Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»0.77 ಟಿಎಂಸಿ ಸಾಮರ್ಥ್ಯದ ಜಲಾಶಯ ನಿರ್ಮಾಣ
(ರಾಜ್ಯ ) ಜಿಲ್ಲೆ

0.77 ಟಿಎಂಸಿ ಸಾಮರ್ಥ್ಯದ ಜಲಾಶಯ ನಿರ್ಮಾಣ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಿಕೋಟಾ ತಾಲೂಕಿನ ಬಾಬಾನಗರ ಬಳಿ ನಿರ್ಮಾಣ | ಸುಮಾರು 400 ಎಕರೆ ಪ್ರದೇಶದಲ್ಲಿ ರೂ.557 ಕೋ. ವೆಚ್ಚ | ಸಚಿವ ಎಂ.ಬಿ.ಪಾಟೀಲ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತಿಕೋಟಾ ತಾಲೂಕಿನ ಬಾಬಾನಗರ ಬಳಿ ಸುಮಾರು 400 ಎಕರೆ ಪ್ರದೇಶದಲ್ಲಿ ರೂ. 557 ಕೋ. ವೆಚ್ಚದಲ್ಲಿ 0.77 ಟಿಎಂಸಿ ಜಲಸಂಗ್ರಹ ಸಾಮರ್ಥ್ಯದ ಜಲಾಶಯ ನಿರ್ಮಿಸಲಾಗುವುದು ಎಂದು‌ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಶುಕ್ರವಾರ ತಿಕೋಟಾ ಪಟ್ಟಣದ ಕೊರಬುಗಲ್ಲಿಯಲ್ಲಿ ಮಲಕನದೇವರಹಟ್ಟಿ ಇಟರಾಯನಗುಡಿ ಕೂಡು ರಸ್ತೆಯಿಂದ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ ಅಂದಾಜು ರೂ. 495 ಲಕ್ಷ ವೆಚ್ಚದಲ್ಲಿ 5.20 ಕಿ. ಮೀ ವ್ಹಾಯಾ ಉತ್ತರ ಕಾಲುವೆ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ಹಾಗೂ ತುಬಚಿ ಬಬಲೇಶ್ವರ ಏತನೀರಾವರಿ ಯೋಜನೆಯ ಡಿ. ಸಿ-2 ರಿಂದ ಜಂಕ್ಷನ್ ವರೆಗೆ ವ್ಹಾಯಾ ತಿಕೋಟಾ ಕೆರೆ ಮತ್ತು ಕೊರಬು ಗಲ್ಲಿ ಮಸೂತಿ ವರೆಗೆ ಅಂದಾಜು ರೂ.495 ಲಕ್ಷ ವೆಚ್ಚದಲ್ಲಿ 5 ಕಿ.ಮೀ ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಬಾಬಾನಗರ ಬಳಿ ಜಲಾಶಯ ನಿರ್ಮಾಣದಿಂದ ಭಾಗದ ರೈತರಿಗೆ ಬೇಸಿಗೆಯಲ್ಲಿ ಎದುರಾಗುವ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಅವರು ತಿಳಿಸಿದರು.
ಅಷ್ಟೇ ಅಲ್ಲ, ಮತಕ್ಷೇತ್ರ ವ್ಯಾಪ್ತಿಯಲ್ಲಿರುವ ಕಾಲುವೆಗಳ ಮೂಲಕ 156 ಹಳ್ಳಗಳಲ್ಲಿ ಅಲ್ಲಲ್ಲಿ ಚೆಕ್ ಡ್ಯಾಂ‌‌‌ ನಿರ್ಮಿಸಲಾಗುವುದು. ಇದರಿಂದ ಈ ಭಾಗಗಳಲ್ಲಿ ಅಂತರ್ಜಲ ವೃದ್ಧಿಸಲಿದೆ. ದೇಶಕ್ಕೆ ಮಾದರಿಯಾಗುವ ಕೆಲಸಗಳನ್ನು ಬಬಲೇಶ್ವರ ಮತಕ್ಷೇತ್ರದಲ್ಲಿ ಮಾಡಲಾಗುತ್ತಿದೆ. ಈಗ ನಿರ್ಮಿಸಲಾಗುತ್ತಿರುವ ಎರಡೂ ರಸ್ತೆಗಳು ಗುಣಮಟ್ಟದಿಂದ ಕೂಡಿರಬೇಕು ಎಂದು ಗುತ್ತಿಗೆದಾರರಿಗೆ ತಾಕೀತು ಮಾಡಿದ ಅವರು, ಈ ರಸ್ತೆಗಳ ಅಭಿವೃದ್ಧಿಯಂದ ಯಾರೊಬ್ಬರಿಗೂ ಅನ್ಯಾಯವಾಗುವುದಿಲ್ಲ ಎಂದು ತಿಳಿಸಿದರು.
