Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕರನ್ನು ಗೌರವಿಸುವುದು ಭಾರತೀಯ ಪರಂಪರೆ ನೀಡಿದ ಬಳುವಳಿ
(ರಾಜ್ಯ ) ಜಿಲ್ಲೆ

ಶಿಕ್ಷಕರನ್ನು ಗೌರವಿಸುವುದು ಭಾರತೀಯ ಪರಂಪರೆ ನೀಡಿದ ಬಳುವಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲಿಸಿದ ಶಿಕ್ಷಕರನ್ನು ಗೌರವಿಸಿದ ರ‍್ಯಾಂಕ್ ವಿದ್ಯಾರ್ಥಿ ಪ್ರಜ್ವಲ್ | ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಕೌಲಗಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಕ್ಕಳ ಸಾಧನೆಯ ಹಿಂದೆ ಶಿಕ್ಷಕರ ಶ್ರಮ ಇರುತ್ತದೆ ಎನ್ನುವುದನ್ನು ಅರಿತುಕೊಂಡು ಅವರನ್ನು ಅಭಿಮಾನ ಗೌರವದಿಂದ ಸತ್ಕರಿಸುವ ಜನಗಳು ಬಹಳ ವಿರಳ. ಆದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನನ್ನ ಮಗ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿದ್ದಾನೆ ಎಂದರೆ ಅದರ ಹಿಂದಿರುವ ಪ್ರೇರಕ ಶಕ್ತಿ ಕಲಿಸಿದ ಗುರುಗಳು. ಅವರನ್ನು ಸತ್ಕರಿಸುವುದು ನಮ್ಮ ಆಧ್ಯ ಕರ್ತವ್ಯ ಎಂದು ಶಾಲೆಗೆ ಬಂದು ಶಿಕ್ಷಕರಿಗೆ ಸನ್ಮಾಸಿನಿಸಿದ್ದು ನಿಜಕ್ಕೂ ಹೃದಯ ಸ್ಪರ್ಷಿಯಾಗಿದೆ. ಈ ಸಂಸ್ಕಾರವನ್ನು ಭಾರತೀಯ ಪರಂಪರೆ ನಮಗೆ ಬಳುವಳಿಯಾಗಿ ನೀಡಿದೆ ಎಂದು ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಕೌಲಗಿ ಹೇಳಿದರು.
ಆದರ್ಶನಗರದ ಎಕ್ಸಲಂಟ್ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ, ೨೦೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ, ಪ್ರಜ್ವಲ್ ಪತ್ತಾರ ನ ಪಾಲಕರು ಆಯೋಜನೆ ಮಾಡಿದ್ದ ಗುರುನಮನ ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದ ಅವರು; ಪ್ರಜ್ವಲ್ ಪತ್ತಾರ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು ಕೇವಲ ನಮ್ಮ ಸಂಸ್ಥೆಗೆ ಮಾತ್ರವಲ್ಲ ಇಡೀ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದೆ. ಇವನ ಈ ಸಾಧನೆಯ ಹಿಂದೆ ಶಿಕ್ಷಕರ ಶ್ರಮವಿದೆ. ಅದನ್ನು ಗುರುತಿಸಿ ಗೌರವ ವಂದನೆ ಕಾರ್ಯಕ್ರಮ ಆಯೋಜನೆ ಮಾಡಿರುವುದು ಅವರ ಹೃದಯ ಶ್ರೀಮಂತಿಕೆಯನ್ನು ತೋರಿಸುತ್ತದೆ. ಶಿಕ್ಷಕರನ್ನು ಗೌರವಿಸುವ ಸತ್ಪರಂಪರೆ ನಮ್ಮೆಲ್ಲರ ಗೌರವವನ್ನು ಹೆಚ್ಚಿಸುತ್ತದೆ ಎಂದರು.
ಕಾರ್ಯಕ್ರಮವನ್ನುದ್ಧೇಶಿಸಿ ಮಾತನಾಡಿದ ಪ್ರಜ್ವಲ್ ಪತ್ತಾರ ತಂದೆ ರಾಜಶೇಖರ ಪತ್ತಾರ; ಎಕ್ಸಲಂಟ್ ಶಿಕ್ಷಣ ಸಂಸ್ಥೆಯು ಮಕ್ಕಳಿಗೆ ಕೇವಲ ಪಠ್ಯ ಬೋದನೆಯನ್ನು ಮಾತ್ರ ಮಾಡುವುದಿಲ್ಲ. ಬದಲಿಗೆ ಅವರ ಸರ್ವಾಂಗೀಣ ಅಭಿವೃದ್ಧಿಯ ಕಡೆಗೆ ಪ್ರೋತ್ಸಾಹ ನೀಡುತ್ತಾರೆ. ಇದು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಕ್ಕೆ ತರುವುದಕ್ಕೆ ನೆರವಾಗುತ್ತದೆ. ಎಕ್ಸಲಂಟನಲ್ಲಿ ಕಲಿತ ವಿದ್ಯಾರ್ಥಿಗೆ ಸ್ಪರ್ಧಾ ಜಗತ್ತನ್ನು ಎದುರಿಸುವ ಸಾಮರ್ಥ್ಯ ಬರುತ್ತದೆ. ಮಕ್ಕಳ ಆಸಕ್ತಿ, ಅಭಿರುಚಿಗಳನ್ನು ಅರಿತು ಪಾಠಮಾಡುವ ಇಲ್ಲಿನ ಶಿಕ್ಷಕರು ಹೆಜ್ಜೆ ಹೆಜ್ಜೆಗೂ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುತ್ತಾರೆ. ಅದರಿಂದಾಗಿಯೇ ಇಂದು ನಮ್ಮ ಮಗ ಈ ಮಟ್ಟದಲ್ಲಿ ಫಲಿತಾಂಶ ಪಡೆದುಕೊಳ್ಳುವುದಕ್ಕೆ ನೆರವಾಯಿತು ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಎಕ್ಸಲಂಟ ಸಂಸ್ಥೆಯ ಗೌರವ ಸದಸ್ಯ ರಾಜಶೇಖರ ಕೌಲಗಿ; ಎಕ್ಸಲಂಟ ಸಂಸ್ಥೆಯು ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಸ್ಥಾಪಿತವಾಗಿದೆ. ಸಂಸ್ಥೆಯ ವಿವಿಧ ಅಂಗಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ದಾಖಲೆ ಮಟ್ಟದ ಫಲಿತಾಂಶವನ್ನು ತಂದುಕೊಟ್ಟಿರುತ್ತಾರೆ. ಈ ವರ್ಷವಂತೂ ಎಲ್ಲ ವಿಭಾಗಗಳಲ್ಲೂ ರ‍್ಯಾಂಕ್‌ಗಳ ಸುರಿಮಳೆಯೇ ಆಗಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರು ಎಂ. ಐ. ಬಿರಾದಾರ, ರಾಜೇಶ್ವರಿ ಪತ್ತಾರ, ಕುಮಾರ. ಪ್ರಜ್ವಲ. ಪತ್ತಾರ, ಪಿ. ಬಿ. ಖೇಡಗಿ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಶಿಕ್ಷಕರನ್ನು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.