Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ

ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು

ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಬಿಎಲ್ಡಿಇ ಸಂಸ್ಥೆ ಮುಂಚೂಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿ
(ರಾಜ್ಯ ) ಜಿಲ್ಲೆ

ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ನಿಜವಾಗಿಯೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇದ್ದರೆ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡಗಳನ್ನು, ಅಲ್ಪಸಂಖ್ಯಾತರನ್ನು ತಮ್ಮ ಮನೆಯಾಳುಗಳ ರೀತಿ ನೆಹರೂ- ಕುಟುಂಬ ನೋಡಿಕೊಂಡು ಬಂದಿದೆ. ಇಂತಹ ಕಾಂಗ್ರೆಸ್ ಪಕ್ಷದಿಂದ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಕೊಡಲು ಸಾಧ್ಯವೇ? ಬಿಹಾರ ರಾಜ್ಯದ ಚುನಾವಣೆ ಸಮೀಪಿಸುತ್ತಿರುವ ಕಾರಣದಿಂದಾಗಿ ಎಐಸಿಸಿಯ ಒಬಿಸಿ ಸಮಿತಿಯು ಸಿದ್ದರಾಮಯ್ಯನವರ ಮೂಲಕ ಹಿಂದುಳಿದ ವರ್ಗಗಳ ಕುರಿತು ಮೊಸಳೆಕಣ್ಣೀರು ಹಾಕುತ್ತಿದೆ ಎಂದು ವ್ಯಂಗ್ಯವಾಡಿದರು.
ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಒಬಿಸಿ ಸಮಿತಿಯ ಸಭೆಯಲ್ಲಿ ಹಿಂದುಳಿದವರು ದಲಿತರು ಅಲ್ಪಸಂಖ್ಯಾತರ ಅಭಿವೃದ್ಧಿಯಾಗಿಲ್ಲ ಎಂದರೆ ದೇಶದ ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ಸಭೆಯಲ್ಲಿ ಹೇಳಿದ್ದಾರೆ. ಬಿಜೆಪಿ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ವಿರೋಧಿ, ಎಂದೂ ಮೀಸಲಾತಿಯ ಪರ ಬಿಜೆಪಿ ಇರಲಿಲ್ಲ ಎಂಬ ಆರೋಪವನ್ನು ಮಾಡಿದ್ದಾರೆ.
ಸಿದ್ದರಾಮಯ್ಯನವರು ತಮ್ಮನ್ನು ತಾವು ಅಹಿಂದ ಚಾಂಪಿಯನ್ ಎಂದು ಕರೆದುಕೊಳ್ಳುತ್ತಾರೆ, ಇತ್ತೀಚೆಗೆ ಕಾಂತರಾಜು ವರದಿಯನ್ನು ಕ್ಯಾಬಿನೆಟ್ ಸಭೆಯಲ್ಲಿ ಮಂಡಿಸುವುದಾಗಿ ಬೊಗಳೆ ಹೊಡೆಯತ್ತಿದ್ದವರು ದೆಹಲಿಯಿಂದ ದೂರವಾಣಿ ಕರೆ ಬಂದ ನಂತರ, ರಾಹುಲ್ ಗಾಂಧಿಯವರು ಆದೇಶ ಮಾಡಿದ್ದಾರೆಂದು 165 ಕೋಟಿ ಖರ್ಚು ಮಾಡಿ ಸಿದ್ಧಪಡಿಸಿದ್ದ ಕಾಂತರಾಜು ವರದಿಯನ್ನು ಕಸದ ಬುಟ್ಟಿಗೆ ಹಾಕಿದ್ದೀರಲ್ಲವೇ? ಆಗ ನಿಮ್ಮ ಹಿಂದುಳಿದವರ ಕಾಳಜಿ ಎಲ್ಲಿ ಹೋಗಿತ್ತು?
ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡಗಳನ್ನು, ಅಲ್ಪಸಂಖ್ಯಾತರನ್ನು ತಮ್ಮ ಮನೆಯಾಳುಗಳ ರೀತಿ ನೆಹರೂ- ಗಾಂಧಿ ಕುಟುಂಬ ನೋಡಿಕೊಂಡು ಬಂದಿದೆ. ಇಂಥ ಕಾಂಗ್ರೆಸ್ ಪಕ್ಷದಿಂದ ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಲು ಸಾಧ್ಯವೇ ಎಂದು ದೇಶದ ಹಾಗೂ ರಾಜ್ಯದ ಜನರು ಕೇಳುತ್ತಿದ್ದಾರೆ. ಬಿಹಾರ ರಾಜ್ಯದ ಚುನಾವಣೆ ಸಮೀಪಿಸುತ್ತಿರುವ ಕಾರಣ ಎಐಸಿಸಿಯ ಒಬಿಸಿ ಸಮಿತಿಯು ಸಿದ್ದರಾಮಯ್ಯನವರ ಮೂಲಕ ಹಿಂದುಳಿದ ವರ್ಗಗಳ ಕುರಿತು ಮೊಸಳೆಕಣ್ಣೀರು ಹಾಕುತ್ತಿದೆ ಎನ್ನುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ ಎಂದು ಟೀಕಿಸಿದರು.

