ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಭರವಸೆ
ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ತಾಲ್ಲೂಕು ಶಿಕ್ಷಕರ ಸಭೆ, ಸಮಾರಂಭಗಳಿಗೆ ಅಗತ್ಯವಾದ ಸಭಾಭವನ ನಿರ್ಮಾಣಕ್ಕೆ ತುರ್ತಾಗಿ ಹತ್ತು ಲಕ್ಷ ರೂ.ಗಳ ಅನುದಾನವನ್ನು ನೀಡಲಾಗುವುದು ಎಂದು ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಹೇಳಿದರು.
ಪಟ್ಟಣದ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶನಿವಾರ ಜರುಗಿದ ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿಂದಗಿ ಹಾಗೂ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಡಿ ಜರುಗಿದ ತಾಲ್ಲೂಕು ಹಾಗೂ ಕಲಕೇರಿ ವಲಯದ ಶಿಕ್ಷಕರ ಗುರುಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಬಿ.ಯಡ್ರಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ತಮ್ಮ ಸೇವಾಪುಸ್ತಕಗಳನ್ನು ಶಿಕ್ಷಕರೆಲ್ಲರೂ ಖುದ್ದಾಗಿ ಪರಿಶೀಲಿಸಿಕೊಳ್ಳಲು ಶಿಕ್ಷಣ ಇಲಾಖೆ ಅವಕಾಶವನ್ನು ಕಲ್ಪಿಸಿದೆ. ತಮ್ಮೆಲ್ಲ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಗುವುದು ಎಂದರು.
ಶಿಕ್ಷಕರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಜಿ.ಎಸ್.ಬೇವನೂರ ಮಾತನಾಡಿ, ಚುನಾವಣೆಯನ್ನು ಹೊರತುಪಡಿಸಿ ಉಳಿದೆಲ್ಲಾ ಕಾರ್ಯಗಳಿಂದ ಶಿಕ್ಷಕರೆಲ್ಲರಿಗೂ ಮುಕ್ತಿ ನೀಡಬೇಕು. ಶೀಘ್ರದಲ್ಲೇ ಪಿ ಎಸ್ ಟಿ ಶಿಕ್ಷಕರ ಸಮಸ್ಯೆ ಶೀಘ್ರದಲ್ಲೇ ಇತ್ಯರ್ಥಗೊಳ್ಳಲಿದೆ ಎಂದರು.
ತಾಲ್ಲೂಕಿನ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಚ್.ವಾಲೀಕಾರ ಮಾತನಾಡಿ, ಶಾಸಕರು ಹಾಗೂ ಬಿಇಓ ಅವರಿಗೆ ಮನವಿಯನ್ನು ಸಲ್ಲಿಸಿ, ಶಿಕ್ಷಕರಿಗೆ ಸಭಾಭವನದ ಅವಶ್ಯಕತೆ ಇರುವುದನ್ನು ತಿಳಿಸಿದರು. ನಂತರ ಗ್ರಾಮೀಣ ಕೃಪಾಂಕ ಶಿಕ್ಷಕರ ಬಡ್ತಿ ಕುರಿತಾಗಿ ಮನವಿಯನ್ನು ಸಲ್ಲಿಸಲಾಯಿತು.
ಅಕ್ಷರ ದಾಸೋಹ ಅಧಿಕಾರಿ ಅರವಿಂದ ಡೋಣೂರ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಪಿ.ಬಿರಾದಾರ ಸಿದ್ಧೇಶ್ವರ ಶಿಕ್ಷಣ ಸಂಸ್ಥೆ ಮುಖ್ಯಸ್ಥ ವಿ.ಕೆ.ಪಾಟೀಲ, ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ಅಶೋಕ ಗಜಾಕೋಶ, ಎಸ್.ಎಮ್.ಕಪನಿಂಬರಗಿ, ಪಿ.ಸಿ.ತಳಕೇರಿ, ಸಿ.ಬಿ.ಗಡಗಿ, ಶಿವು ಕೊಟೀನ, ಬಸವರಾಜ ನಾಗರಾಳ, ಎಸ್.ಡಿ.ಮುಳಸಾವಳಗಿ, ದಾನು ರಾಠೋಡ, ಅಣ್ಣು ಭಜಂತ್ರಿ, ವಿ.ಎನ್.ಮದ್ದರಕಿ, ಪಾರ್ವತಿ ಪೂಜಾರಿ, ರೇಣುಕಾ ಇಂಡಿ, ಜಯಶ್ರೀ ನಾಯಕ, ಆಶಾ ರಾಠೋಡ,ಪುಷ್ಪಾ ರೂಗಿ, ನಾಗೇಶ ನಾಗೂರ, ರವಿ ಕೊಟೀನ, ಎಸ್.ಎಮ್.ರಾಠೋಡ, ರಮೇಶ ಜನಗೊಂಡ, ಬಿ.ವಿ.ಚಂಡಕಿ, ರಾಘವೇಂದ್ರ ಕುಲಕರ್ಣಿ, ಪಿ.ಎಸ್.ಮಿಂಚನಾಳ, ಗೊಲ್ಲಾಳ ಬಿರಾದಾರ, ಸೇರಿದಂತೆ ಶಿಕ್ಷಕರು ಹಾಗೂ ಸಿಬ್ಬಂದಿ ಇದ್ದರು.

