ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ವಿಜಯಪುರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ಧಾರವಾಡ ಚೇತನ ಪೌಂಡೇಶನ್ ಹಮ್ಮಿಕೊಂಡ ವಿಜಯಪುರ ನುಡಿ ಸಡಗರ ಕಾರ್ಯಕ್ರಮದಲ್ಲಿ ಸಿಂದಗಿಯ ಶ್ರೀ ಪದ್ಮರಾಜ ಮಹಿಳಾ ಕಾಲೇಜಿನ ಉಪನ್ಯಾಸಕಿ ಹೇಮಾ ಹಿರೇಮಠ ಅವರಿಗೆ ಕಂಚ್ಯಾಣಿ ಶರಣಪ್ಪ ಸ್ಮರಣಿಯ ಶಿಕ್ಷಕರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಲಾಯಿತು.
ಈ ವೇಳೆ ಸಮ್ಮೇಳನಾಧ್ಯಕ್ಷ, ಕಸಾಪ ಜಿಲ್ಲಾ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಸಾಹಿತಿ ಪಂಡಿತ ಅವಜಿ, ಬಸವರಾಜ ಕುಂಬಾರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