ಈಗಾಗಲೇ ಮತಕ್ಷೇತ್ರದ ಎರಡೂ ತಾಲೂಕುಗಳಲ್ಲಿ ಎರಡು ಮಿನಿ ವಿಧಾನಸೌಧ, ಎರಡು ಸಬ್ ರಜಿಸ್ಟ್ರಾರ್ ಕಚೇರಿ, ಎರಡು ಇಂದಿರಾ‌ ಕ್ಯಾಂಟೀನ್ ಸೇರಿದಂತೆ ಸಾಕಷ್ಟು‌ ಕಚೇರಿಗಳು ಕಾರ್ಯಾರಂಭ ಮಾಡಿವೆ. ‌ಅಭಿವೃದ್ಧಿಯಲ್ಲಿ ಬಬಲೇಶ್ವರ ಮತಕ್ಷೇತ್ರ ಎಲ್ಲರಿಗೂ ಮಾದರಿಯಾಗುತ್ತಿದೆ ಎಂದು ಸಚಿವರು ಹೇಳಿದರು.
ಮುಖಂಡರಾದ ಸೋಮನಾಥ ಬಾಗಲಕೋಟ, ಆರ್. ಬಿ. ದೇಸಾಯಿ, ಯಾಕೂಬ್ ಜತ್ತಿ, ಬಸಯ್ಯ ವಿಭೂತಿಮಠ, ಪ್ರಭಾವತಿ ನಾಟೀಕಾರ ಮಾತನಾಡಿ, ಸಚಿವ ಎಂ. ಬಿ. ಪಾಟೀಲ ಅವರ ದೂರದೃಷ್ಠಿಯ ಫಲವಾಗಿ ಮತಕ್ಷೇತ್ರದಲ್ಲಿ ಸರ್ವಾಂಗೀಣ ಅಭಿವೃದ್ಧಿಯಾಗಿದೆ. ‌ಸಚಿವರಿಗೆ ನಾವೆಲ್ಲರೂ ಸದಾ ಬೆಂಬಲವಾಗಿ ನಿಲ್ಲೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ಧು ಗೌಡನವರ, ಮುಖಂಡರಾದ ಜಗದೀಶಗೌಡ ಪಾಟೀಲ, ಶೋಭಾ ಹಲ್ಯಾಳ, ವಿಜುಗೌಡ ಪಾಟೀಲ, ಡಾ. ಗಜಾನನ ಮಹಿಶ್ಯಾಳೆ, ಯಮನಪ್ಪ‌ ಮಲಕನವರ, ಈರಣ್ಣಗೌಡ ಬಿರಾದಾರ, ವಿ. ಎಂ. ಪಾಟೀಲ, ಕೆ.ಎನ್.ಎನ್.ಎಲ್ ಎಇಇ ಅಂಬಣ್ಣ ಹರಳಯ್ಯ, ಎಇ ಮಹಾದೇವ ನಡಗಡ್ಡಿ, ತಹಸೀಲ್ದಾರ ಸುರೇಶ ಚವಲರ, ತಾ. ಪಂ. ಕಾರ್ಯ ನಿರ್ವಹಣಾಧಿಕಾರಿ ಬಸವಣ್ಣೆಪ್ಪ ಬಿರಾದಾರ, ಪ. ಪಂ. ಮುಖ್ಯಾಧಿಕಾರಿ ರಾಘು‌ ನಡುವಿನಮನಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.