Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಭಿವೃದ್ಧಿಯಿಂದ ವಿಜಯಪುರದ ಆಸ್ತಿಗಳ ಮೌಲ್ಯ ಹೆಚ್ಚಳ
(ರಾಜ್ಯ ) ಜಿಲ್ಲೆ

ಅಭಿವೃದ್ಧಿಯಿಂದ ವಿಜಯಪುರದ ಆಸ್ತಿಗಳ ಮೌಲ್ಯ ಹೆಚ್ಚಳ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೂ.10 ಕೋಟಿ ಕಾಮಗಾರಿಗೆ ಭೂಮಿಪೂಜೆ | ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಲ್ಲಿ ಕಳೆದ ಏಳು ವರ್ಷಗಳಲ್ಲಿ ಗುಣಮಟ್ಟದ ರಸ್ತೆಗಳು, ಚರಂಡಿ ನಿರ್ಮಾಣ, ಕಸ ವಿಲೇವಾರಿ ಹೀಗೆ ಪ್ರತಿಯೊಂದರಲ್ಲಿಯೂ ಆಗಿರುವ ಅಭಿವೃದ್ಧಿ ಕಾರ್ಯಗಳಿಂದ ನಗರದ ಸೌಂದರ್ಯಕರಣದ ಜೊತೆಗೆ ಆಸ್ತಿಗಳ ಮೌಲ್ಯ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಏಕತಾ ನಗರದ ಶ್ರೀ ಸಿದ್ದಿ ವಿನಾಯಕ ದೇವಸ್ಥಾನ ಹತ್ತಿರ ಭಾನುವಾರ ನಗರ ಮತಕ್ಷೇತ್ರದ ವ್ಯಾಪ್ತಿಯ ತೊರವಿ ಗ್ರಾಮ ಪಂಚಾಯಿತಿಯಲ್ಲಿ ಬರುವ ನವರಸಪುರದ ವಿವಿಧ ಕಾಲೊನಿಗಳಲ್ಲಿ ಆರ್.ಡಿ.ಪಿ.ಆರ್ ಇಲಾಖೆಯಿಂದ ಮಂಜೂರಿಸಿದ ರೂ.10 ಕೋಟಿ ಅನುದಾನದಲ್ಲಿ ಆಂತರಿಕ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ನಗರದಲ್ಲಿ ಅಮಾಯಕರ ಆಸ್ತಿಗಳನ್ನು ಕಬಳಿಸುವ ಲಪುಟರಿದ್ದಾರೆ. ತಮ್ಮ ಉತಾರೆಗಳನ್ನು ಆಗಾಗ ಪರಿಶೀಲಿಸಿ, ಆನಲೈನ್ ದಲ್ಲೂ ನೋಡಲು ಅವಕಾಶವಿದೆ. ಅಲ್ಲದೆ, ಸಾರ್ವಜನಿಕರ ಉಪಯೋಗಕ್ಕೆ ಮೀಸಲಿಟ್ಟ ಜಾಗೆಗಳನ್ನು ಸಹ ಪುಡಾರಿಗಳು ಕಬಳಿಸಲು ಯತ್ನಿಸುತ್ತಿದ್ದು, ತಮ್ಮ ಗಮನಕ್ಕೆ ಬಂದ ತಕ್ಷಣ ಶಾಸಕರ ಕಚೇರಿಗೆ ತಿಳಿಸಿ, ಕ್ರಮ ಕೈಗೊಳ್ಳಲಾಗುವುದು. ವಿಜಯಪುರ ನಗರದಲ್ಲಿ ನಾವು ಆರಂಭಿಸಿದ ವಕ್ಫ್ ವಿರುದ್ಧ ಹೋರಾಟ ಇಡೀ ದೇಶಕ್ಕೆ ಮುನ್ನುಡಿ ಆಯಿತು. ಇದರಿಂದ ಅಮಾಯಕರ, ಮಠ ಮಾನ್ಯಗಳ ಮತ್ತು ಸರ್ಕಾರಿ ಆಸ್ತಿಗಳನ್ನು ಉಳಿಸಿಕೊಳ್ಳಲು ಸಾಧ್ಯವಾಯಿತು ಎಂದು ಹೇಳಿದರು.
ನಗರದಲ್ಲಿ ಎಲ್ಲ ಬಡಾವಣೆ/ಕಾಲೊನಿಗಳಲ್ಲಿ ಹಂತ ಹಂತವಾಗಿ ರಸ್ತೆ, ಚರಂಡಿ ಅಭಿವೃದ್ಧಿ ಪಡಿಸಲಾಗಿದೆ. ಅಲ್ಪಸ್ವಲ್ಪ ಕಡೆ ಉಳಿದುಕೊಂಡಿದ್ದರೆ ಗಮನಕ್ಕೆ ತನ್ನಿ ಅಲ್ಲಿಯೂ ಮಾಡಿ ಮುಗಿಸಲಾಗುವುದು. ಅದೇ ರೀತಿ ಎಲ್ಲಿಯೂ ನೀರಿನ ಕೊರತೆ ಆಗದಂತೆ, ಎಲ್ಲಾ ಪ್ರದೇಶಗಳಿಗೂ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಅನುಕೂಲವಾಗುವಂತೆ ಕುಡಿಯುವ ನೀರಿನ ಯೋಜನೆ ಹಂತ-3ರ ಮಂಜೂರಾತಿಗಾಗಿ ಸರ್ಕಾರಕ್ಕೆ ರೂ.750 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಯೋಜನೆ ಅನುಷ್ಠಾನಗೊಂಡರೆ, ಕಟ್ಟ ಕಡೆಯ ಮನೆಗಳಿಗೂ ಸಮರ್ಪಕವಾಗಿ ನೀರು ಬರಲಿದೆ ಎಂದರು.
ಗ್ರಾಮ ಪಂಚಾಯಿ ಅಧ್ಯಕ್ಷ ಸುರೇಶ ಗಚ್ಚಿನಮನಿ, ಮುಖಂಡರಾದ ಎಸ್.ಎಲ್.ಇಂಗಳೇಶ್ವರ ದಾದಾಸಾಹೇಬ ಬಾಗಾಯತ, ಅನೀಲ ಪತ್ತೇಪೂರ, ವಿಠ್ಠಲ ಜರತಾಪ, ಬಿ.ಡಿ.ಕಡಕೋಳ, ಸುನೀಲ ಚವ್ಹಾಣ, ಶ್ರೀರಾಮ ದೇಶಪಾಂಡೆ, ಸಂತೋಷ ಪಾಟೀಲ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.