Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ

ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು

ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಬಿಎಲ್ಡಿಇ ಸಂಸ್ಥೆ ಮುಂಚೂಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉಮರಜ ಗ್ರಾಪಂ ನಲ್ಲಿ ರೂ.೬೦ ಲಕ್ಷ ಭ್ರಷ್ಟಾಚಾರ ಆರೋಪ!
(ರಾಜ್ಯ ) ಜಿಲ್ಲೆ

ಉಮರಜ ಗ್ರಾಪಂ ನಲ್ಲಿ ರೂ.೬೦ ಲಕ್ಷ ಭ್ರಷ್ಟಾಚಾರ ಆರೋಪ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರಗತಿಪರ ಸಂಘಟನೆಗಳ ಚಡಚಣ ತಾಲೂಕು ಸಮೀತಿಯ ಉಮರಜ ಗ್ರಾಮದ ಸದಸ್ಯರಿಂದ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ

ಉದಯರಶ್ಮಿ ದಿನಪತ್ರಿಕೆ

ಚಡಚಣ: ತಾಲೂಕಿನ ಉಮರಜ ಗ್ರಾಮ ಪಂಚಾಯತಿಯಲ್ಲಿ ಸುಮಾರು ೬೦ ಲಕ್ಷ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಪ್ರಗತಿಪರ ಸಂಘಟನೆಗಳ ಚಡಚಣ ತಾಲೂಕು ಸಮೀತಿಯ ಉಮರಜ ಗ್ರಾಮದ ಸದಸ್ಯರು ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.
ಉಮರಜ ಪಂಚಾಯತಿ ಅಧಿಕಾರಿ ಪಿಡಿಓ ಎಲ್ ಎಫ್ ನದಾಫ ಮತ್ತು ಗ್ರಾ.ಪಂ.ಅಧ್ಯಕ್ಷ ಕಂವುಸನ ಇಬ್ರಾಹಿಮ್ ಸಾವಳೆ ಇವರಿಬ್ಬರೂ ಕೂಡಿ ೨೦೨೪-೨೫ ನೇ ಸಾಲೀನ ೧೫ ನೇ ಹಣಕಾಸು ಯೋಜನೆಯ ವಿವಿಧ ಕಾಮಗಾರಿಗಳ ಸುಮಾರು ೬೦ ಲಕ್ಷ ರೂಪಾಯಿ ಹಣವನ್ನು ಅಭಿವೃದ್ಧಿ ಕೆಲಸ ಮಾಡಿಸದೆ ಹಣ ಗುಳುಂ ಮಾಡಿದ್ದಾರೆ ಎಂದು ಉಮರಜ ಗ್ರಾಮದ ಗ್ರಾಮಸ್ಥರು ಮತ್ತು ಪ್ರಗತಿಪರ ಸಂಘಟನೆಯ ಜನರು ಆರೋಪಿಸಿ ಅಹೋರಾತ್ರಿ ಅನಿರ್ಧಿಷ್ಠ ಧರಣಿ ಸತ್ಯಾಗ್ರಹವನ್ನು ಇವರ ವಿರುದ್ಧ ಉಮರಜ ಪಂಚಾಯತಿ ಮುಂದೆ ದಿ.೧೪ರ ಸಾಯಂಕಾಲ ದಿಂದ ಆರಂಭಿಸಿದ್ದಾರೆ.
ಅಹೋರಾತ್ರಿ ಪ್ರಾರಂಭಗೊಂಡ ಧರಣಿ ಸತ್ಯಾಗ್ರಹದ ಬಗ್ಗೆ ತಿಳಿಯುತ್ತಿದ್ದಂತೆ ಪಿಡಿಓ ಎಲ್ ಎಫ್ ನದಾಫ ಮತ್ತು ಗ್ರಾ.ಪಂ.ಅಧ್ಯಕ್ಷ ಕಂವುಸನ ಇಬ್ರಾಹೀಮ್ ಸಾವಳೆ ಪರಾರಿ ಯಾಗಿದ್ದಾರೆ. ಸರಕಾರಿ ಫೋನ್‌ ಕೂಡಾ ಸ್ವಿಚ್‌ಆಫ್ ಮಾಡಿ ಉದ್ಧಟತನವನ್ನು ತೋರಿದ್ದಾರೆ. ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವುದನ್ನು ಗಮನಿಸಿದರೆ ಆರೋಪದಲ್ಲಿ ಹುರುಳಿದೆ ಎಂದು ಗ್ರಾಮಸ್ಥರು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮತ್ತು ಅವರನ್ನು ಹುಡುಕಿಕೊಡಿ ಎಂದು ಚಡಚಣ ತಾಲೂಕ ಪಂಚಾಯತಿ ಅಧಿಕಾರಿ ಇಓ ಸಂಜಯ ಖಡಗೆಕರ್ ಅವರಿಗೆ ಪತ್ರಿಕೆಯ ಮುಖಾಂತರ ಮನವಿ ಮಾಡಿದ್ದಾರೆ.
ಇವರ ಮೇಲೆ ಆದಷ್ಟು ಬೇಗನೇ ಮೇಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು, ಇಲ್ಲವಾದರೆ ಇನ್ನೂ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಇಲ್ಲಿಯ ರೈತರು ಎಚ್ಚರಿಸಿದ್ದಾರೆ.
ಉಮರಜ ಪಂಚಾಯತಿ ಅಧಿಕಾರಿ ಪಿಡಿಓ ಎಲ್ ಎಫ್ ನದಾಫ ಅವರು ಫೋನ ಸ್ವಿಚ್‌ಆಫ್ ಮಾಡಿದ ಬಗ್ಗೆ ಚಡಚಣ ತಾಲೂಕ ಪಂಚಾಯತಿ ಅಧಿಕಾರಿ ಸಿಇಓ ಸಂಜಯ ಖಡಗೆಕರ್ ಅವರನ್ನು ವಿಚಾರಿಸಲಾಗಿ ಪಿಡಿಓ ಫೋನ್ ಸ್ವಿಚ್‌ಆಫ್ ಮಾಡಿದ್ದು ದೊಡ್ಡ ತಪ್ಪು. ಸರಕಾರ ಇದನ್ನು ೨೪ ಗಂಟೆ ನಿರಂತರವಾಗಿ ಬಳಸಬೇಕೆಂದು, ಜನರ ಕಷ್ಟಕ್ಕೆ ನೆರವಾಗಲೆಂದು ಕೊಟ್ಟಿದ್ದಾರೆ. ಪಿಡಿಓ ಎಲ್ ಎಫ್ ನದಾಫ ವಿರುದ್ಧ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಈ ಸಂದರ್ಭದಲ್ಲಿ ಪ್ರಗತಿಪರ ಸಂಘದ ಸದಸ್ಯರುಗಳಾದ ಸಂಗಪ್ಪ ಇರ್ಸೂರ, ಯಶವಂತ ಯಲ್ಲಪ್ಪ ಅಂಬಿಗೆರ ಇನ್ನೂ ಅನೇಕ ಸದಸ್ಯರು ಮತ್ತು ಊರಿನ ಪ್ರಮುಖ ಮುಖಂಡರು, ರೈತರು ಉಪಸ್ಥಿತರಿದ್ದರು.

