ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ವತಿಯಿಂದ ಯುಪಿಎಸ್ಸಿ ಹಾಗೂ ಕೆಎಎಸ್ ಗೆಜೆಟೆಡ್ ಪ್ರೊಬೇಷನರ್, ಕೆಪಿಎಸ್ಸಿ ಗ್ರೂಪ್ -ಸಿ, ಆರ್ಆರ್ಬಿ ಹಾಗೂ ಎಸ್ಎಸ್ಸಿ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯ ಪೋರ್ಟ್ಲ https://dom.karnataka.gov.inವೆಬ್ಸೈಟ್ ಮೂಲಕ ಆಗಸ್ಟ್ ೦೨ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: ೮೨೭೭೭೯೯೯೯೦ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
