Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಲ್ಲಿ ಕಲಿಕಾ ಭಾವನೆ ಉತ್ತೇಜಿಸಿ :ಬಿಇಒ ಬಸಣ್ಣವರ
(ರಾಜ್ಯ ) ಜಿಲ್ಲೆ

ಮಕ್ಕಳಲ್ಲಿ ಕಲಿಕಾ ಭಾವನೆ ಉತ್ತೇಜಿಸಿ :ಬಿಇಒ ಬಸಣ್ಣವರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹಿರೇಪಡಸಲಗಿ ಶಾಲೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಬೇಟಿ- ಶೈಕ್ಷಣಿಕ ಚಟುವಟಿಕೆ ಪರಿಶೀಲನೆ | ಬದ್ದತೆಯಿಂದ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಲು ಸಲಹೆ

ಉದಯರಶ್ಮಿ ದಿನಪತ್ರಿಕೆ

ಚಿಕ್ಕಪಡಸಲಗಿ: ಇಂದಿನ ಯುವಜನತೆಯಲ್ಲಿ ಕಲಿಕಾಸಕ್ತಿ ಕ್ಷೀಣಿಸುತ್ತಿದೆ.ಮೊಬೈಲ್ ಹಾವಳಿಯ ಸೆಳೆತದಲ್ಲಿ ಸಿಲುಕಿರುವ ಬಹುತೇಕ ಮಕ್ಕಳಿಂದ ಅದ್ಯಯನ ಪ್ರವೃತ್ತಿಗೆ ಇಂದು ನಿರಾಶಾದಾಯಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.ಜಾಲತಾಣದ ಅನಿಯಂತ್ರಿತ ಬಳಕೆ ವ್ಯಾಮೋಹದಿಂದ ಶೈಕ್ಷಣಿಕ ವ್ಯವಸ್ಥೆಗೆ ಮಾರಕವಾಗುತ್ತಲ್ಲಿದೆ. ಇದರಿಂದ ಶಾಲಾ ಮಕ್ಕಳನ್ನು ಉಳಿಸಿ ಓದು,ಪಠ್ಯಾಸಕ್ತಿ ಕಡೆಗೆ ಕೊಂಡೊಯ್ದು ಬೆಳೆಸಬೇಕಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಕ ಸಮೂಹ ಕಾಳಜಿಯಿಂದ ಈ ವಿಷಕಾರಿ ವಾತಾವರಣದಲ್ಲಿ ದಾರಿ ತಪ್ಪುತ್ತಿರುವ ಭವಿಷ್ಯತ್ತಿನ ಪ್ರಜೆಗಳ ಮನವೊಲಿಸಿ ಶಿಕ್ಷಣದ ಅಭಿರುಚಿ ಒಲವು ಮೂಡಿಸಲು ಮುಂದಾಗಬೇಕಾಗಿರುವುದು ತೀರಾ ಅಗತ್ಯವಾಗಿದೆ ಎಂದು ಜಮಖಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ ಅಭಿಪ್ರಾಯಿಸಿದರು.
ಸಮೀಪದ ಹಿರೇಪಡಸಲಗಿ ಸರಕಾರಿ ಪ್ರೌಢಶಾಲೆಗೆ ಅನಿರೀಕ್ಷಿತ ಬೇಟಿ ನೀಡಿದ ಅವರು ಶಾಲಾ ಶೈಕ್ಷಣಿಕ ವಾತಾವರಣ ಹಾಗೂ ಎಸ್ಸೆಸ್ಸೆಲ್ಸಿ ಮಕ್ಕಳ ಅಭ್ಯಾಸದ ಗುಣಮಟ್ಟ ಪರಿಶೀಲಿಸಿದರು.
ಈ ವೇಳೆ ನಡೆಸಿದ ಶಿಕ್ಷಕ ಸಭೆಯಲ್ಲಿ ಮಾತನಾಡಿದ ಅವರು, ವಿಶೇಷವಾಗಿ ಎಸ್ಸೆಸ್ಸೆಲ್ಸಿ ಮಕ್ಕಳ ಬಗ್ಗೆ ಶಿಕ್ಷಕರು ಗಮನ ಹರಿಸಿ ಪಾಠ ಬೋಧನೆ ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದರು.
ಉತ್ತಮ ಫಲಿತಾಂಶಕ್ಕಾಗಿ ಈಗಿಂದಲೇ ಸಾಕಷ್ಟು ತಯಾರಿ ಮಾಡಿಕೊಳ್ಳಬೇಕು.ಆ ಹಿನ್ನೆಲೆಯಲ್ಲಿ ಉತ್ಕಟ, ಸರಳೀಕೃತ ಬೋಧನಾ ಕೈಂಕರ್ಯ ಮಕ್ಕಳ ಹೃದಯ ತಟ್ಟುವಂತೆ ನೋಡಿಕೊಳ್ಳಲು ಮುಂದಾಗಬೇಕಲ್ಲದೇ, ವಿದ್ಯಾರ್ಥಿಗಳು ಪರೀಕ್ಷೆಗೆ ಭಯ ತೋರೆದು ಆತ್ಮ ಸ್ಕೈರ್ಯದಿಂದ ಎದುರಿಸುವಂತೆ ಸನ್ನದ್ಧಗೊಳಿಸಬೇಕು ಎಂದು ಶಿಕ್ಷಕರಿಗೆ ಸಲಹೆ ನೀಡಿದರು.
