Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ

ವಿದ್ಯಾರ್ಥಿಗಳೆ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಿ :ಎಸಿ ದಡ್ಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಕರ್ನಾಟಕ ಏಕೀಕರಣಕ್ಕೆ ಧಾರವಾಡ ಜಿಲ್ಲೆ ಲಿಂಗಾಯತರ ಕೊಡುಗೆ
ವಿಶೇಷ ಲೇಖನ

ಕರ್ನಾಟಕ ಏಕೀಕರಣಕ್ಕೆ ಧಾರವಾಡ ಜಿಲ್ಲೆ ಲಿಂಗಾಯತರ ಕೊಡುಗೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಂಗ್ರಹ
– ಸುಧಾ ಪಾಟೀಲ
ವಿಶ್ವಸ್ಥರು
ಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರ
ಪುಣೆ

ಉದಯರಶ್ಮಿ ದಿನಪತ್ರಿಕೆ

ಶರಣ ಮಾಸದ ಎರಡನೆಯ ದಿವಸದ ಗೂಗಲ್ ಮೀಟ್ ಕಾರ್ಯಕ್ರಮದಲ್ಲಿ
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕರಾದ ಡಾ. ಸದಾಶಿವ ಮರ್ಜಿ ಅವರು ಕರ್ನಾಟಕ ಏಕೀಕರಣಕ್ಕೆ ಧಾರವಾಡ ಜಿಲ್ಲೆಯ ಲಿಂಗಾಯತರ ಕೊಡುಗೆ ಎನ್ನುವ ವಿಷಯದ ಬಗೆಗೆ ಅತ್ಯಂತ ಪ್ರಬುದ್ಧ ತೆಯಿಂದ ಎಳೆ ಎಳೆಯಾಗಿ ನಮಗೆಲ್ಲರಿಗೂ ತಿಳಿಸಿಕೊಟ್ಟರು. ಇದೊಂದು ಹರಿದು ಹಂಚಿ ಹೋಗಿದ್ದ ಕರ್ನಾಟಕವನ್ನು ಒಂದುಗೂಡಿಸಿ ಅಖಂಡ ಕರ್ನಾಟಕವನ್ನು ಹುಟ್ಟುಹಾಕಿದ ಚಳುವಳಿಯೆಂದು ವರ್ಣಿಸಿದರು.
ಕನ್ನಡವನ್ನು ಬೆಳೆಸುವ ಮತ್ತು ಕಾಪಾಡುವ ಕಾರ್ಯ ಇದರಿಂದ ಸಾಧ್ಯವಾಯಿತು. ಮರಾಠಿ, ಉರ್ದು, ಪರ್ಷಿಯನ್, ಇಂಗ್ಲಿಷ್ ಪ್ರಭಾವದಿಂದ ಕಳಾ ಹೀನವಾಗಿದ್ದ ಕನ್ನಡದ ಅಸ್ಮಿತೆಯ ಮತ್ತು ಅಸ್ತಿತ್ವದ ಹೋರಾಟವಿದು ಎಂದು ಅಭಿಪ್ರಾಯ ಪಟ್ಟರು. ಕನ್ನಡ ಕಲಿಯಲು ತೋರುವ ಅನಾದರ,ಅಸಡ್ಡೆ, ಮೂಲಭೂತ ಸೌಕರ್ಯ ಇಲ್ಲದೆ ಕನ್ನಡ ಶಾಲೆ ಮುಚ್ಚುವಿಕೆ, ಬೇರೆ ಭಾಷೆಗಳ ಪ್ರಾಬಲ್ಯ, ಹೀಗೆ ನಾನಾ ವಿಷಯಗಳಿಂದ ನೊಂದು ಕರ್ನಾಟಕ ಏಕೀಕರಣದ ಹೋರಾಟ ಹುಟ್ಟಲು ಕಾರಣ ವಾಯ್ತು ಎನ್ನುವುದನ್ನು ಮನದಟ್ಟು ಮಾಡಿದರು.
ಕನ್ನಡ ಮಾತನಾಡುವವರನ್ನು ಒಗ್ಗೂಡಿಸಿ ಪ್ರತ್ಯೇಕ ರಾಜ್ಯ ರಚನೆ, ಆಡಳಿತಾತ್ಮಕ ಅನುಕೂಲದ ಅಗತ್ಯತೆ, ನಮ್ಮ ನಮ್ಮ ಭಾಗಗಳಲ್ಲಿ ನಮ್ಮ ಭಾಷೆಗೆ ಪ್ರಾಮುಖ್ಯತೆ, ಜನರ ಹಕ್ಕೊತ್ತಾಯ, ಸಾಮಾಜಿಕ ಹಾಗೂ ಆರ್ಥಿಕ ಬೆಳವಣಿಗೆ ಈ ಎಲ್ಲದರ ಸಲುವಾಗಿ ಕರ್ನಾಟಕ ಏಕೀಕರಣ ಚಳು ವಳಿ ನಡೆಯಿತು ಎನ್ನುವುದನ್ನು ಅರುಹಿದರು.
