Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉಮರಜ ಗ್ರಾಪಂ ನಲ್ಲಿ ರೂ.೬೦ ಲಕ್ಷ ಭ್ರಷ್ಟಾಚಾರ ಆರೋಪ!
(ರಾಜ್ಯ ) ಜಿಲ್ಲೆ

ಉಮರಜ ಗ್ರಾಪಂ ನಲ್ಲಿ ರೂ.೬೦ ಲಕ್ಷ ಭ್ರಷ್ಟಾಚಾರ ಆರೋಪ!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರಗತಿಪರ ಸಂಘಟನೆಗಳ ಚಡಚಣ ತಾಲೂಕು ಸಮೀತಿಯ ಉಮರಜ ಗ್ರಾಮದ ಸದಸ್ಯರಿಂದ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ

ಉದಯರಶ್ಮಿ ದಿನಪತ್ರಿಕೆ

ಚಡಚಣ: ತಾಲೂಕಿನ ಉಮರಜ ಗ್ರಾಮ ಪಂಚಾಯತಿಯಲ್ಲಿ ಸುಮಾರು ೬೦ ಲಕ್ಷ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಪ್ರಗತಿಪರ ಸಂಘಟನೆಗಳ ಚಡಚಣ ತಾಲೂಕು ಸಮೀತಿಯ ಉಮರಜ ಗ್ರಾಮದ ಸದಸ್ಯರು ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.
ಉಮರಜ ಪಂಚಾಯತಿ ಅಧಿಕಾರಿ ಪಿಡಿಓ ಎಲ್ ಎಫ್ ನದಾಫ ಮತ್ತು ಗ್ರಾ.ಪಂ.ಅಧ್ಯಕ್ಷ ಕಂವುಸನ ಇಬ್ರಾಹಿಮ್ ಸಾವಳೆ ಇವರಿಬ್ಬರೂ ಕೂಡಿ ೨೦೨೪-೨೫ ನೇ ಸಾಲೀನ ೧೫ ನೇ ಹಣಕಾಸು ಯೋಜನೆಯ ವಿವಿಧ ಕಾಮಗಾರಿಗಳ ಸುಮಾರು ೬೦ ಲಕ್ಷ ರೂಪಾಯಿ ಹಣವನ್ನು ಅಭಿವೃದ್ಧಿ ಕೆಲಸ ಮಾಡಿಸದೆ ಹಣ ಗುಳುಂ ಮಾಡಿದ್ದಾರೆ ಎಂದು ಉಮರಜ ಗ್ರಾಮದ ಗ್ರಾಮಸ್ಥರು ಮತ್ತು ಪ್ರಗತಿಪರ ಸಂಘಟನೆಯ ಜನರು ಆರೋಪಿಸಿ ಅಹೋರಾತ್ರಿ ಅನಿರ್ಧಿಷ್ಠ ಧರಣಿ ಸತ್ಯಾಗ್ರಹವನ್ನು ಇವರ ವಿರುದ್ಧ ಉಮರಜ ಪಂಚಾಯತಿ ಮುಂದೆ ದಿ.೧೪ರ ಸಾಯಂಕಾಲ ದಿಂದ ಆರಂಭಿಸಿದ್ದಾರೆ.
ಅಹೋರಾತ್ರಿ ಪ್ರಾರಂಭಗೊಂಡ ಧರಣಿ ಸತ್ಯಾಗ್ರಹದ ಬಗ್ಗೆ ತಿಳಿಯುತ್ತಿದ್ದಂತೆ ಪಿಡಿಓ ಎಲ್ ಎಫ್ ನದಾಫ ಮತ್ತು ಗ್ರಾ.ಪಂ.ಅಧ್ಯಕ್ಷ ಕಂವುಸನ ಇಬ್ರಾಹೀಮ್ ಸಾವಳೆ ಪರಾರಿ ಯಾಗಿದ್ದಾರೆ. ಸರಕಾರಿ ಫೋನ್‌ ಕೂಡಾ ಸ್ವಿಚ್‌ಆಫ್ ಮಾಡಿ ಉದ್ಧಟತನವನ್ನು ತೋರಿದ್ದಾರೆ. ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವುದನ್ನು ಗಮನಿಸಿದರೆ ಆರೋಪದಲ್ಲಿ ಹುರುಳಿದೆ ಎಂದು ಗ್ರಾಮಸ್ಥರು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮತ್ತು ಅವರನ್ನು ಹುಡುಕಿಕೊಡಿ ಎಂದು ಚಡಚಣ ತಾಲೂಕ ಪಂಚಾಯತಿ ಅಧಿಕಾರಿ ಇಓ ಸಂಜಯ ಖಡಗೆಕರ್ ಅವರಿಗೆ ಪತ್ರಿಕೆಯ ಮುಖಾಂತರ ಮನವಿ ಮಾಡಿದ್ದಾರೆ.
ಇವರ ಮೇಲೆ ಆದಷ್ಟು ಬೇಗನೇ ಮೇಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು, ಇಲ್ಲವಾದರೆ ಇನ್ನೂ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಇಲ್ಲಿಯ ರೈತರು ಎಚ್ಚರಿಸಿದ್ದಾರೆ.
ಉಮರಜ ಪಂಚಾಯತಿ ಅಧಿಕಾರಿ ಪಿಡಿಓ ಎಲ್ ಎಫ್ ನದಾಫ ಅವರು ಫೋನ ಸ್ವಿಚ್‌ಆಫ್ ಮಾಡಿದ ಬಗ್ಗೆ ಚಡಚಣ ತಾಲೂಕ ಪಂಚಾಯತಿ ಅಧಿಕಾರಿ ಸಿಇಓ ಸಂಜಯ ಖಡಗೆಕರ್ ಅವರನ್ನು ವಿಚಾರಿಸಲಾಗಿ ಪಿಡಿಓ ಫೋನ್ ಸ್ವಿಚ್‌ಆಫ್ ಮಾಡಿದ್ದು ದೊಡ್ಡ ತಪ್ಪು. ಸರಕಾರ ಇದನ್ನು ೨೪ ಗಂಟೆ ನಿರಂತರವಾಗಿ ಬಳಸಬೇಕೆಂದು, ಜನರ ಕಷ್ಟಕ್ಕೆ ನೆರವಾಗಲೆಂದು ಕೊಟ್ಟಿದ್ದಾರೆ. ಪಿಡಿಓ ಎಲ್ ಎಫ್ ನದಾಫ ವಿರುದ್ಧ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಈ ಸಂದರ್ಭದಲ್ಲಿ ಪ್ರಗತಿಪರ ಸಂಘದ ಸದಸ್ಯರುಗಳಾದ ಸಂಗಪ್ಪ ಇರ್ಸೂರ, ಯಶವಂತ ಯಲ್ಲಪ್ಪ ಅಂಬಿಗೆರ ಇನ್ನೂ ಅನೇಕ ಸದಸ್ಯರು ಮತ್ತು ಊರಿನ ಪ್ರಮುಖ ಮುಖಂಡರು, ರೈತರು ಉಪಸ್ಥಿತರಿದ್ದರು.

