ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಶ್ರಾವಣ ಮಾಸದ ಪ್ರಯುಕ್ತವಾಗಿ ಆರಂಭಗೊಂಡ ‘ಶ್ರೀಶಿವಯೋಗಿ ಸಿದ್ರಾಮೇಶ್ವರ ಪುರಾಣ’ಕ್ಕೆ ಗ್ರಾಮಸ್ಥರು ಆಗಮಿಸಿ ಆಲಿಸುವುದರ ಮೂಲಕ ಸದುಪಯೋಗ ಪಡಿಸಿಕೊಳ್ಳುವಂತೆ ಸಂಸ್ಥಾನ ಹಿರೇಮಠದ ಬಸವಲಿಂಗಶ್ರೀಗಳು ಹೇಳಿದರು.
ತಾಲ್ಲೂಕಿನ ಕೋರವಾರ ಗ್ರಾಮದ ಶ್ರೀಮಹಾಂತೇಶ್ವರ ಸಂಸ್ಥಾನ ಹಿರೇಮಠದಲ್ಲಿ ಶುಕ್ರವಾರ ಆರಂಭಗೊಂಡ ಪುರಾಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪುರಾಣ ಇಂದು ಆರಂಭಗೊಂಡು ಸೆಪ್ಟೆಂಬರ್ ೩ ರವರೆಗೆ ಸಾಯಂಕಾಲ ೭.೦೦ ಗಂಟೆಯಿಂದ ೯.೦೦ ಗಂಟೆಯವರೆಗೆ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಪುನೀತರಾಗುವಂತೆ ಕರೆ ನೀಡಿದರು.
ಆಲಮೇಲ ಗುರುಸಂಸ್ಥಾನಮಠದ ಚಂದ್ರಶೇಖರಶ್ರೀ, ಸ್ಥಳೀಯ ಚೌಕಿಮಠದ ಅಭಿನವ ಮುರುಗೇಂದ್ರಶ್ರೀ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಇದೇ ಸಂದರ್ಭದಲ್ಲಿ ವಚನೋತ್ಸವ ಪುಸ್ತಕ ಬಿಡುಗಡೆ ಮಾಡಲಾಯಿತು,
ಗುಳೆೆದಗುಡ್ಡದ ರೇವಣಸಿದ್ಧ ಸ್ವಾಮೀಜಿ, ನಿವೃತ್ತ ಶಿಕ್ಷಕ ಸಂಗನಗೌಡ ಪಾಟೀಲ, ವಿರೂಪಾಕ್ಷಯ್ಯ ಹಿರೇಮಠ(ಆಲಮೇಲ), ಹಿರೇಆಸಂಗಿಯ ಪುರಾಣಕಾರ ವೀರಬಸವ ಗದ್ದುಗೆಶ್ವರಮಠ, ಸಂಗೀತಗಾರ ಭಾಗೇಶ ರಾಣಾಪೂರ, ತಬಲಾವಾದಕ ಮಹಾಂತೇಶ ನರಿಬೋಳಿ ಹಾಗೂ ಗ್ರಾಮದ ಭಕ್ತರು ಇದ್ದರು.

