Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳು ಸಾಹಿತ್ಯ ಓದುವ ಹವ್ಯಾಸ ಬೆಳಿಸಿಕೊಳ್ಳಿ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳು ಸಾಹಿತ್ಯ ಓದುವ ಹವ್ಯಾಸ ಬೆಳಿಸಿಕೊಳ್ಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

Sಜಾನಪದ ಸಾಹಿತಿ ಮಧುರಚೆನ್ನರ ೧೨೨ನೇ ಜನ್ಮ ಆಚರಣೆಯಲ್ಲಿ ಎಸಿ ಅನುರಾಧ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಲಸಂಗಿ ಗೆಳೆಯರ ಪ್ರತಿಷ್ಠಾನದ ವತಿಯಿಂದ ಮಧುರಚೆನ್ನರ ೧೨೨ನೇ ಜನ್ಮ ದಿನಾಚರಣೆಯನ್ನು ಜು.೩೧ರ ಗುರುವಾರ ಹಲಸಂಗಿ ಗ್ರಾಮದ ಶ್ರೀ ಅರವಿಂದ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಹಲಸಂಗಿಯ ಎಸ್.ಎ.ವಿ.ವಿ. ಸಂಘದ ಅಧ್ಯಕ್ಷರಾದ ಅರವಿಂದ ಮನಮಿ ಉದ್ಘಾಟಿಸಿದರು.
ಅರವಿಂದ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಡಿ.ಬಿ. ತಿಕೋಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಇಂಡಿ ವಿಭಾಗದ ಉಪ ವಿಭಾಗಾಧಿಕಾರಿಗಳಾದ ಶ್ರೀಮತಿ ಅನುರಾಧಾ ವಸ್ತ್ರದ ಮಾತನಾಡಿ, ಸಂವಿಧಾನ ನಮಗೆಲ್ಲ ಸಮನಾದ ಅವಕಾಶ ಕೊಟ್ಟಿದೆ. ವಿದ್ಯಾರ್ಥಿಗಳು ಪಠ್ಯದೊಂದಿಗೆ ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳಿಸಿಕೊಳ್ಳಿ ಕನ್ನಡ ಸಾಹಿತ್ಯದಲ್ಲಿ ಅದ್ಭುತ ಜನಪದ ಕಾವ್ಯಗಳಿವೆ ಜನಪದ ಸಾಹಿತ್ಯವು ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಇರುವುದರಿಂದ ಜನಪ್ರೀಯವಾಗಿವೆ ಎಂದು ಹೇಳಿದರು.
ಡಾ.ಸಂಗಮೇಶ ಮೇತ್ರಿ ಮಾತನಾಡಿ, ಮಧುರಚೆನ್ನರು ಒಬ್ಬರು ಅನುಭವಿ ಕವಿ ಸ್ವತಂತ್ರ‍್ಯ ಪೂರ್ವ ಹಲಸಂಗಿ ಗೆಳೆಯರ ಬಳಗ ಸಾಮಾಜಿಕ ರಾಷ್ಟ್ರದ ಚಿಂತನೆಯನ್ನು ಮಾಡುವ ಗುಂಪು ಹಲಸಂಗಿಯು ಕರ್ನಾಟಕ ಜಾನಪದ ಸಾಹಿತ್ಯದ ಹೆಬ್ಬಾಗಿಲು, ಸ್ವಾತಂತ್ರ‍್ಯ ತಂದು ಕೊಟ್ಟ ಈ ಊರು ಆದ್ಯಾತ್ಮದ ಶಿಖರವನೇರಿ ಹಲಸಂಗಿಯನ್ನು ನಾಡಿಗೆ ಪರಿಚಯಿಸಿರುವ ಈ ಹಲಸಂಗಿಯಲ್ಲಿ ಜನಿಸಿದ ನಾವೇಲ್ಲರೂ ಪುಣ್ಯವಂತರು, ಮಧುರ ಚೆನ್ನರು ಓದಿದ್ದು ೭ನೇ ತರಗತಿ ಆದರೂ ಸಹ ೨೧ ಭಾಷೆಯನ್ನು ಕಲಿತಿದ್ದರು ಹಲಸಂಗಿ ಗೆಳೆಯರ ನನ್ನನಲ್ಲನಂತಹ ಪುಸ್ತಕ ಹಾಗೂ ಗರತಿ ಹಾಡಿಗೆ ಸರಿಸಾಟಿ ಸಾಹಿತ್ಯ ಜಾನಪದ ಕವನ ಸಂಕಲನ ಬಂದಿಲ್ಲ ಎಂದು ಮಧುರಚೆನ್ನರ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಹಲಸಂಗಿ ಪ್ರತಿಷ್ಠಾನದ ಸದಸ್ಯರಾದ ಬಿ.ಆರ್. ಬನಸೊಡೆ ಅವರು, ಮಧುರಚೆನ್ನರ ಮಣ್ಣಿನಲ್ಲಿ ಹುಟ್ಟಿದ ನಾವೆಲ್ಲರೂ ಧನ್ಯರು. ಹಲಸಂಗಿ ಗೆಳೆಯರ ಪ್ರತಿಷ್ಠಾನದಿಂದ ಮಧುರಚೆನ್ನರ ಸಾಹಿತ್ಯವನ್ನು ನಾಡಿಗೆ ಪರಿಚಯಿಸುವ ಕೆಲಸ ಮಾಡಲಾಗುತ್ತಿದೆ, ಜನಪದ ಸಾಹಿತಿ ಸಿಂಪಿ ಲಿಂಗಣ್ಣನವರ ನನ್ನನಲ್ಲ ಪುಸ್ತಕವು ಪ್ರಪಂಚದ ಪ್ರತಿ ವಸ್ತುವಿನಲ್ಲಿ ದೇವರನ್ನು ಕಾಣುವ ಮಹಾ ಸಾಹಿತ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಧುರಚೆನ್ನರ ಮತ್ತು ಪಿ.ಧೂಲಾಸಾಹೇಬ ಅವರ ವಂಶಸ್ಥರು ಭಾಗವಹಿಸಿದರು. ಮುಖ್ಯೋಪಾಧ್ಯಾಯ ಬಿ.ಬಿ.ಹೊನಮಾನೆ, ಹಲಸಂಗಿ ಗೆಳೆಯರ ಪ್ರತಿಷ್ಠಾನದ ಸದಸ್ಯರಾದ ಪುಲಕೇಶಿ ಪುರುಷೋತ್ತಮ ಗಲಗಲಿ, ಡಾ. ವಿ.ಡಿ.ಐಹೊಳ್ಳಿ, ಶ್ರೀಮತಿ ದಾಕ್ಷಾಯಣಿ ರಮೇಶ ಬಿರಾದಾರ, ಡಾ. ರಮೇಶ ಸಿದ್ದಣ್ಣ ಕತ್ತಿ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಸ್ವಾಗತಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎ.ಡಿ.ದ್ರಾಕ್ಷಿ, ಶ್ರೀಮತಿ ಶ್ರೀದೇವಿ ಸಿ. ಹಲಸಂಗಿ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ಮಂಜುಳಾ ಹಿಪ್ಪರಗಿ ಕಾರ್ಯಕ್ರಮದಲ್ಲಿ ಜನಪದ ಗೀತೆ ಗಾಯನ ಮಾಡಿದರು. ಚಂದ್ರಶೇಖರ ಅ ಬಗಲಿ ಕಾರ್ಯಕ್ರಮ ನಿರೂಪಿಸಿದರು.

BIJAPUR NEWS patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.