ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಈಚೆಗೆ ಭೂಮಿಪೂಜೆ ನೆರವೇರಿಸಿ, ಸಾರ್ವಜನಿಕರಿಂದ ಅಹವಾಲು ಆಲಿಸಿದರು.
ನಗರದ ಗೋದಾವರಿ ಹೋಟೆಲ್ ದಿಂದ ಸೈನಿಕ ಸ್ಕೂಲ್ ಮುಂಭಾಗದ ಜಿಲ್ಲಾ ಆಸ್ಪತ್ರೆಯ ವರೆಗೆ ರೂ.1.30 ಕೋಟಿ ಅನುದಾನದಲ್ಲಿ ಮುಖ್ಯ ರಸ್ತೆಯ ಸಮಾನಾಂತರ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದ ಹತ್ತಿರ ಭೂಮಿಪೂಜೆ ನೆರವೇರಿಸಿದರು.
ವಿಜಯಪುರ ನಗರದ ವಾರ್ಡ್ ನಂ.13 ರಲ್ಲಿ ಬರುವ ಬಾರಾಕಮಾನ್ ಹಿಂದಿನ ಭಾಗದ ಹಾಗೂ ಕಲಾದಗಿ ಗಲ್ಲಿಯಲ್ಲಿ ರೂ.50 ಲಕ್ಷ ಅನುದಾನದಲ್ಲಿ ಆಂತರಿಕ ಸಿಸಿ ರಸ್ತೆ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿದೆ. ನಂತರ ವಾರ್ಡ್ ನಂ.11 ರಲ್ಲಿ ಬರುವ ಕುಲ್ಲೋಳ್ಳಿ ಪೆಟ್ರೋಲ್ ಪಂಪ್ ದಿಂದ ಅಟಲ್ ಬಿಹಾರಿ ವಾಜಪೇಯಿ ರಸ್ತೆಯವರೆಗೆ ರೂ.50 ಲಕ್ಷ ಅನುದಾನದಲ್ಲಿ ಆಂತರಿಕ ಸಿಸಿ ರಸ್ತೆ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಭೂಮಿಪೂಜೆ ಬಳಿಕ ಕೆಲಹೊತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಶಾಸಕರು, ಸ್ಥಳದಲ್ಲೇ ಹಲವು ಸಮಸ್ಯೆಗಳಿಗೆ ಸಂಬಂಧಿಸಿದವರಿಂದ ಪರಿಹಾರ ಕಲ್ಪಿಸಿದರು. ಇದೇ ವೇಳೆ ಶಾಸಕರನ್ನು ಆತ್ಮೀಯವಾಗಿ ಸನ್ಮಾನಿಸಿದರು.
ಬಿಜೆಪಿ ನಗರ ಮಂಡಲ ಮಾಜಿ ಅಧ್ಯಕ್ಷ ಶಂಕರ ಹೂಗಾರ, ಮಹಾನಗರ ಪಾಲಿಕೆ ಸದಸ್ಯರಾದ ವಿಠ್ಠಲ ಹೊಸಪೇಟ, ಕಿರಣ ಪಾಟೀಲ, ರಾಜಶೇಖರ ಕುರಿಯವರ, ಮುಖಂಡರಾದ ರಾಜೇಶ ದೇವಗಿರಿ, ಅಶೋಕ ಬೆಲ್ಲದ, ಲಕ್ಷ್ಮಣ ಜಾಧವ, ರಾಜಶೇಖರ ಭಜಂತ್ರಿ, ವಿಠ್ಠಲ ನಡುವಿನಕೇರಿ, ದತ್ತಾ ಗೋಲಾಂಡೆ, ಉಮೇಶ ವೀರಕರ, ನಾಗರಾಜ ಮುಳವಾಡ ಸೇರಿದಂತೆ ಹಿರಿಯ ನಾಗರಿಕರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು, ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.