ಕರ್ನಾಟಕ ವಿದ್ಯಾವರ್ಧಕ ಸಂಘ, ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ಸಭೆ, ಮೋತಿಲಾಲ್ ನೆಹರು ಸಮಿತಿ, ಮುಂಬೈ ಶಾಸನ ಸಭೆಯಲ್ಲಿ ವಿಷಯ ಮಂಡನೆ, ಕ್ರಿಶ್ಚಿಯನ್ ಮಿಶನರೀಸ್ ಅವರ ಕಾರ್ಯ, ಕಿಟಲ್, ಬಿ. ಎಲ್. ರೈಸ್, ಪ್ಲೀಟ್ ಅವರ ಕೊಡುಗೆ, ಲಿಂಗಾಯತ ಮಠಗಳ ಮಹತ್ತರ ಕಾರ್ಯ ಬಾಹುಳ್ಯತೆ, ಕಾಂಗ್ರೆಸ್ ಅಧಿವೇಶನ, ಜೆ. ವಿ. ಪಿ ತ್ರಿಮೂರ್ತಿ ಸಮಿತಿ, ಅದರ ಗುಂಚಿ ಶಂಕರಗೌಡ ಪಾಟೀಲರ ಉಪವಾಸ ಸತ್ಯಾಗ್ರಹದ ಬಗೆಗೆ ಹೇಳುತ್ತಾ, ಡೆಪ್ಯೂಟಿ ಚೆನ್ನಬಸಪ್ಪ, ಅರಟಾಳ ರುದ್ರಗೌಡರು, ಪಾಟೀಲ್ ಪುಟ್ಟಪ್ಪ, ಕೆ.ಎಫ್ ಪಾಟೀಲ್, ಗುದ್ಲೆಪ್ಪ ಹಳ್ಳಿಕೇರಿ, ಅಂದಾನೆಪ್ಪ ದೊಡ್ಡಮೇಟಿ, ಹೊಸಮನಿ ಸಿದ್ದಪ್ಪ, ಮೈಲಾರ ಮಹಾದೇವ, ರಾಜಶೇಖರಯ್ಯನವರು ಮತ್ತು ಮಹಿಳೆಯರ ಕನ್ನಡ ಪರ ಹೋರಾಟವನ್ನು ಶ್ಲಾಘಿಸಿದರು.
ಪುಣೆಯ ಬಸವ ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ. ಶಶಿಕಾಂತ ಪಟ್ಟಣ ಅವರು ಮಾತನಾಡಿ, ಕರ್ನಾಟಕ ಏಕೀಕರಣದ ಹೋರಾಟಕ್ಕೆ ಧಾರವಾಡ ತವರುಮನೆ ಇದ್ದಹಾಗೆ ಎಂದು ಹೇಳುತ್ತಾ, ಸಿದ್ದಪ್ಪ ಕಂಬಳಿ, ಹಂಗರಕಿ ದೇಸಾಯಿ, ಬಸರಿಗಿಡದ, ಶಾಂತವೇರಿ ಗೌಡರು, ಮಹಾದೇವ ಪಟ್ಟಣ, ವಾಲಿ ಚನ್ನಪ್ಪ, ಸಾಣಿಕೊಪ್ಪ, ಇವರೆಲ್ಲರ ಜೊತೆ ಬಹಳಷ್ಟು ಜನರು ದೊಡ್ಡ ಪ್ರಮಾಣದಲ್ಲಿ ಕರ್ನಾಟಕದ ಏಕೀಕರಣಕ್ಕಾಗಿ ಹೋರಾಟ ನಡೆಸಿದರು ಎಂದು ಸ್ಮರಿಸಿಕೊಂಡರು.
ನರಗುಂದ ಬಂಡಾಯ, ಲಂಕೇಶ್ ಪತ್ರಿಕೆ, ಗೋಕಾಕ್ ಚಳುವಳಿ ನಾಗಮೋಹನ್ ದಾಸರ ವರದಿಯನ್ನೂ ಸಹ ನೆನಪು ಮಾಡಿಕೊಂಡರು.
ಡಾ. ಸುಗುಣ ಮಲ್ಲೇಶ ಅವರ ವಚನ ಪ್ರಾರ್ಥನೆ, ಶರಣೆ ಪ್ರಭಾವತಿ ಹಿರೇಮಠ ಅವರ ಸ್ವಾಗತ, ಶರಣೆ ಬನಶ್ರೀ ಹತ್ತಿ ಅವರ ಶರಣು ಸಮರ್ಪಣೆ, ಶರಣೆ ವಿಜಯ ಮಹಾಂತಮ್ಮ ಅವರ ವಚನ ಮಂಗಳ, ಶರಣೆ ರತ್ನಕ್ಕ ಕಾದ್ರೊಳ್ಳಿ ಅವರ ನಿರೂಪಣೆ ಮತ್ತು ಸಂವಾದದೊಂದಿಗೆ ಗೂಗಲ್ ಮೀಟ್ ಕಾರ್ಯಕ್ರಮ ಸುಗಮವಾಗಿ ನೆರವೇರಿತು.