” ನಾನು ಬುಧವಾರ ಉಮರಜ ಗ್ರಾಮದ ಧರಣಿನಿರತ ಗ್ರಾಮಸ್ಥರನ್ನು ಭೇಟಿಯಾಗಿದ್ದೇನೆ. ಅವರು ಮನವಿ ಕೊಟ್ಟಿದ್ದಾರೆ. ನಾನು ಶೀಘ್ರವೆ ತನಿಖೆ ಮಾಡುತ್ತೇನೆ. ಮತ್ತು ಈಗಾಗಲೆ ಜಿಲ್ಲಾ ಪಂಚಾಯತಿಗೆ ಪತ್ರದ ಮುಖಾಂತರ ತಿಳಿಸಿದ್ದು ಜಿಲ್ಲಾ ಪಂಚಾಯತಿಯವರು ತನಿಖೆ ಮಾಡಿ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ. ಆರೋಪಗಳ ಸತ್ಯಾಸತ್ಯತೆಯ ಬಗ್ಗೆ ಮೂವರ ಜಂಟಿ ತನಿಖಾ ತಂಡವನ್ನು ರಚಿಸಿದ್ದೇನೆ. ತನಿಖೆಯ ವರದಿ ಬಂದ ನಂತರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ. ಧರಣಿ ನಿರತ ಜನರ ಅಭಿಪ್ರಾಯದಂತೆ ತನಿಖೆ ಸಾಬೀತಾದರೆ ಪಿಡಿಓ ಅವರಿಗೆ ನಮ್ಮ ತಾಲೂಕಿನಲ್ಲಿ ಕೆಲಸಕ್ಕೆ ಅವಕಾಶ ಕೊಡುವುದಿಲ್ಲ. ಈ ವ್ಯವಸ್ಥೆಯಲ್ಲಿ ಅಧಿಕಾರಿಗಳು ಫೋನ್ ಬಂದ್ ಮಾಡಿ ಇಡುವುದು ಅಪರಾಧವಾಗಿದೆ. ಅದರ ಬಗ್ಗೆಯು ಕೂಡಾ ತನಿಖೆ ಮಾಡುತ್ತೇವೆ.”

– ಸಂಜಯ ಖಡಗೆಕರ್
ಇಓ ತಾಪಂ ಚಡಚಣ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.