Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದುಂದುವೆಚ್ಚ ತಡೆಯುವ ಸಾಮೂಹಿಕ ವಿವಾಹಗಳು
(ರಾಜ್ಯ ) ಜಿಲ್ಲೆ

ದುಂದುವೆಚ್ಚ ತಡೆಯುವ ಸಾಮೂಹಿಕ ವಿವಾಹಗಳು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಆರು ನವಜೋಡಿಗಳು

ಉದಯರಶ್ಮಿ ದಿನಪತ್ರಿಕೆ

ಚಡಚಣ: ಗುರುಪೂರ್ಣಿಮೆ ಪ್ರಯುಕ್ತ ಚಡಚಣ ತಾಲೂಕಿನ ತದ್ದೇವಾಡಿಯ ಶ್ರೀಗುರು ಚಂದ್ರಶೇಖರ ಸಂಸ್ಥಾನ ಮಠದಲ್ಲಿ ಸರಳ ಸಾಮೂಹಿಕ ವಿವಾಹ ಸೋಮವಾರ ನೆರವೇರಿತು.
ಆರು ಜೋಡಿ ನವವಿವಾಹಿತರು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.
ಶ್ರೀ ಗುರು ಗುರುಪಾದೇಶ್ವರ ಶಿವಾಚಾರ್ಯರು ಹಾಗೂ ಶ್ರೀ ಗುರುಬಾಳೇಶ್ವರ ಶಿವಾಚಾರ್ಯರು, ತದ್ದೇವಾಡಿಯ ಶ್ರೀ ರೇಣುಕ ದೇವರ ಸಾನ್ನಿಧ್ಯದಲ್ಲಿ ಸಾವೀರಾರು ಭಕ್ತರ ಸಮ್ಮುಖದಲ್ಲಿ ಆರು ನವಜೋಡಿಗಳಿಗೆ ಮಾಂಗಲ್ಯಧಾರಣೆ ಮತ್ತು ಅಕ್ಷತೆ ಕಾರ್ಯಕ್ರಮ ನಡೆಯಿತು.
ತದ್ದೇವಾಡಿಯ ಶ್ರೀ ರೇಣುಕ ದೇವರು ಮಾತನಾಡಿ, ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಆರು ಜೋಡಿ ನವವಿವಾಹಿತರು ಧರ್ಮೋಚಿತವಾಗಿ ವಿವಾಹ ಬದ್ಧರಾಗಿದ್ದು, ದಾಂಪತ್ಯ ಜೀವನಕ್ಕೆ ಸುವರ್ಣಪ್ರಾರಂಭ ಮಾಡಲಿದ್ದಾರೆ, ಇದರಲ್ಲಿ ಭಾಗವಹಿಸಿದ್ದಕ್ಕೆ ಈ ರೀತಿಯ ಸಾಮೂಹಿಕ ವಿವಾಹಗಳು ಪಡಿತರ ದಾರಿದ್ರ್ಯತನ, ದುಡುಕಿನ ವೆಚ್ಚವನ್ನು ತಡೆಯುವಂತೆ ಮಾಡುತ್ತವೆ ಹಾಗೂ ಕುಟುಂಬಗಳ ನಡುವೆ ಒಕ್ಕಟ್ಟನ್ನು ಉತ್ತೇಜಿಸುತ್ತವೆ ಎಂದರು.
ಈ ಸಮಾರಂಭದಲ್ಲಿ ಹಳೆ ಪರಂಪರೆ, ಸಂಸ್ಕೃತಿ ಮತ್ತು ಸಮಾಜಸೇವೆಯ ಸಮ್ಮಿಳನ ಕಂಡುಬಂದಿದೆ, ವಿವಾಹಿತರಿಗೆ ಮಠಾಧೀಶರು,ಕುಟುಂಬಸ್ಥರು, ಬಂಧುಬಳಗ, ಮತ್ತು ಗ್ರಾಮಸ್ಥರು ಶುಭಾಶಯಗಳ ಸುರಿಮಳೆ ಸುರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳು, ಶಾಸ್ತ್ರೀಯ ಮಂಗಲ ವಾದ್ಯಗಳು, ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿವಾಹ ಸಂಪನ್ನವಾಯಿತು.
ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ನವ ಜೋಡಿಗಳಿಗೆ ಶುಭ ಹಾರೈಸಿ ಮಾತನಾಡಿ, ಸಾಮೂಹಿಕ ವಿವಾಹದಲ್ಲಿ ಮದುವೆ ಮಾಡಿಕೊಳ್ಳುದು ಅಷ್ಟೊಂದು ಸುಲಭವಲ್ಲ ಪುಣ್ಯವಂತರಿಗೆ ಈ ಭಾಗ್ಯ ಲಭಿಸುತ್ತದೆ ದೇವರ ಸನ್ನಿಧಿಯಲ್ಲಿ ಈ ಭಾಗ್ಯ ನಿಮಗೆ ದೊರಕಿದ್ದು ಪೂರ್ವಜನ್ಮದ ಪುಣ್ಯದ ಫಲದಿಂದಾಗಿ ಎಂದರು. ಸತಿ-ಪತಿಗಳಿಬ್ಬರು ಪರಸ್ಪರ ಒಬ್ಬರನ್ನೊಬ್ಬರು ಅರಿತುಕೊಂಡು ಸಹಬಾಳ್ವೆ ನೆಮ್ಮದಿಯಿಂದ ಜೀವನ ಮಾಡುವದರ ಮುಖಾಂತರ ಸಮಾಜಕ್ಕೆ ಮಾದರಿಯಾಗಬೇಕು ಎಂದರು. ಈ ಕಾರ್ಯಕ್ರಮವನ್ನು ತದ್ದೇವಾಡಿಯ ಶ್ರೀಗುರು ಚಂದ್ರಶೇಖರ ಸಂಸ್ಥಾನ ಮಠದಲ್ಲಿ ಪ್ರತಿವರ್ಷ ತಪ್ಪದೆ ಆಯೋಜಿಸುತ್ತ ಬಂದಿರುವದು ಸಮಾಜದಲ್ಲಿ ಸಮಾನತೆ ಮತ್ತು ಸಂಸ್ಕೃತಿಯ ಉಳಿವಿಗೆ ಶ್ರೇಷ್ಠ ಉದಾಹರಣೆ ನೀಡಿದೆ ಎಂದರು.
ಮರಗೂರ ಭೀಮಾಶಂಕರ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ಎಂ.ಆರ್. ಪಾಟೀಲ ಮಾತನಾಡಿ ಮದುವೆ ಆಡಂಬರವಾಗಬಾರದು ಸರಳತೆ ಇರಬೇಕು. ಜೀವನ ಎಂದರೆ ಸುಖ ದುಖಃಗಳ ಸಂಗಮ, ಸುಖ ಬಂದಾಗ ಹಿಗ್ಗದೆ ಕಷ್ಟ ಬಂದಾಗ (ಕುಗ್ಗದೆ)ಎದೆಗುಂದದೆ ಜೀವನದಲ್ಲಿ ಸುಖ-ದುಖಃವನ್ನು ಸಮಾನವಾಗಿ ಸ್ವೀಕರಿಸಿ ಬಾಳ್ವೆ ಮಾಡಬೇಕು ಎಂದರು.
ಗುಡ್ಡಾಪುರದ ಶ್ರೀ ಗುರುಬಾಳೇಶ್ವರ ಶಿವಾಚಾರ್ಯರು, ಮಹಾಂತೇಶ ಹಿರೇಮಠ, ಮಹಾದೇವ ಸಾಹುಕಾರ ಭೈರಗೊಂಡ, ಸಾಹೇಬಗೌಡ ಪಾಟೀಲ, ಗಿರಿಮಲ್ಲಯ್ಯ ಹಿರೇಮಠ,ಡಿ.ಎಲ್. ಚವ್ಹಾಣ,ಇಲಿಯಾಸ ಬೋರಾಮಣಿ, ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ
    In ವಿಶೇಷ ಲೇಖನ
  • ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಸುಡುವ ಸೂರ್ಯನಿಗೊಂದು ಪತ್ರ
    In ವಿಶೇಷ ಲೇಖನ
  • ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಮೇ.೨೪ ರಂದು ಪಂಚಮಸಾಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಮಕ್ಕಳೇ ಪ್ರಭುದ್ದ ಭಾರತದ ಆಸ್ತಿ :ಪಿಎಸೈ ಮಹೇಶ ಸಂಕ
    In (ರಾಜ್ಯ ) ಜಿಲ್ಲೆ
  • ಪ.ಬಂಗಾಳದಲ್ಲಿ ಬಿಜೆಪಿ ಗೆಲುವು: ಕಾರ್ಯಕರ್ತರಲ್ಲಿ ಹೆಚ್ಚಿದ ಆತ್ಮವಿಶ್ವಾಸ
    In (ರಾಜ್ಯ ) ಜಿಲ್ಲೆ
  • ಭಕ್ತರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಶಕ್ತಿ ಮಹಾಗುರುಗಳಿಗಿದೆ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಲ್ಲಿ ಕುಂಠಿತವಾಗುತ್ತಿರುವ ಕ್ರೀಡಾಸಕ್ತಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಸವಾಲುಗಳನ್ನು ಎದುರಿಸಲು ಸೇತುಬಂಧ ಸಹಕಾರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.