Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪರಿಸರ ಸಂರಕ್ಷಣೆಗೆ ನಾವೆಲ್ಲ ಕೈಜೋಡಿಸೋಣ :ತಿಪರೆಡ್ಡಿ
(ರಾಜ್ಯ ) ಜಿಲ್ಲೆ

ಪರಿಸರ ಸಂರಕ್ಷಣೆಗೆ ನಾವೆಲ್ಲ ಕೈಜೋಡಿಸೋಣ :ತಿಪರೆಡ್ಡಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಪರಿಸರ ಸಂರಕ್ಷಿಸುವ ಕೆಲಸದಲ್ಲಿ ನಾವೆಲ್ಲರೂ ಕೈಜೋಡಿಸಬೇಕು. ನಮ್ಮ ಪರಿಸರ ಪ್ರೀತಿಯ ಕೆಲಸ ಮುಂದಿನ ಜನಾಂಗದವರಿಗೆ ಸ್ಪೂರ್ತಿಯಾಗಬೇಕು. ನಾವು ನೆಟ್ಟ ಗಿಡಗಳು ದೊಡ್ಡದಾದಾಗ ಅವುಗಳಿಂದ ಸಿಗುವ ಖುಷಿ ದೊಡ್ಡದು ಎಂದು ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಅರಣ್ಯ ಇಲಾಖೆ, ಪುರಸಭೆ, ಹಸಿರು ತೋರಣ ಗೆಳೆಯರ ಬಳಗದ ಸಹಯೋಗದೊಂದಿಗೆ ಗಿಡಗಳನ್ನು ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ ಮಾತನಾಡಿ, ಪರಿಸರ ಸಂರಕ್ಷಣೆ ವಿಷಯದಲ್ಲಿ ನಾಗರಿಕರಿಗೆ ಎಲ್ಲ ರೀತಿಯ ನೆರವು ನೀಡುತ್ತೇವೆ. ಮುದ್ದೇಬಿಹಾಳ ಪಟ್ಟಣದ ಸೌಂದರ್ಯ ವರ್ಧನೆಗೆ ಜೆಸಿಬಿ, ನೀರು, ಅಲ್ಲಲ್ಲಿ ಸಾರ್ವಜನಿಕ ಆಸನಗಳ ಜೋಡಣೆಗೆ ಆದ್ಯತೆ ನೀಡುತ್ತೇವೆ. “ಅಮೃತ ಮಿತ್ರ” ಯೋಜನೆಯ ಅಡಿಯಲ್ಲಿ ಇನ್ನೂ ಹತ್ತು ಉದ್ಯಾನವನಗಳನ್ನು ತಲಾ ಹತ್ತು ಲಕ್ಷ ರೂ ಅನುದಾನದಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದರು.
ಪುರಸಭೆ ಉಪಾಧ್ಯಕ್ಷೆ ಪ್ರೀತಿ ಶರಣು ದೇಗಿನಾಳ ಮಾತನಾಡಿ, ಮುದ್ದೇಬಿಹಾಳ ಪಟ್ಟಣದಲ್ಲಿ ಮೊದಲು ಗಿಡಗಳು ಕಾಣುತ್ತಿರಲಿಲ್ಲ. ಈಗ ಹಸಿರು ತೋರಣ ಬಳಗದಿಂದಾಗಿ ಗಿಡಗಳು ಬೆಳೆದು ನಿಂತು ಎಲ್ಲೆಡೆ ಒಳ್ಳೆಯ ಆರೋಗ್ಯಕರ ಹಸಿರು ಪರಿಸರ ನಿರ್ಮಾಣವಾಗಿದೆ ಎಂದರು.
ಹತೋಗೆಬ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಪಟ್ಟಣದಲ್ಲಿರುವ ಉದ್ಯಾನವನಗಳನ್ನು ಗುರುತಿಸಿ, ಅಲ್ಲಿ ನಾಮಫಲಕ, ತಂತಿ ಬೇಲಿ ಹಚ್ಚುವ ಕೆಲಸ ನಡೆಯಬೇಕು. ಉದ್ಯಾನವನಗಳಲ್ಲಿ ಗಿಡಗಳನ್ನು ನೆಡಲು ಜೆಸಿಬಿ ನೀಡಬೇಕು. ನಾಗರಿಕರು ತಮ್ಮ ಬಡಾವಣೆಗಳಲ್ಲಿ ಇರುವ ಉದ್ಯಾನವನಗಳಲ್ಲಿ ಗಿಡಗಳನ್ನು ನೆಡಲು ಮುಂದೆ ಬರಬೇಕು ಎಂದರು.
ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ, ಹಸಿರು ತೋರಣ ಬಳಗದ ಅಧ್ಯಕ್ಷ ಬಿ.ಎಚ್.ಬಳಬಟ್ಟಿ, ಮಾಜಿ ಅಧ್ಯಕ್ಷ ರವಿ ಗೂಳಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗಿಡಗಳನ್ನು ನೆಟ್ಟು ನೀರೆರೆಯಲಾಯಿತು. ಕಾರ್ಯಕ್ರಮದಲ್ಲಿ ಪುರಸಭೆಯ ಸದಸ್ಯೆಯರುಗಳಾದ ಸಹನಾ ಬಡಿಗೇರ, ಭಾರತಿ ಪಾಟೀಲ, ಹತೋಗೆಬ ಕಾರ್ಯದರ್ಶಿ ಅಮರೇಶ ಗೂಳಿ, ಉಪಾಧ್ಯಕ್ಷ ಸೋಮಶೇಖರ ಚೀರಲದಿನ್ನಿ, ಮಾಜಿ ಅಧ್ಯಕ್ಷರಾದ ಬಿ.ಎಸ್.ಮೇಟಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ಸದಸ್ಯರಾದ ಮಲ್ಲಿಕಾರ್ಜುನ ಬಾಗೇವಾಡಿ, ಸುರೇಶ ಕಲಾಲ, ಬಸವರಾಜ ಬಿಜ್ಜೂರ, ಡಾ.ವಿಜಯಕುಮಾರ ಗೂಳಿ, ಡಾ. ಚಂದ್ರಶೇಖರ ಶಿವಯೋಗಿಮಠ, ಶ್ರೀಕಾಂತ ಕಡೂರ ವಕೀಲರು, ಲೋಹಿತ್ ನಾಲತವಾಡ, ಆದಿನಾಥ ಪಂಡಿತ, ವಿಜಯ ಬಡಿಗೇರ, ಪ್ರಕಾಶ ಪೂಜಾರಿ, ರವಿ ಲಮಾಣಿ, ಹಣಮಂತ ದೇವರಳ್ಳಿ, ಸೇರಿದಂತೆ ಅರಣ್ಯ ಇಲಾಖೆ, ಪುರಸಭೆ, ಬಳಗದ ಸದಸ್ಯರಿದ್ದರು. ಪರಮಾನಂದ ಪಾಟೀಲ ಪ್ರಾರ್ಥಿಸಿದರು. ಸಾಹಿತಿ ಸಿದ್ದನಗೌಡ ಬಿಜ್ಜೂರ ಪರಿಸರ ಗೀತೆ ಹಾಡಿದರು. ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಸ್ವಾಗತಿಸಿ, ನಿರೂಪಿಸಿದರು. ಸಂಗಮೇಶ ಚಲವಾದಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.