Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ

ವಿದ್ಯಾರ್ಥಿಗಳೆ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಿ :ಎಸಿ ದಡ್ಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಶರಣರ ಶಿವಯೋಗ ಬಸವ ನಿಜಯೋಗ
ವಿಶೇಷ ಲೇಖನ

ಶರಣರ ಶಿವಯೋಗ ಬಸವ ನಿಜಯೋಗ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಂಗ್ರಹ
– ಸುಧಾ ಪಾಟೀಲ
ವಿಶ್ವಸ್ಥರು
ಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರ
ಪುಣೆ

ಉದಯರಶ್ಮಿ ದಿನಪತ್ರಿಕೆ

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಡಾ. ಶಶಿಕಾಂತ ಪಟ್ಟಣ ಅವರ ನೇತೃತ್ವದಲ್ಲಿ ನಮ್ಮ ವೇದಿಕೆ ಯಿಂದ ಮೂರನೆಯ ವರ್ಷದ ಶರಣ ಮಾಸದ ಉಪನ್ಯಾಸಗಳು ಜುಲೈ 24 ರಿಂದ ಆಗಸ್ಟ್ 26 ರವರೆಗೆ ಒಂದು ತಿಂಗಳ ಕಾಲ ಸತತವಾಗಿ ನಡೆಯುತ್ತಿವೆ.
ಗುರುವಾರ ಶರಣ ಮಾಸದ ಮೊದಲ ದಿನ ಪರಮಪೂಜ್ಯ
ಶಿವರುದ್ರಸ್ವಾಮಿಗಳು – ಬೇಲಿಮಠ -ಬೆಂಗಳೂರು ಇವರು “ಶರಣರ ದೃಷ್ಟಿಯಲ್ಲಿ ಶಿವಯೋಗ” ಈ ವಿಷಯದ ಕುರಿತು ನಮ್ಮ ಜೊತೆಗೆ ಹಂಚಿಕೊಂಡರು.
ಶಿವ ಎಂದರೆ ಅಂತರಂಗದ ಸಾಧನೆ, ಸಂದೇಹವಿಲ್ಲದ ಸ್ಪಷ್ಟವಾದ ಮಾರ್ಗ, ಎಲ್ಲರಿಗೂ ಮಂಗಳವನ್ನು ಮಾಡುವುದು, ತನ್ನೊಳಗಿನ ನೆಲೆಯನ್ನು ಕಂಡುಹಿಡಿದುಕೊಳ್ಳುವುದು, ತನ್ನ ನಿಜ ಸ್ಥಿತಿ ಅರಿಯಬೇಕಾದದ್ದು ಎನ್ನುವುದನ್ನು ಸ್ಪಷ್ಟ ಪಡಿಸಿದರು.
ನಂತರದಲ್ಲಿ ಬಸವನಿಜಯೋಗವನ್ನು ತಿಳಿಯಪಡಿಸುತ್ತ, ಹಲವಾರು ಶರಣರ ವಚನಗಳ ಉಲ್ಲೇಖದೊಂದಿಗೆ, ನಡೆ-ನುಡಿ ಸಹಜ ರೀತಿಯಲ್ಲಿ ಹೇಗೆ ಅನುಭಾವಿಕ ನೆಲೆಯಲ್ಲಿ ಇರಬೇಕು, ಆಯತ, ಸ್ವಾಯತ ಸನ್ನಿಹಿತದ ವಿವರಣೆಯೊಂದಿಗೆ ಅಂತರ್ಮುಖಿಯಾಗಿ ಹೇಗೆ ಸಾಧನೆ ಮಾಡಬೇಕು, ನಾನು ನೀನು ಎಂಬ ಭೇದವಳಿದು ಲಿಂಗಪ್ರಜ್ಞೆಯಲ್ಲಿ ಹೇಗೆ ಒಂದಾಗಬೇಕು, ಅಂಗವೆಂಬ ಕೀಳರಿಮೆ, ಲಿಂಗವೆಂಬ ಮೇಲರಿಮೆ ಬಿಟ್ಟು ಸಮರಸ ಭಕ್ತಿ ಹೇಗೆ ಒಡಮೂಡಬೇಕು ಎಂದು ಹೇಳುತ್ತಾ, ಗುರು ಲಿಂಗ ಜಂಗಮ ಪ್ರಸಾದಗಳ ಅರಿವನ್ನು ಮೂಡಿಸುತ್ತ,” ಮಾಡುವಂತಿರಬೇಕು, ಮಾಡದಂತಿರಬೇಕು, ಮಾಡುವ ಮಾಟದಲ್ಲಿ ತಾನಿಲ್ಲದಂತಿರಬೇಕು” “ಎತ್ತೆತ್ತ ನೋಡಿದರತ್ತ ನೀನೇ ದೇವಾ” “ಲಿಂಗವೆನ್ನೆ , ಲಿಂಗೈಕ್ಯವೆನ್ನೆ, ಸಂಗವೆನ್ನೇ, ಸಮರಸವೆನ್ನೆ, ” ಎಂದು ಉಲ್ಲೇಖಿಸುತ್ತಾ ಅಂತರಂಗದ ಕಳೆ ಕಳೆದು ಹೇಗೆ ಬೆಳಕು ಕಂಡುಕೊಳ್ಳಬೇಕು ಎಂದು ಹಲವಾರು ವಚನಗಳ ಮೂಲಕ ಶಿವಯೋಗದ ಮಹತ್ವವನ್ನು ತಿಳಿಸಿಕೊಟ್ಟರು.


