ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ಹೊರವಲಯದಲ್ಲಿರುವ ಜೇವರ್ಗಿ ಬೈಪಾಸ್ ಹತ್ತಿರ ಸರ್ಕಾರಿ ಬಸ್ ಹಾಗೂ ಕಾರಿನ ಮಧ್ಯ ಅಪಘಾತವಾಗಿದ್ದು, ನಾಲ್ಕು ಜನರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದು ಬಂದಿದೆ. ಸರ್ಕಾರಿ ಬಸ್ ಚಾಲಕನ ನಿರ್ಲಕ್ಷತೆಯಿಂದ ಈ ಅಪಘಾತವಾಗಿದ್ದು ಕಂಡು ಬಂದಿದೆ. ಘಟನಾ ಸ್ಥಳಕ್ಕೆ ಹೈವೇ ಪೆಟ್ರೋಲಿಯಂ ಪೊಲೀಸ್ ಗಸ್ತು ವಾಹನ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ಸಿಂದಗಿ ಪಿಎಸ್ಐ ಆರೀಫ್ ಮುಶಾಪುರಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಘಟನೆ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

