ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಸರ್ಕಾರದ ಮಹಂತ್ವಕಾAಕ್ಷಿ ಯುವನಿಧಿ ಯೋಜನೆಯಲ್ಲಿ ೨೦೨೩-೨೪ ಮತ್ತು ೨೦೨೫ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅದರಂತೆ, ದಿನಾಂಕ ೦೭-೦೭-೨೦೨೫ ರಿಂದ ೦೭-೦೮-೨೦೨೫ರ ವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಅರ್ಹರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಅಭ್ಯರ್ಥಿಗಳು ನೇರವಾಗಿ ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.inನಲ್ಲಿ ತಮ್ಮ ಹತ್ತಿರದ ಕರ್ನಾಟಕ್ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ದೂರವಾಣಿ ಸಂಖ್ಯೆ ೦೮೩೫೨-೨೫೦೩೮೩ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿನಿಮಯ ಕೇಂದ್ರದ ಉದ್ಯೋಗ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
