ಮುದ್ದೇಬಿಹಾಳ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ.೨೯ ರಂದು ಮದ್ಯಾಹ್ನ ೧ಗಂಟೆಗೆ ಅಂತರಾಷ್ಟ್ರೀಯ ಪೌಷ್ಠಿಕ ಅಆಹಾರ ಸಪ್ತಾಹ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಕ್ರಮವನ್ನು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಲಕ್ಷ್ಮಿ ಗರಗ ಉದ್ಘಾಟಿಸಲಿದ್ದು, ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತಕುಮಾರ ಬಳೂಲಗಿಡದ ಉಪಸ್ಥಿತರಿರಲಿದ್ದಾರೆ. ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಅಧ್ಯಕ್ಷತೆ ವಹಿಸಲಿದ್ದು, ಸರ್ಕಾರಿ ಸಹಾಯಕ ಅಭಿಯೋಜಕ ಬಸವರಾಜ ಆಹೇರಿ, ಅಪರ ಸರ್ಕಾರಿ ವಕೀಲ ಎಂ.ಆರ್.ಪಾಟೀಲ, ಪ್ರಭಾರ ತಹಶೀಲ್ದಾರ ಸಿ.ಎ.ಗುಡದಿನ್ನಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜುನಾಥ, ಪ್ರಭಾರ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಯುವರಾಜ ಹನಗಂಡಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಆರೋಗ್ಯ ಶಿಕ್ಷಣಾಧಿಕಾರಿ ಅನಸೂಯಾ ತೇರದಾಳ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದ ಮೇಲ್ವಿಚಾರಕಿ ಶರಣಮ್ಮ ಸಿದ್ದರೆಡ್ಡಿ ಪೌಷ್ಠಿಕ ಅಹಾರದ ಕುರಿತು, ಆರ್ಬಿಎಸ್ಕೆ ವೈದ್ಯಾಧಿಕಾರಿ ರೇಖಾ ಹಯ್ಯಾಳ ಪೌಷ್ಠಿಕಾಂಶಯುಕ್ತ ಅಹಾರಗಳ ಅಗತ್ಯ ಮತ್ತು ಅಪೌಷ್ಠಿಕತೆಯ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment