Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನಸೂರೆಗೊಂಡ ಬಂಜೆ ತೊಟ್ಟಿಲು ನಾಟಕ ಪ್ರದರ್ಶನ
(ರಾಜ್ಯ ) ಜಿಲ್ಲೆ

ಮನಸೂರೆಗೊಂಡ ಬಂಜೆ ತೊಟ್ಟಿಲು ನಾಟಕ ಪ್ರದರ್ಶನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ವಿರಕ್ತಮಠದ ಶಿವಾನುಭವ ಮಂಟಪದಲ್ಲಿ ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ಮಾವೂರಿನ ಬಾಲಲೀಲಾ ಸಂಗಮೇಶ್ವರ ನಾಟ್ಯ ಸಂಘವು ಹಿರಿಯ ಕಲಾವಿದ ಶಿವಲಿಂಗಯ್ಯ ಹಿರೇಮಠ ಅವರ ಮಗನ ಶಿಕ್ಷಣದ ಸಹಾಯರ್ಥವಾಗಿ ಭಾನುವಾರ ಸಂಜೆ ಪ್ರದರ್ಶನಗೊಂಡ ಬಂಜೆ ತೊಟ್ಟಿಲು ನಾಟಕ ಪ್ರೇಕ್ಷಕರನ್ನು ಮನಸೂರೆಗೊಂಡಿತ್ತು.
ನಾಟಕದಲ್ಲಿ ಕಲಾವಿದರಾದ ಅನಿತ ಹುಬ್ಬಳ್ಳಿ, ಶಶಿಕುಮಾರ ಜೀವಾಪುರ, ಮಂಜು ಹುಬ್ಬಳ್ಳಿ, ಶಿವಲಿಂಗಸ್ವಾಮಿ ಮಾವೂರು, ಚನ್ನವೀರಯ್ಯ, ಈರಣ್ಣ ಮೈಂದರಗಿ, ಸಾವಿತ್ರಮ್ಮ ದಾವಣಗೇರಿ, ಮಹಾದೇವಿ ದಾವಣಗೇರಿ, ಪ್ರೇಮಾಬಾಯಿ ತಾಳಿಕೋಟಿ, ಮಂಜುಳಾ ಹಾವೇರಿ ಮನೋಜ್ಞವಾಗಿ ಅಭಿನಯಿಸಿದರು.
ನಾಟಕಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದ ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ರಂಗಭೂಮಿಯ ನಾಟಕಗಳನ್ನು ನೋಡುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಮಾಜಿಕ ಪ್ರeಯನ್ನು ಬೆಳೆಸಲು ನಾಟಕಗಳು ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕು. ಆಧುನಿಕತೆಗೆ ಕಲೆಗಳು ಸೊರಗುತ್ತಿವೆ ಎಂಬ ಮನೋಭಾವ ಬೇಡ. ಕಲೆಗೆ ಸದಾ ಬೆಲೆ ಇರುತ್ತದೆ ಎಂದರು.
ಹಿರಿಯ ಕಲಾವಿದ ಶಿವಲಿಂಗಯ್ಯ ಹಿರೇಮಠ ಅವರ ಮಗನ ಶಿಕ್ಷಣ ಸಹಾಯರ್ಥವಾಗಿ ಈ ನಾಟಕ ಪ್ರದರ್ಶನವಾಗುತ್ತಿದೆ. ಇದಕ್ಕೆ ಎಲ್ಲರೂ ತನು-ಮನ-ಧನದಿಂದ ಸಹಾಯ ಮಾಡಬೇಕೆಂದರು.
ಹಿರಿಯ ನ್ಯಾಯವಾದಿ ಬಿ.ಕೆ.ಕಲ್ಲೂರ ಮಾತನಾಡಿ, ಇಂದು ಟಿವ್ಹಿ ಧಾರವಾಹಿ ಹಾವಳಿದಿಂದಾಗಿ ಕಲಾವಿದರ ಬದುಕು ದುಸ್ತರವಾಗುತ್ತಿದೆ. ಕಲಾವಿದರ ಬದುಕು ಸಾಗಿಸಲು ಎಲ್ಲರೂ ಸಹಾಯ-ಸಹಕಾರ ನೀಡಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ಮಾತನಾಡಿದರು.
ನ್ಯಾಯವಾದಿ ರವಿ ರಾಠೋಡ, ಶಿಕ್ಷಕ ಬಸವರಾಜ ಬಿದರಕುಂದಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಸವೇಶ್ವರ ದೇವಾಲಯ ಅಂತರಾಷ್ಟ್ರೀಯ ಶಾಲೆಯ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಅನಿಲ ಅಗರವಾಲ, ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಬಸವರಾಜ ಗೊಳಸಂಗಿ, ಬಸವೇಶ್ವರ ಸೇವಾ ಸಮಿತಿ ಸದಸ್ಯ ಎಂ.ಜಿ.ಆದಿಗೊಂಡ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಜನಪದ ಗಾಯಕ ಬಸವರಾಜ ಹಾರಿವಾಳ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ, ನಿವೃತ್ತ ಸೈನಿಕ ರುದ್ರಗೌಡ ಬಿರಾದಾರ, ಮುಖಂಡರಾದ ಸಂಕನಗೌಡ ಪಾಟೀಲ, ಪ್ರಕಾಶ ಕುಲಕರ್ಣಿ ಇತರರು ಇದ್ದರು. ಅರುಣ ಬಸಾಪುರ ಪ್ರಾರ್ಥಿಸಿದರು. ಕೊಟ್ರೇಶ ಹೆಗ್ಡಾಳ ಸ್ವಾಗತಿಸಿದರು. ಮಹಾಂತೇಶ ಸಂಗಮ ನಿರೂಪಿಸಿದರು. ಶಿವಲಿಂಗಯ್ಯ ಹಿರೇಮಠ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.