ಶೈಕ್ಷಣಿಕ ಅಸ್ತಿತ್ವವನ್ನು ಗಟ್ಟಿಗೊಳಿಸಿದರೆ ಮಾತ್ರ ಮಕ್ಕಳಲ್ಲಿ ಓದು, ಬರಹದ ಪ್ರಗತಿ ಕಾಣಬಹುದು. ವಿದ್ಯಾರ್ಥಿಗಳ ಭವಿಷ್ಯ ಶಾಲಾ ಕೇಂದ್ರಗಳ ಕಲಿಕಾ ಕೊಠಡಿಗಳಲ್ಲಿ ಹುದುಗಿದೆ.ಆ ಕಾರಣ ಸಾಮಾಜಿಕ ಹೊಣೆಗಾರಿಕೆಯ ಪ್ರಭಾವ ಶಿಕ್ಷಕರು ತೋರಿ ಶಿಕ್ಷಣದ ಆಸ್ತಿತ್ವ ಇನ್ನಷ್ಟು ಅಗಾಧಗೊಳಿಸಬೇಕು ಎಂದರು.
ನಿಮ್ಮದೇ ಕೌಶಲ್ಯ, ವಿಶೇಷ ಪಾಂಡಿತ್ಯ ನವತಂತ್ರಗಳೊಂದಿಗೆ ಪಾಠಪ್ರವಚನ ಗೈದು ಮಕ್ಕಳ ಮನಸ್ಸನ್ನು ಸೆಳೆಯಬೇಕು. ಕಲಿಕೆ ನವಿರಾಗಿ ಅರಳಿಸಬೇಕು. ಪ್ರತಿ ಪಾಠ ಮನದಟ್ಟಾಗುವಂತೆ ಸಾಗಬೇಕು. ಮಕ್ಕಳ ಕಲಿಕಾ ಮನಸ್ಥಿತಿ ಜಾಗೃತವಾಗುವಂತೆ ಬೋಧನಾ ಚಟುವಟಿಕೆಗಳನ್ನು ನಡೆಸಿ ಕಲಿಕಾ ಚೈತನ್ಯ ಮೂಡಿಸಬೇಕು.ಈ ರೀತಿಯ ಕಾಯಕದಿಂದ ಮಕ್ಕಳ ಶೈಕ್ಷಣಿಕ ರಂಗದಲ್ಲಿ ಬದಲಾವಣೆಗಳನ್ನು ತಂದು ಕಲಿಕಾಸಕ್ತಿ ಅವಕಾಶ ತೆರೆದಿಡಬೇಕು ಎಂದು ಶಿಕ್ಷಕ ಸಮೂಹಕ್ಕೆ ಸಲಹೆ ನೀಡಿದರು.
ಕಲಿಕಾ ನಿರಾಸಕ್ತಿಯ ಖಿನ್ನತೆ ಭಾವ ತಾಳಿರುವ ಮಕ್ಕಳನ್ನು ಪ್ರೀತಿ, ವಿಶ್ವಾಸದಿಂದ ಕಂಡು ಅವರಲ್ಲಿ ಕಲಿಕಾ ಪುನಶತನಗೊಳಿಸುವುದು ಇಂದಿನ ಅತ್ಯಗತ್ಯ ಕೆಲಸವಾಗಿದೆ. ಮಕ್ಕಳ ಅಂತರಾಳದ ಅಳಕ್ಕೆ ಇಳಿದು ಅವರ ಭಾವನೆಗಳ ಮೇಲೆ ಹಿಡಿತ ಸಾಧಿಸಿದಾಗ ಸ್ವಯಂ ಶಿಕ್ಷಣದ ಅರಿವಿನ ಬಾಗಿಲು ತೆರೆದುಕೊಳ್ಳುತ್ತದೆ ಎಂದು ಬಿಇಒ ಅಶೋಕ ಬಸಣ್ಣವರ ಅಭಿಪ್ರಾಯಿಸಿದರು.
ಪಾಲಕ-ಪೋಷಕರು ಸಹ ತಮ್ಮ ನೈತಿಕ ಮೌಲ್ಯಗಳನ್ನು ಅರಿತು ಮಕ್ಕಳ ಶಿಕ್ಷಣದ ಬಗ್ಗೆ ಶಿಕ್ಷಕರ ಜೊತೆ ಹಾಗೂ ಇಲಾಖೆಯೊಂದಿಗೆ ಕೈಜೋಡಿಸಬೇಕು. ಮಕ್ಕಳ ಶಿಕ್ಷಣಕ್ಕೆ ಎಲ್ಲರೂ ದಿಕ್ಸೂಚಿಯಾಗಿ ನಿಲ್ಲಬೇಕು. ಆದ್ಯತೆ, ಬದ್ದತೆಯಿಂದ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶ್ರಮಿಸಬೇಕು ಎಂದರು.
ಈ ವೇಳೆ ಇಸಿಓ ಎಂ.ಎಸ್. ಚವ್ಹಾಣ, ವಲಯ ಸಿ ಆರ್ ಪಿ ಆರ್.ಎಚ್. ಮುದ್ನೂರ, ಗಣಿತ ಹಾಗೂ ಇಂಗ್ಲೀಷ್ ಸಂಪನ್ಮೂಲ ವ್ಯಕ್ತಿಗಳಾದ ಉಟಗಿ ಮತ್ತು ಝಂಭುರೆ ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಸಿಬ್ಬಂದಿಗಳಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.