ಬಿಜೆಪಿ ತಲೆಕೆಡಿಸಿಕೊಳ‍್ಳುವ ಅಗತ್ಯ ಇಲ್ಲ :ಸಿಎಂ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಮಂತ್ರಿ ಯಾರು ಆಗಬೇಕೆನ್ನುವುದನ್ನು ನಮ್ಮ ಪಕ್ಷ ನಿರ್ಧರಿಸುತ್ತದೆ. ಅದರ ಬಗ್ಗೆ ಬಿಜೆಪಿ ತಲೆಕೆಡಿಸಿಕೊಳ‍್ಳುವ ಅಗತ್ಯ ಇಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಎನ್ನುವ ಪ್ರಶ್ನೆಗಳಿಗೆ ಉತ್ತರ ಕೊಡಲು ಸಾಧ್ಯವೇ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ನಿಜವಾಗಿಯೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇದ್ದರೆ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿ ಎಂಬ ವಿಜಯೇಂದ್ರ ಅವರ ಸವಾಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕೆಂದು ಸಲಹೆ ನೀಡುತ್ತಿರುವುದು ಅವರ ಅಜ್ಞಾನ ಮತ್ತು ಅತ್ಮವಂಚನೆಯನ್ನು ಮಾತ್ರವಲ್ಲ, ದುರಹಂಕಾರವನ್ನೂ ಸೂಚಿಸುತ್ತದೆ ಎಂದು ಹೇಳಿದ್ದಾರೆ.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ

ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು

ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಬಿಎಲ್ಡಿಇ ಸಂಸ್ಥೆ ಮುಂಚೂಣಿ

ವಿದ್ಯುತ್ ಸಮಸ್ಯೆ ಕುರಿತು ಸಾರ್ವಜನಿಕರೊಂದಿಗೆ ಸಂವಾದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು
    In (ರಾಜ್ಯ ) ಜಿಲ್ಲೆ
  • ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಬಿಎಲ್ಡಿಇ ಸಂಸ್ಥೆ ಮುಂಚೂಣಿ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಸಮಸ್ಯೆ ಕುರಿತು ಸಾರ್ವಜನಿಕರೊಂದಿಗೆ ಸಂವಾದ
    In (ರಾಜ್ಯ ) ಜಿಲ್ಲೆ
  • ಕಾನಿಪ ಜಿಲ್ಲಾ ಪ್ರಶಸ್ತಿಗೆ ಕುಬಕಡ್ಡಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕಾರ್ಮಿಕರಿಗೆ ಅರಿವು ಮೂಡಿಸುವ ‘ನಮಸ್ತೆ ದಿನ’ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಶಿಕ್ಷಕಿ ಪಾರ್ವತಿ ಸೊನ್ನದ ಪ್ರಶಸ್ತಿಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗೃಹ ಆರೋಗ್ಯ ಸೇವೆ ಯೋಜನೆ ಸದುಪಯೋಗಪಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಮತದಾರ ಕರಡು ಪಟ್ಟಿ ಪ್ರಕಟ :ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಸತಿ ಬಸ್ ಬದಲಾವಣೆಗೆ ವಿದ್ಯಾರ್ಥಿಗಳು, ಪಾಲಕರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.