Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಸದ ಸ್ಥಾನಕ್ಕಾಗಿ ರಾಜ್ಯವನ್ನೇ ಮಾರಿಕೊಳ್ಳಲು ಸಾಧ್ಯವಿಲ್ಲ!
(ರಾಜ್ಯ ) ಜಿಲ್ಲೆ

ಸಂಸದ ಸ್ಥಾನಕ್ಕಾಗಿ ರಾಜ್ಯವನ್ನೇ ಮಾರಿಕೊಳ್ಳಲು ಸಾಧ್ಯವಿಲ್ಲ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಹದಾಯಿ ಯೋಜನೆ ಕುರಿತು ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಗರಂ | ಬಿಜೆಪಿ ಸಂಸದರ ವಿರುದ್ಧ ವಾಗ್ದಾಳಿ

ಬೆಂಗಳೂರು: ಮಹದಾಯಿಗೆ ಕೇಂದ್ರ ಸರ್ಕಾರ ಅನುಮತಿ ಕೊಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಗೋವಾ ಸಿಎಂ ಹೇಳಿಕೆಯನ್ನ ನಾನು ಖಂಡಿಸುತ್ತೇನೆ. ಗೋವಾ ಸಿಎಂ ಮಾನಸಿಕ ಸ್ಥಿಮತ ಕಳೆದುಕೊಂಡಿದ್ದಾರೆ. ಗೋವಾ ಸಿಎಂಗೆ ಫೆಡರಲ್‌ ವ್ಯವಸ್ಥೆ ಬಗ್ಗೆ ಗೊತ್ತಿಲ್ಲ.ಈಗಾಗಲೇ ಮಹದಾಯಿ ಯೋಜನೆ ಬಗ್ಗೆ ಅವಾರ್ಡ್ ತೀರ್ಮಾ ಆಗಿದೆ. ಟೆಂಡರ್ ಕೂಡ ಕರೆಯಲಾಗಿದೆ. ಕೆಲಸ ಶುರು ಮಾಡಬೇಕು. ಇದರ ಮಧ್ಯೆ ಅರಣ್ಯ ಇಲಾಖೆ ಏನೋ ನೊಟೀಸ್‌ ಕೊಟ್ಟಿದೆ. ನಾವು ಅದಕ್ಕೆ ಎಲ್ಲಾ ಉತ್ತರ ಕೊಡುತ್ತೇವೆ. ಮಹದಾಯಿ ವಿಷಯದಲ್ಲಿ ನಮ್ಮ ಕೆಲಸ ನಾವು ಪ್ರಾರಂಭ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಸಂಸದ ಸ್ಥಾನಕ್ಕಾಗಿ ರಾಜ್ಯವನ್ನು ಮಾರಿಕೊಳ್ಳೋದಕ್ಕೆ ಆಗಲ್ಲ, ಸಂಸದರ ವಿರುದ್ಧ ಡಿಸಿಎಂ ಗರಂ
ಇದೇ ವೇಳೆ ಮಹದಾಯಿ ವಿಷಯವಾಗಿಯೂ ಅಸಮಾಧಾನ ವ್ಯಕ್ತಪಡಿಸಿರುವ ಡಿಕೆ ಶಿವಕುಮಾರ್, ಇದು ನಮ್ಮ ರಾಜ್ಯದ ಸಂಸದರ ಸ್ವಾಭಿಮಾನದ‌‌ ಪ್ರಶ್ನೆ. ಮಹದಾಯಿ ವಿಷಯವಾಗಿ ಈವರೆಗೂ ಸಂಸದರು ಬಾಯಿ ಮುಚ್ಚಿಕೊಂಡಿರೋದೇ ತಪ್ಪು. ಒಂದು ಎಂ.ಪಿ ಸೀಟಿಗೋಸ್ಕರ ನಾವು ರಾಜ್ಯವನ್ನು ಮಾರಿಕೊಳ್ಳೋಕೆ ಸಾಧ್ಯವಿಲ್ಲ. 28 ಸಂಸದರು, 12 ಜನ ರಾಜ್ಯಸಭೆ ಸದಸ್ಯರು ಈ ಬಗ್ಗೆ ಮಾತಾಡಬೇಕು. ನಾನು ದೆಹಲಿಗೆ ಹೋಗಿ ಸಂಸದರ ಜೊತೆ ಮಾತಾಡುತ್ತೇನೆ. ಪ್ರಧಾನಿ, ಜಲಶಕ್ತಿ ಮಂತ್ರಿಗಳಿಗೂ ಸಮಯ ‌ಕೇಳುತ್ತೇನೆ. ಇದರ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

ಗೋವಾ ಸಿಎಂ ಹೇಳಿಕೆ ಆಘಾತಕಾರಿ :ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು: ಮಹದಾಯಿ ವಿಚಾರದಲ್ಲಿ ಗೋವಾ ಮತ್ತೆ ಕ್ಯಾತೆ ತೆಗೆದಿದ್ದು, ಮಹದಾಯಿ ನದಿ ನೀರನ್ನು ತಿರುಗಿಸುವ ಸಂಬಂಧ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವ ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದು, ಇದಕ್ಕೆ ಕರ್ನಾಟಕ ಸರ್ಕಾರ ಬುಧವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಕೇಂದ್ರ, ಯಾವುದೇ ಸಂದರ್ಭದಲ್ಲೂ ಮಹದಾಯಿ ಯೋಜನೆಯನ್ನು ತೆರವುಗೊಳಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಗೋವಾ ವಿಧಾನಸಭೆಯಲ್ಲಿ ಸಾವಂತ್ ಹೇಳಿರುವುದು “ಆಘಾತಕಾರಿ” ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ತುರ್ತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಚ್ ಕೆ ಪಾಟೀಲ್ ಅವರು, ಮಹಾದಾಯಿ ಜಲವಿವಾದವು ಅಂತರರಾಜ್ಯ ಜಲವಿವಾದ ಕಾಯ್ದೆಯನ್ವಯ ಒಂದು ನ್ಯಾಯಾಧೀಕರಣ ರಚನೆಯಾಗಿ ಅದು ಅಂತಿಮ ತೀರ್ಪು ನೀಡಿದೆ. ಆ ತೀರ್ಪು ಕೇಂದ್ರ ಸರ್ಕಾರದ ಗೆಜೆಟ್‍ನಲ್ಲಿ ಪ್ರಕಟಣೆಯಾಗಿ ನ್ಯಾಯಾಧೀಕರಣದ ತೀರ್ಪು ಜಾರಿಗೆ ಬಂದಿದೆ ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.