ಉದಯರಶ್ಮಿ ದಿನಪತ್ರಿಕೆ
ಇಂಡಿ: ಪಟ್ಟಣದ ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗಾಗಿ ಸರಕಾರ ಯುವಜನ ಹಾಗೂ ಕ್ರೀಡಾ ಇಲಾಖೆಯ ಮೂಲಕ ಒಂದು ಕೋಟಿ ರೂಪಾಯಿ ಅನುದಾನ ನೀಡಿದ್ದು ಕ್ರೀಡಾಪಟುಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಲ್ಲಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಯಶವಂತರಾಯ ಗೌಡ ಪಾಟೀಲ ತಿಳಿಸಿದರು.
ಅವರು ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕ ಕ್ರೀಡಾಂಗಣದ ಅಭಿವೃದ್ಧಿಯ ಕುರಿತು ಹಮ್ಮಿಕೊಂಡ ಸಭೆಯಲ್ಲಿ ಮಾತನಾಡಿದರು,
ತಾಲೂಕಿನ ಕ್ರೀಡಾಪಟುಗಳಿಗೆ ಅನುಕೂಲವಾಗುವ ರೀತಿಯಲ್ಲಿ ಯೋಜನೆಗಳನ್ನು ರೂಪಿಸಿ ಎಂದು ಸಲಹೆ ನೀಡಿದರು.
ಕ್ರಿಕೆಟ್, ಹಾಕಿ, ಫುಟ್ಬಾಲ್,ವಾಲಿಬಾಲ್, ಸೇರಿದಂತೆ ಇಂಡೋರ್ ಹಾಗೂ ಔಟ್ ಡೋರ್ ಆಟಗಳನ್ನು ಆಡಿಸಲು ಪ್ರಯತ್ನಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಅಂಕ ಕ್ರೀಡಾಂಗಣ ಕ್ರೀಡಾಪಟುಗಳಿಗೆ ಅನುಕೂಲವಾಗಬೇಕು ವಿದ್ಯಾರ್ಥಿಗಳು ಹಾಗೂ ಹಿರಿಯರು ಅಲ್ಲಿ ಬಂದು ಕಾಲ ಕಳೆಯುವಂತಹ ವಾತಾವರಣ ನಿರ್ಮಾಣ ಆಗಬೇಕು.
ಬೇರೆ ಬೇರೆ ತಾಲೂಕುಗಳು ಜನ ಇಂಡಿ ಕ್ರೀಡಾಂಗಣ ನೋಡಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವಂತೆ ಮಾದರಿ ಕ್ರೀಡಾಂಗಣ ಮಾಡಲು ಸೂಚಿಸಿದರು.
ಈ ಸಂದರ್ಭದಲ್ಲಿ ಯುವಜನ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಗಿ, ಪುರಸಭೆ ಮುಖ್ಯ ಅಧಿಕಾರಿ ಮಹಾಂತೇಶ ಹಂಗರಗಿ, ತಾಲೂಕ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ನಂದಿಪ ರಾಥೋಡ್, ತಾಲೂಕ ಕ್ರೀಡಾ ಅಧಿಕಾರಿ ಸಿ ಎಸ್ ವಾಲಿಕಾರ್, ಬಿ ಇ ಓ ಟಿ ಎಸ್ ಆಲಗೂರ, ಶಹರ ಠಾಣೆಯ ಸಿಪಿಐ ಪ್ರದೀಪ್ ಬಿಸೆ ಉಪಸ್ಥಿತರಿದ್ದರು.