Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಪ್ರೇಕ್ಷಣಿಯ ಸ್ಥಳಗಳ ಪ್ರವಾಸ ಯೋಜನೆ
(ರಾಜ್ಯ ) ಜಿಲ್ಲೆ

ವಿಜಯಪುರ ಪ್ರೇಕ್ಷಣಿಯ ಸ್ಥಳಗಳ ಪ್ರವಾಸ ಯೋಜನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಹಯೋಗದಲ್ಲಿ ವಿನೂತನವಾಗಿ ಆಯೋಜಿಸಲಾದ ಒಂದು ದಿನದ ಪ್ರೇಕ್ಷಣೀಯ ಸ್ಥಳಗಳ ಪ್ರವಾಸದ ವಿನೂತನ ವಿಜಯ ರಥಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಶುಕ್ರವಾರ ಚಾಲನೆ ನೀಡಿದರು.
ಶುಕ್ರವಾರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಿಜಯ ರಥ ಬಸ್‌ಗೆ ಅವರು ಚಾಲನೆ ನೀಡಿದರು.
ವಿಜಯ ರಥ ಬಸ್ ಪ್ರತಿದಿನ ಬೆಳಿಗ್ಗೆ ೯ ಗಂಟೆಗೆ ಕೇಂದ್ರ ಬಸ್ ನಿಲ್ದಾಣದಿಂದ ಹೊರಟು, ನಗರದ ಇಬ್ರಾಹಿಂ ರೋಜಾ ಸ್ಮಾರಕ, ಶ್ರೀ ಲಕ್ಷ್ಮಿ ದೇವಸ್ಥಾನ ತೊರವಿ, ೧೦೦೮ ಸಹಸ್ರಫಣಿ ಶ್ರೀ ಪಾರ್ಶ್ವನಾಥ ಜೈನ ಬಸದಿ, ಮಲೀಕ-ಇ-ಮೈದಾನ ತೋಪ್, ಬಾರಾಕಮಾನ, ಗಗನ್ ಮಹಲ್, ಜಾಮೀಯಾ ಮಸೀದಿ, ಶಿವಗಿರಿ-ಶಿವನ ಮೂರ್ತಿ, ಗೋಳಗುಮ್ಮಟ, ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿ ಮರಳಿ ಸಂಜೆ ೪ ಗಂಟೆಗೆ ಕೇಂದ್ರ ಬಸ್ ನಿಲ್ದಾಣಕ್ಕೆ ಆಗಮಿಸಲಿದ್ದು, ಮಧ್ಯಾಹ್ನ ೧೧ ಗಂಟೆಗೆ ಚಹಾ-ಉಪಹಾರಕ್ಕಾಗಿ ೧೫ ನಿಮಿಷ ಹಾಗೂ ಮಧ್ಯಾಹ್ನ ೧-೩೦ ಗಂಟೆಗೆ ವಿಶ್ರಾಂತಿಗೆ ೩೦ ನಿಮಿಷ ಅವಕಾಶ ಕಲ್ಪಿಸಲಾಗಿದೆ.
ಈ ಒಂದು ದಿನದ ಪ್ರೇಕ್ಷಣಿಯ ಸ್ಥಳಗಳ ಪ್ರವಾಸದ ವಿಜಯ ರಥ ಬಸ್‌ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಪ್ರವಾಸಿ ಮಾರ್ಗದರ್ಶಿಗಳ ಮೂಲಕ ಪ್ರವಾಸಿ ತಾಣಗಳ ಮಾಹಿತಿ, ಪ್ರವಾಸಿ ತಾಣಗಳಿಗೆ ತಡೆ ರಹಿತ ಭೇಟಿ, ಸುರಕ್ಷಿತ ಪ್ರಯಾಣದೊಂದಿಗೆ ಪ್ರವಾಸ, ನೀರಿನ ಬಾಟಲ್, ಚಹಾ, ಸ್ನ್ಯಾಕ್ಸ್ ಸೌಲಭ್ಯ, ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಬಸ್ ಪ್ರಯಾಣಕ್ಕೆ ಮಾತ್ರ ಉಚಿತ ಅವಕಾಶ ಹಾಗೂ ಮುಂಚಿತವಾಗಿ ಕಾಯ್ದಿರಿಸುವ (ಬಸ್ ಟಿಕೆಟ್ ಬುಕ್ಕಿಂಗ್ : ೭೭೬೦೯೧೪೦೦೮, ೦೮೩೫೨-೨೫೦೩೫೯) ಸೌಲಭ್ಯ ಒದಗಿಸಲಾಗಿದೆ. ೧೨ ವರ್ಷ ಒಳಗಿನ ಬಾಲಕಿಯರಿಗೆ ೧೨೫ ರೂ., ಬಾಲಕರಿಗೆ ೧೭೫ ರೂ., ೧೨ ವರ್ಷ ಮೇಲ್ಪಟ್ಟ ಬಾಲಕಿಯರು ಹಾಗೂ ಮಹಿಳೆಯರಿಗೆ ೧೬೦ ರೂ., ಬಾಲಕರು ಹಾಗೂ ಪುರುಷರಿಗೆ ೩೩೦ ರೂ. ಮತ್ತು ವಿದೇಶಿಯರಿಗೆ ೯೦೦ ರೂ. ದರವನ್ನು ನಿಗದಿಪಡಿಸಲಾಗಿದೆ.
ಈ ಸಂದರ್ಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೋಂಡ, ಧಾರವಾಡದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ ಮುಶ್ರೀಫ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಕೆ.ಕೆ.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಪ್ರವಾಸೋದ್ಯಮ ಇಲಾಖೆ ಪ್ರಭಾರಿ ಉಪನಿರ್ದೇಶಕ ಸಂತೋಷ ಭೋವಿ ಸೇರಿದಂತೆ ವಿವಿಧ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.