ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಜಗದ್ಗುರು ಸಿದ್ಧಲಿಂಗ ರಾಖದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳು ಶ್ರೀ ಉಜ್ಜಯಿನಿ ಮಹಾಪೀಠ ಇವರ ದಿವ್ಯ ಸಾನಿಧ್ಯದಲ್ಲಿ ಇತ್ತೀಚಗೆ ಹಮ್ಮಿಕೊಂಡ ಶ್ರೀ ಜಗದ್ಗುರು ಮರುಳಸಿದ್ಧೇಶ್ವರ ಸ್ವಾಮಿಯ ತೈಲಾಭಿಷೇಕ, ಸದ್ಧರ್ಮ ಜನಜಾಗೃತಿ ಧರ್ಮ ಸಮಾರಂಭದಲ್ಲಿ ಉಜ್ಜಯಿನಿ ಸದ್ಧರ್ಮ ಪೀಠದಿಂದ ಕೊಡಮಾಡುವ ಸದ್ಧರ್ಮ ಶಿರೋಮಣಿ ಪ್ರಶಸ್ತಿಯನ್ನು ಸಿಂದಗಿ ಸಾರಂಗಮಠದ ಪೀಠಾಧಿಪತಿ, ಗುರುಕುಲ ಭಾಸ್ಕರ್, ಪಂಚಾಚಾರ್ಯಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರಿಗೆ ಅಲ್ಲಿ ಸಮ್ಮೇಳನಗೊಂಡ ಶಿವಾಚಾರ್ಯರ ಸಮ್ಮುಖದಲ್ಲಿ ಉಜ್ಜಯಿನಿ ಜಗದ್ಗುರು ಮಹಾಸನ್ನಿಧಿಯವರು ಪ್ರಶಸ್ತಿ ಪ್ರದಾನ ಮಾಡಿ ಆಶೀರ್ವದಿಸಿದರು.
ಈ ವೇಳೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಯಂಕAಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ಕನ್ನೊಳ್ಳಿಯ ಸಿದ್ದಲಿಂಗ ಶಿವಾಚಾರ್ಯರು ಸೇರಿದಂತೆ ಹರಗುರು ಚರಮೂರ್ತಿಗಳು ಇದ್ದರು.