ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಘೋಷಣೆ ಮಾಡಿದ್ದ ಸಹಾಯಧನ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸದಾ ಹಿಂದುತ್ವ, ಹಿಂದೂಗಳ ಪರವಾಗಿ ಗಟ್ಟಿಯಾಗಿ ನಿಲ್ಲುವ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು, ಈಚೆಗೆ ಮಂಗಳೂರಿನಲ್ಲಿ ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ, ಕುಟುಂಬವರಿಗೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ರೂ.5 ಲಕ್ಷ ಸಹಾಯ ಧನ ನೀಡುವುದಾಗಿ ಘೋಷಿಸಿದಂತೆ, ಮಂಗಳವಾರ ತಮ್ಮ ಆಪ್ತ ಸಹಾಯಕರ ಮೂಲಕ ಸಹಾಯಧನ ಚೆಕ್ ನ್ನು ನೀಡಿದರು.
ಬಂಟ್ವಾಳ ತಾಲ್ಲೂಕಿನ ಕಾರಿಂಜ ಗ್ರಾಮದಲ್ಲಿರುವ ತೋಟದ ಮನೆಗೆ ಭೇಟಿ ನೀಡಿ, ಸುಹಾಸ್ ಶೆಟ್ಟಿ ಅವರ ತಂದೆ-ತಾಯಿ ಅವರಿಗೆ ಸಾಂತ್ವನ ಹೇಳಿ ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕರಾದ ಪಿ.ಜಿ.ಕೆಂಗನಾಳ, ಉಮೇಶ ಕೋರೆ, ಯಲಗೊಂಡ ಬಾಗಾದಿ, ಮುಖಂಡರಾದ ದಾದಾಸಾಹೇಬ ಬಾಗಾಯತ, ಸಚಿನ ಕೋರಿ ಸೇರಿದಂತೆ ಸ್ಥಳೀಯ ಹಿಂದೂ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.