ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಘೋಷಣೆಯ ವರ್ಷಾಚರಣೆ ನಿಮಿತ್ಯ ಬರುವ ಜೂನ್ ತಿಂಗಳಲ್ಲಿ ಅಮ್ಮ ಫೌಂಡೇಶನ್ ವತಿಯಿಂದ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗುತ್ತಿದ್ದು, ಸಾಧಕರ ಸನ್ಮಾನ ಹಾಗೂ ಜಿಲ್ಲೆಯ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ.
೧೨ನೇ ಶತಮಾನದಲ್ಲಿ ವಿರಾಜಮಾನರಾಗಿದ್ದ ಅಣ್ಣ ಬಸವಣ್ಣನವರ ನಡೆ ನುಡಿ, ಕಾಯಕನಿಷ್ಠೆ, ಸಮಸಮಾಜಕ್ಕಾಗಿ ನೀಡಿದ ಕೊಡುಗೆ ಸ್ಮರಣೆಗಾಗಿ ಬಸವಣ್ಣನವರನ್ನು ಸ್ಮರಿಸಬೇಕಾಗಿದೆ. ಯುವ ಜನಾಂಗದಲ್ಲಿ ಬಸವಣ್ಣನವರ ಆದರ್ಶ ತತ್ವಗಳನ್ನು ಬಿತ್ತಬೇಕಾಗಿದೆ. ರಾಜ್ಯ ಸರಕಾರ ವಿಶ್ವ ಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯನ್ನಾಗಿ ಮಾಡಿರುವ ಸ್ಮರಣೆಗಾಗಿ ವಿಜಯಪುರ ನಗರದ ಕಂದಗಲ್ ಹನುಮಮಂತರಾಯ ರಂಗಮಂದಿರದಲ್ಲಿ ರಾಜ್ಯ ಮಟ್ಟದ ಬಸವ ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗುತ್ತಿದೆ. ವಿವಿಧ ಕ್ಷೇತ್ರಗಳಲ್ಲಿ ತಮ್ಮದೆ ಆದ ನಿಸ್ವಾರ್ಥ ಸೇವೆ ಸಲ್ಲಿಸಿ ಎಲೆಮರೆ ಕಾಯಿಯಾಗಿ ಸಮಾಜಮುಖಿಯಾಗಿರುವ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಗುತ್ತಿದೆ. ನಾಡಿನ ಹಿರಿಯ ಸಾಹಿತಿಗಳು, ಬಸವ ತತ್ವ ಪ್ರಚಾರಕರ ಸಮ್ಮುಖದಲ್ಲಿ ಕಾರ್ಯಕ್ರಮ ಜರುಗಲಿದೆ. ಅದಕ್ಕಾಗಿ ಸಾಧಕ ಪ್ರಶಸ್ತಿಗೆ ಮಾಹಿತಿ ನೀಡುವವರು ಮೇ ೨೯ರ ಒಳಗಾಗಿ ತಮ್ಮ ಸ್ವ-ವಿವರ ಮಾಹಿತಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಬೇಕು. ಪ್ರತಿಭಾ ಪುರಸ್ಕಾರಕ್ಕಾಗಿ ತಮ್ಮ ಅಂಕಪಟ್ಟಿಯೊAದಿಗೆ ತಮ್ಮ ಸಂಪೂರ್ಣ ವಿಳಾಸ ಹಾಗೂ ಮೊಬೈಲ್ ಸಂಖ್ಯೆ ನಮೂದಿಸಿ, ಮೊಬೈಲ್ ಸಂಖ್ಯೆ ೯೯೭೨೧೧೫೫೦೨ ಅಥವಾ ೮೨೧೭೦೬೫೩೩೧ ಕಳಿಸಬೇಕು ಎಂದು ಅಮ್ಮ ಫೌಂಡೇಶನ್ ಪ್ರಧಾನಕಾರ್ಯದರ್ಶಿ ಹುಸೇನ್ ಕೊಕಟನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