ಮಾರ್ಗದರ್ಶಕರಾದ ಡಾ. ಶಶಿಕಾಂತ ಪಟ್ಟಣ ಅವರು ಮಾತನಾಡಿ, “ಲಿಂಗವನರಿಯದೆ ಬೇರೆಯನರಿತು ಉಪಯೋಗವಿಲ್ಲ” “ನಾ ದೇವನಲ್ಲದೆ, ನೀ ದೇವನೇ” “ಶಿಶು ಕಂಡ ಕನಸಿನoತಿರಬೇಕು” “ಕುರುಹನಿಡಿದು ಅರುಹನರಿಯಬೇಕು” ಎಂದು ಶರಣರ ವಚನಗಳನ್ನು ಉಲ್ಲೇಖಿಸುತ್ತಾ, ಶರಣರ ಉದಾತ್ತೀಕರಣದ ಪರಿಕಲ್ಪನೆಯನ್ನು ತಿಳಿಸಿಕೊಟ್ಟರು.
ಶರಣೆ ಸೋನಾಲಿ ನೀಲಕಂಠ ಅವರ ವಚನ ಪ್ರಾರ್ಥನೆ, ಡಾ. ಶಶಿಕಾಂತ ಪಟ್ಟಣ ಅವರ ಸ್ವಾಗತ, ಡಾ. ಮೀನಾಕ್ಷಿ ಪಾಟೀಲ ಅವರ ಶರಣು ಸಮರ್ಪಣೆ, ಶರಣೆ ಗೌರಮ್ಮ ನಾಶಿ ಅವರ ಕಾರ್ಯಕ್ರಮ ನಿರ್ವಹಣೆ ಮತ್ತು ಸಂವಾದದೊಂದಿಗೆ ಕಾರ್ಯಕ್ರಮ ಅಚ್ಚುಕಟ್ಟಾಗಿ ಸಮಾಪ್ತಿಯಾಯಿತು.

ಪ್ರೊ.ಶಾರದಾ ಪಾಟೀಲ್ ಮೇಟಿ ದತ್ತಿ ಉಪನ್ಯಾಸ

ವಚನ ಅಧ್ಯಯನ ವೇದಿಕೆ, ಬಸವಾದಿ ಶರಣರ ಚಿಂತನ ಕೂಟ ಹಾಗೂ ಅಕ್ಕ ಅರಿವು ಸಂಘಟನೆಗಳಿಂದ ಪ್ರೊ.ಶಾರದಾ ಪಾಟೀಲ್ ಮೇಟಿ ಅವರ ಹೆಸರಿನಲ್ಲಿ ವಿಶೇಷ ದತ್ತಿ ಉಪನ್ಯಾಸ – ೩೦೧

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ

ವಿದ್ಯಾರ್ಥಿಗಳೆ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಿ :ಎಸಿ ದಡ್ಡೆ

ಸಂಭ್ರಮದ ದೀಪಾವಳಿ ಹಬ್ಬಕ್ಕೆ ನಾಗರಿಕರ ಭರದ ಸಿದ್ದತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ
    In (ರಾಜ್ಯ ) ಜಿಲ್ಲೆ
  • ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳೆ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಿ :ಎಸಿ ದಡ್ಡೆ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ದೀಪಾವಳಿ ಹಬ್ಬಕ್ಕೆ ನಾಗರಿಕರ ಭರದ ಸಿದ್ದತೆ
    In (ರಾಜ್ಯ ) ಜಿಲ್ಲೆ
  • ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಗೆ ಅರ್ಜಿ ಕರೆ
    In (ರಾಜ್ಯ ) ಜಿಲ್ಲೆ
  • ಅ.೨೧ ರಂದು ಪೊಲೀಸ್ ಹುತಾತ್ಮರ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಉಚಿತ ಕಾನೂನು ಸೇವೆಗಳ ಕ್ಲಿನಿಕ್ ಪ್ರಾರಂಭ
    In (ರಾಜ್ಯ ) ಜಿಲ್ಲೆ
  • ಕ್ರೀಡಾ ಸಾಧಕರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಯುವ ಕೇಂದ್ರದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಗಾಯನ ಸ್ಪರ್ಧೆ: ವಿಜಯ ಕೊಲ್ಹಾರ ರಾಜ್ಯಕ್ಕೆ ಪ್ರಥಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.