಯಕ,ಪಿಯುಸಿ ಪ್ರಾಚಾರ್ಯ ಪ್ರೊ.ಸಿ.ಬಿ.ಪಾಟೀಲ್ ಐಕ್ಯೂಎಸಿ ಡೈರೆಕ್ಟರ್ ಡಾ.ಪಿ.ಎಸ್.ಪಾಟೀಲ್, ಪ್ರೊ.ವಿದ್ಯಾ ಪಾಟೀಲ, ಡಾ.ಮಹೇಶ ಕುಮಾರ ಕೆ, ಡಾ.ತರನ್ನುಮ್ ಜಬೀನ್ಖಾನ್, ಪ್ರೊ.ಶ್ರೀಧರ ಜೋಶಿ, ಡಾ.ಶ್ರೀಶೈಲ ಉಂಕಿ, ಪ್ರೊ.ಎಂ ಎಸ್ ಜೇವೂರ, ಡಾ.ಮಂಜುನಾಥ ಜ್ಯೋತಿ, ಡಾ.ಮಿಲನ ರಾಠೋಡ್, ಡಾ.ಅನೀಲ ಪಾಟೀಲ, ಪ್ರೊ.ಮಲಿಕ್ ಎಲ್ ಜಮಾದಾರ, ಡಾ.ಗಿರಿಜಾ ನಿಂಬಾಳ್, ಪ್ರೊ.ಶ್ರೀದೇವಿ ಬೈರವಾಡಗಿ, ಪ್ರೊ.ಭಾರತಿ ಕಾರಕಲ್, ಪ್ರೊ.ರೂಪಾ ಮೋಟಗಿ, ಪ್ರೊ.ಸಿ ಎನ್ ಕುನ್ನೂರ,ಡಾ.ಕೃಷ್ಣಾ ಮಂಡ್ಲಾ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತಿತರರು ಇದ್ದರು.