” ನಾನು ಬುಧವಾರ ಉಮರಜ ಗ್ರಾಮದ ಧರಣಿನಿರತ ಗ್ರಾಮಸ್ಥರನ್ನು ಭೇಟಿಯಾಗಿದ್ದೇನೆ. ಅವರು ಮನವಿ ಕೊಟ್ಟಿದ್ದಾರೆ. ನಾನು ಶೀಘ್ರವೆ ತನಿಖೆ ಮಾಡುತ್ತೇನೆ. ಮತ್ತು ಈಗಾಗಲೆ ಜಿಲ್ಲಾ ಪಂಚಾಯತಿಗೆ ಪತ್ರದ ಮುಖಾಂತರ ತಿಳಿಸಿದ್ದು ಜಿಲ್ಲಾ ಪಂಚಾಯತಿಯವರು ತನಿಖೆ ಮಾಡಿ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ. ಆರೋಪಗಳ ಸತ್ಯಾಸತ್ಯತೆಯ ಬಗ್ಗೆ ಮೂವರ ಜಂಟಿ ತನಿಖಾ ತಂಡವನ್ನು ರಚಿಸಿದ್ದೇನೆ. ತನಿಖೆಯ ವರದಿ ಬಂದ ನಂತರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ. ಧರಣಿ ನಿರತ ಜನರ ಅಭಿಪ್ರಾಯದಂತೆ ತನಿಖೆ ಸಾಬೀತಾದರೆ ಪಿಡಿಓ ಅವರಿಗೆ ನಮ್ಮ ತಾಲೂಕಿನಲ್ಲಿ ಕೆಲಸಕ್ಕೆ ಅವಕಾಶ ಕೊಡುವುದಿಲ್ಲ. ಈ ವ್ಯವಸ್ಥೆಯಲ್ಲಿ ಅಧಿಕಾರಿಗಳು ಫೋನ್ ಬಂದ್ ಮಾಡಿ ಇಡುವುದು ಅಪರಾಧವಾಗಿದೆ. ಅದರ ಬಗ್ಗೆಯು ಕೂಡಾ ತನಿಖೆ ಮಾಡುತ್ತೇವೆ.”

– ಸಂಜಯ ಖಡಗೆಕರ್
ಇಓ ತಾಪಂ ಚಡಚಣ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ

ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು

ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಬಿಎಲ್ಡಿಇ ಸಂಸ್ಥೆ ಮುಂಚೂಣಿ

ವಿದ್ಯುತ್ ಸಮಸ್ಯೆ ಕುರಿತು ಸಾರ್ವಜನಿಕರೊಂದಿಗೆ ಸಂವಾದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು
    In (ರಾಜ್ಯ ) ಜಿಲ್ಲೆ
  • ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಬಿಎಲ್ಡಿಇ ಸಂಸ್ಥೆ ಮುಂಚೂಣಿ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಸಮಸ್ಯೆ ಕುರಿತು ಸಾರ್ವಜನಿಕರೊಂದಿಗೆ ಸಂವಾದ
    In (ರಾಜ್ಯ ) ಜಿಲ್ಲೆ
  • ಕಾನಿಪ ಜಿಲ್ಲಾ ಪ್ರಶಸ್ತಿಗೆ ಕುಬಕಡ್ಡಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕಾರ್ಮಿಕರಿಗೆ ಅರಿವು ಮೂಡಿಸುವ ‘ನಮಸ್ತೆ ದಿನ’ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಶಿಕ್ಷಕಿ ಪಾರ್ವತಿ ಸೊನ್ನದ ಪ್ರಶಸ್ತಿಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗೃಹ ಆರೋಗ್ಯ ಸೇವೆ ಯೋಜನೆ ಸದುಪಯೋಗಪಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಮತದಾರ ಕರಡು ಪಟ್ಟಿ ಪ್ರಕಟ :ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಸತಿ ಬಸ್ ಬದಲಾವಣೆಗೆ ವಿದ್ಯಾರ್ಥಿಗಳು, ಪಾಲಕರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.