ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎಂ.ಸಿ.ಮುಲ್ಲಾ ಮಾತನಾಡಿ, ಕರ್ನಾಟಕ ರಾಜ್ಯದ ಪಠ್ಯಕ್ರಮದಲ್ಲಿ ಸಾಧಾರಣವಾಗಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಕನ್ನಡವನ್ನು, ದ್ವಿತೀಯ ಭಾಷೆಯಾಗಿ ಇಂಗ್ಲಿಷನ್ನು ಮತ್ತು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಸಲಾಗುತ್ತಿದೆ. ರಾಜ್ಯ ಪಠ್ಯಕ್ರಮದಲ್ಲಿ ಓದುವ ಮಕ್ಕಳು ಮೂರನೇ ಭಾಷೆಯಾಗಿ ಹಿಂದಿ ಕಲಿಯುವುದು ಕಡ್ಡಾಯವಾಗಿದೆ. ಮಾತ್ರವಲ್ಲ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೂರು ಅಂಕಗಳಿಗೆ ಹಿಂದಿ ಪರೀಕ್ಷೆಯನ್ನು ಕಡ್ಡಾಯವಾಗಿ ಬರೆಯಬೇಕಿದೆ. ತೃತೀಯ ಭಾಷೆಯಾದ ಹಿಂದಿಯು ಕರ್ನಾಟಕದ ವಿದ್ಯಾರ್ಥಿಗಳಿಗೆ ಅನಗತ್ಯವಾದ ಒತ್ತಡವನ್ನು ಒಡ್ಡುತ್ತಿದೆ. ಹಿಂದಿ ಹೇರಿಕೆಗೆ ಕನ್ನಡದ ಮಕ್ಕಳ ಭವಿಷ್ಯ ಬಲಿಯಾಗುತ್ತಿದೆ. ಕರ್ನಾಟಕದ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು. ತೃತೀಯ ಭಾಷೆಯಾದ ಹಿಂದಿಯನ್ನು ಪಠ್ಯಕ್ರಮದಿಂದ ಹೊರಗಿಡಬೇಕು ಎಂದು ಆಗ್ರಹಿಸಿದರು.
ರಾಜ್ಯ ಸಂಚಾಲಕ ಸಂತೋಷ ಪಾಟೀಲ ಡಂಬಳ ಮಾತನಾಡಿ, ತಮಿಳುನಾಡು 1968ರಿಂದಲೇ ತ್ರಿಭಾಷಾ ನೀತಿಯನ್ನು ತಿರಸ್ಕರಿಸಿ, ತಮಿಳು ಮತ್ತು ಇಂಗ್ಲಿಷ್ ಭಾಷೆಗಳನ್ನು ಒಳಗೊಂಡ ದ್ವಿಭಾಷಾ ನೀತಿಯನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರವು ಸಹ ತ್ರಿಭಾಷಾ ನೀತಿಯನ್ನು ರದ್ದುಗೊಳಿಸಿದೆ. ಕರ್ನಾಟಕವು ಈ ಉದಾಹರಣೆಗಳಿಂದ ಸ್ಪೂರ್ತಿ ಪಡೆದು, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಿಗೆ ಆದ್ಯತೆ ನೀಡುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಹಾರಿವಾಳ ಮಾತನಾಡಿದರು.
ಈ ವೇಳೆ ರಾವಜಿ, ರಾಜು ಕಂಬಾಗಿ, ರವಿ ಕಿತ್ತೂರ, ದಸ್ತಗೀರ ಸಾಲೋಟಗಿ, ಫಯಾಜ ಕಲಾದಗಿ, ಮುತ್ತು ಹಿರೇಮಠ, ಜೈಭೀಮ ಮುತ್ತಗಿ, ಅನುರಾಧಾ ಕಲಾಲ, ಕಸ್ತೂರಿ ಪೂಜಾರಿ, ಶ್ರೀಕಾಂತ ಬಿಜಾಪುರ, ಎಚ್.ಎಸ್.ಕಬಾಡೆ, ಸಾಧಿಕ ಜಾನ್ವೇಕರ, ದಾದಾಪೀರ ಮುಜಾವರ, ಆಸೀಫಪೀರವಾಲೆ, ದಯಾನಂದ ಸಾವಳಗಿ, ವಿನೋದ ದಳವಾಯಿ, ಮಲ್ಲನಗೌಡ ಪಾಟೀಲ, ಬಸವರಾಜ ಬಿ.ಕೆ., ವಿಜಯಕುಮಾರ ಯಂಭತನಾಳ, ಮಂಜುನಾಥ ಹಿರೇಮಠ, ನಿಸಾರ ಬೇಪಾರಿ, ಹಣಮಂತ ಟಕ್ಕಳಕಿ, ತಾಜೋದ್ದೀನ ಕಲೀಫಾ, ಅಮೀನ ಅಗಸಿಮನಿ, ಕವಿತಾ ಸಾವಳಗಿ, ಐ.ಸಿ.ಪಠಾಣ, ರಾಜು ಇಜೇರಿ, ಮೊಹ್ಮದ ಮುಲ್ಲಾ, ಇಮ್ತಿಯಾಜ ಮುಲ್ಲಾ, ಪಿದಾ ಕಲಾದಗಿ, ಬಸಲಿಂಗ ಮಡಿವಾಳ, ಭರತ ಚಿಬಲಿ, ಆನಂದ ಬಿರಾದಾರ, ಮನೋಹರ ತಾಜವ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

