Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂದು ಜನತಾದಳ ಅದ್ಧೂರಿ ಸಮಾವೇಶ :ಶಾಸಕ ರಾಜುಗೌಡ
(ರಾಜ್ಯ ) ಜಿಲ್ಲೆ

ಇಂದು ಜನತಾದಳ ಅದ್ಧೂರಿ ಸಮಾವೇಶ :ಶಾಸಕ ರಾಜುಗೌಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ರಾಜ್ಯದಲ್ಲಿ ಜಾತ್ಯಾತೀತ ಜನತಾದಳವನ್ನು ತಳಮಟ್ಟದಿಂದ ಬಲಪಡಿಸಿ ಮತ್ತೆ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಜನರೊಂದಿಗೆ ಜನತಾದಳ ಅಭಿಯಾನವನ್ನು ಆರಂಭಿಸಿರುವ ಪಕ್ಷದ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ಕುಮಾರಸ್ವಾಮಿ ಸೇರಿದಂತೆ ಪಕ್ಷದ ರಾಜ್ಯ,ಜಿಲ್ಲಾ ಮುಖಂಡರು ಸೇರಿದಂತೆ ಅನೇಕರು ಜು. ೧೫ ರಂದು ಹೂವಿನಹಿಪ್ಪರಗಿಯ ಎಂ.ಜಿ.ಕೋರಿ ಮತ್ತು ಡಾ.ಬಿ.ಜಿ.ಬ್ಯಾಕೋಡ ಪಪೂ ವಿದ್ಯಾಲಯದ ಆವರಣದಲ್ಲಿ ಮಧ್ಯಾನ್ಹ ೩ ಗಂಟೆಗೆ ಹಮ್ಮಿಕೊಂಡಿರುವ ಜನರೊಂದಿಗೆ ಜನತಾದಳ ಹಾಗೂ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ ಎಂದು ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ ಹೇಳಿದರು.
ತಾಲೂಕಿನ ಕುದರಿಸಾಲವಾಡಗಿಯ ತಮ್ಮ ನಿವಾಸದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕಾರ್ಯಕ್ರಮವನ್ನು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉದ್ಘಾಟಿಸುವರು. ಇವರೊಂದಿಗೆ ಮಾಜಿ ಸಚಿವರಾದ ಆಲಗೊಂಡ ಹನಮಂತಪ್ಪ, ವೆಂಕಟರಾವ ನಾಡಗೌಡ, ವೆಂಕಟ್ಟಪ್ಪ ನಾಯಕ, ದೇವದುರ್ಗ ಶಾಸಕಿ ಕರೆಮ್ಮ ನಾಯಕ, ಮುಖಂಡರಾದ ಅಪ್ಪುಗೌಡ ಪಾಟೀಲ, ಹನಮಂತಪ್ಪ ಮಾವಿನಮರದ, ಬಿ.ಡಿ.ಪಾಟೀಲ, ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ ಸೇರಿದಂತೆ ಅನೇಕರು ಆಗಮಿಸುತ್ತಾರೆ. ಮುಂಬರುವ ದಿನಗಳಲ್ಲಿ ನಡೆಯುವ ಗ್ರಾಮ ಪಂಚಾಯಿತಿ,ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರು ಈಗಿನಿಂದಲೇ ಕಾರ್ಯನ್ಮೋಖರಾಗಬೇಕು. ಹೂವಿನಹಿಪ್ಪರಗಿಯಲ್ಲಿ ಹಮ್ಮಿಕೊಂಡಿರುವ ಸಮಾವೇಶಕ್ಕೆ ಹತ್ತು ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಮತಕ್ಷೇತ್ರದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ನಿಖಿಲ್ಕುಮಾರಸ್ವಾಮಿ ಅವರು ಮಧ್ಯಾನ್ಹ ನಮ್ಮ ನಿವಾಸದಲ್ಲಿ ಊಟ ಮುಗಿಸಿಕೊಂಡ ನಂತರ ಬೈಕ್ ರ್ಯಾಲಿ ಮೂಲಕ ಹೂವಿನಹಿಪ್ಪರಗಿ ಗ್ರಾಮಕ್ಕೆ ತಲುಪಿದ ನಂತರ ಗ್ರಾಮದ ಅಗಸಬಾಳ ಕ್ರಾಸ್ನಿಂದ ಕ್ಯಾಂಟರ್ ಮೂಲಕ ಗ್ರಾಮದಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಕಿತ್ತೂರ ರಾಣಿ ಚನ್ನಮ್ಮ ವೃತ್ತದಲ್ಲಿರುವ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ನಂತರ ಸಮಾವೇಶ ನಡೆಯುವ ಸ್ಥಳಕ್ಕೆ ಆಗಮಿಸುವರು ಎಂದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸಚೀನಗೌಡ ಪಾಟೀಲ, ಗುರುನಗೌಡ ಪಾಟೀಲ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.