ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೧೧೦/೧೧ ಕೆ.ವ್ಹಿ ಮಮದಾಪುರ, ಬೆಳ್ಳುಬ್ಬಿ, ಶಿರಬೂರ, ದೇವರಗೆಣ್ಣೂರ, ನಿಡೋಣಿ ಹಾಗೂ ಕಂಬಾಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೆಯ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯಲಿದೆ.
೧೧೦/೧೧ ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುವ ೩೩/೧೧ಕೆ.ವ್ಹಿ ದೇವರಗೆಣ್ಣೂರ, ೩೩/೧೧ ಕೆ.ವ್ಹಿ ಲಿಂಗದಳ್ಳಿ ಎಲ್.ಐ.ಎಸ್ ಹಾಗೂ ಎಲ್ಲ ೧೧ ಕೆ.ವ್ಹಿ ವಿದ್ಯುತ್ ಮಾರ್ಗಗಳಲ್ಲಿ ಮೇ.೦೮ರ ಬೆಳಿಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೩ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.