Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಣ್ಣನವರ ತತ್ವಾದರ್ಶ ಅಳವಡಿಕೆಯಿಂದ ಸಾಮಾಜಿಕ ಬದಲಾವಣೆ
(ರಾಜ್ಯ ) ಜಿಲ್ಲೆ

ಬಸವಣ್ಣನವರ ತತ್ವಾದರ್ಶ ಅಳವಡಿಕೆಯಿಂದ ಸಾಮಾಜಿಕ ಬದಲಾವಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ಬಸವೇಶ್ವರ ಜಯಂತಿ ಆಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರತಿಯೊಬ್ಬರು ದಯೆ ಗುಣ ಬೆಳೆಸಿಕೊಳ್ಳಬೇಕು ಎಂದು ಬಸವಣ್ಣನವರು ಬುದ್ಧ ಕರುಣೆಯ ಮಹತ್ವವನ್ನು ಸಾರಿದವರು. ಸಮಾಜದ ಅಂಕುಡೊಂಕುಗಳನ್ನು ತಿದ್ದಿದ, ಬಸವಣ್ಣನವರ ತತ್ವಾದರ್ಶಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಾಮಾಜಿಕ ಬದಲಾವಣೆ ತರಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಬುಧವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಾತಿ ವ್ಯವಸ್ಥೆ ಹೊಡೆದೊಡಿಸಲು ಶರಣರು ವಚನಗಳ ಮೂಲಕ ಸಾರಿದ್ದಾರೆ. ೧೨ನೇ ಶತಮಾನದಲ್ಲಿಯೇ ಪ್ರಜಾಪ್ರಭುತ್ವದ ತತ್ವಗಳನ್ನು ಜನಸಾಮಾನ್ಯರಿಗೆ ತಿಳಿಸಿ, ಸಮಸಮಾಜ ಕನಸು ಕಂಡ ಬಸವಣ್ಣನವರು, ಕಾಯಕವೇ ಕೈಲಾಸ ಎಂದು ಸಾರಿದರು. ಸಂಸ್ಕೃತಿ, ರೀತಿ-ನೀತಿಗಳ ಬಗ್ಗೆಯೂ ಅವರ ವಚನಗಳು ಬೆಳಕು ಚೆಲ್ಲುತ್ವವೆ. ಅವರ ಆದರ್ಶ ವಿಚಾರಗಳು, ವಚನಗಳ ಸಾರ ಅರಿತುಕೊಂಡು ನಾವು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಂಜುನಾಥ ಜುನಗೊಂಡ ವಿಶೇಷ ಉಪನ್ಯಾಸ ನೀಡಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ವಿ ಸಿ ನಾಗಠಾಣ ಅವರು ಮಾತನಾಡಿದರು.
ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಿ.ಎಸ್ ರಾಠೋಡ ಮಹಾನಗರ ಪಾಲಿಕೆ ವಲಯ ಆಯುಕ್ತರಾದ ಮಹಾವೀರ ಬೋರಣ್ಣವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವಿಶ್ವಗುರು ಪ್ರತಿಮೆಗೆ ಮಾಲಾರ್ಪಣೆ

ಬುಧವಾರ ಬೆಳಿಗ್ಗೆ ವಿಜಯಪುರ ನಗರದ ಬಸವೇಶ್ವರ ವೃತ್ತದಲ್ಲಿರುವ ವಿಶ್ವಗುರು ಬಸವಣ್ಣನವರ ಪ್ರತಿಮೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಭವ್ಯ ಮೆರವಣಿಗೆಗೆ ಚಾಲನೆ

ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಚಾಲನೆ ನೀಡಿದರು.
ಭವ್ಯ ಮೆರವಣಿಗೆಯು ವಿವಿಧ ಜಾನಪದ ಕಲಾ ತಂಡದೊಂದಿಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಸಾಗಿ ಸಮಾವೇಶಗೊಂಡಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.