ಶಾರದಾ ಪಾಟೀಲ್ ಮೇಟಿ ದತ್ತಿ ಉಪನ್ಯಾಸ

ವಚನ ಅಧ್ಯಯನ ವೇದಿಕೆ ಬಸವಾದಿ ಶರಣರ ಚಿಂತನ ಕೂಟ ಹಾಗೂ ಅಕ್ಕನ ಅರಿವು ಸಂಘಟನೆಗಳಿಂದ ಪ್ರೊ. ಶಾರದಾ ಪಾಟೀಲ್ ಮೇಟಿ ಅವರ ಹೆಸರಿನಲ್ಲಿ ವಿಶೇಷ ದತ್ತಿ ಉಪನ್ಯಾಸ – 302

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ

ವಿದ್ಯಾರ್ಥಿಗಳೆ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಿ :ಎಸಿ ದಡ್ಡೆ

ಸಂಭ್ರಮದ ದೀಪಾವಳಿ ಹಬ್ಬಕ್ಕೆ ನಾಗರಿಕರ ಭರದ ಸಿದ್ದತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ
    In (ರಾಜ್ಯ ) ಜಿಲ್ಲೆ
  • ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳೆ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಿ :ಎಸಿ ದಡ್ಡೆ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ದೀಪಾವಳಿ ಹಬ್ಬಕ್ಕೆ ನಾಗರಿಕರ ಭರದ ಸಿದ್ದತೆ
    In (ರಾಜ್ಯ ) ಜಿಲ್ಲೆ
  • ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಗೆ ಅರ್ಜಿ ಕರೆ
    In (ರಾಜ್ಯ ) ಜಿಲ್ಲೆ
  • ಅ.೨೧ ರಂದು ಪೊಲೀಸ್ ಹುತಾತ್ಮರ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಉಚಿತ ಕಾನೂನು ಸೇವೆಗಳ ಕ್ಲಿನಿಕ್ ಪ್ರಾರಂಭ
    In (ರಾಜ್ಯ ) ಜಿಲ್ಲೆ
  • ಕ್ರೀಡಾ ಸಾಧಕರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಯುವ ಕೇಂದ್ರದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಗಾಯನ ಸ್ಪರ್ಧೆ: ವಿಜಯ ಕೊಲ್ಹಾರ ರಾಜ್ಯಕ್ಕೆ ಪ್ರಥಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.