ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ವಿಜಯಪುರ ಜಿಲ್ಲಾ ಘಟಕದಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಪ್ರಕಾಶ ಬೆಣ್ಣೂರ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಡಿ.ಬಿ.ವಡವಡಗಿ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
2024-25 ನೇ ಸಾಲಿನ ಎಸ್ ಎಸ್ .ಎಲ್ .ಸಿ ಮತ್ತು ಪಿ.ಯು.ಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಶೇಕಡ 60 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಘದ ಸದಸ್ಯತ್ವದ ಕಾರ್ಡು, ವಿದ್ಯಾರ್ಥಿ/ ವಿದ್ಯಾರ್ಥಿನಿಯರ ಅಂಕುಪಟ್ಟಿ ಕಾರ್ಡು ಜೆರಾಕ್ಸ್ ಪ್ರತಿ ಹಾಗೂ ಎರಡು ಭಾವಚಿತ್ರಗಳು ಜುಲೈ 5 ರೊಳಗೆ ತಮ್ಮ ಅರ್ಜಿಯನ್ನು ಖುದ್ದಾಗಿ ವಿಜಯಪುರ ನಗರದ ಜಿಲ್ಲಾಪಂಚಾಯಿತಿ ಕಚೇರಿ ರಸ್ತೆಯ ಪತ್ರಿಕಾ ಭವನದಲ್ಲಿ ಸಲ್ಲಿಸಲು ಕೋರಲಾಗಿದೆ. ಮತ್ತು ಕೊರಿಯರ್ ಹಾಗೂ ಅಂಚೆ ಕಚೇರಿ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು, ಹೆಚ್ಚಿನ ಮಾಹಿತಿಗಾಗಿ ಕೆಯುಡಬ್ಲ್ಯೂಜೆ ಜಿಲ್ಲಾ ಕಾರ್ಯದರ್ಶಿ ಮೋಹನ ಕುಲಕರ್ಣಿ ಇವರ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರರವು ಜುಲೈ 13 ರಂದು ಪತ್ರಿಕಾ ದಿನಾಚರಣೆಯ ಕಾರ್ಯಕ್ರಮದೊಂದು ನೀಡಲಾಗುವುದು ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ,