Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಧಿಕಾರವಿದ್ದಾಗ ನವರಂಗಿ ಆಟ, ವಿಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ
(ರಾಜ್ಯ ) ಜಿಲ್ಲೆ

ಅಧಿಕಾರವಿದ್ದಾಗ ನವರಂಗಿ ಆಟ, ವಿಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಪರಾಕಿ

ಬೆಂಗಳೂರು: ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ. ಅಧಿಕಾರ ಇದ್ದಾಗ ಹಗಲುವೇಷ, ವಿರೋಧಪಕ್ಷದಲ್ಲಿದ್ದಾಗ ರೋಷಾವೇಶ. ಸನ್ಮಾನ್ಯ ಅಶೋಕ ಅವರೇ, ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಾರಿಗೆ ನೌಕರರು ಮೊದಲ ಬಾರಿ ವೇತನ‌ ಪರಿಷ್ಕರಣೆಗಾಗಿ ಮುಷ್ಕರ ನಡೆಸಿದಾಗ ಸಾರಿಗೆ ಸಚಿವರಾಗಿದ್ದವರು ನೀವೇ ಅಲ್ಲವೇ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ‌ ಸುದೀರ್ಘ ಮುಷ್ಕರ ನಡೆದಾಗಲೂ ಸಾರಿಗೆ ಸಚಿವರಾಗಿ ಕೈಕಟ್ಟಿ ಕೂತು ತಮ್ಮ ಅಸಾಮರ್ಥ್ಯ ಪ್ರದರ್ಶಿಸಿದ್ದೂ ನೀವೇ ಅಲ್ಲವೇ? ತಮ್ಮ ಪಕ್ಷದ ಅಧಿಕಾರದ ಅವಧಿಯಲ್ಲಿ ಸಾರಿಗೆ ನೌಕರರ ತಿಂಗಳ ವೇತನ ಹೇಗೆ ಪಾವತಿಯಾಗುತ್ತಿತ್ತು ಎಂದು ಮಾಹಿತಿ ಪಡೆದು ತಿಳಿಸುವಿರಾ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿ ಸಾರಿಗೆ ನೌಕರರಿಗೆ ಅರ್ಧ ಸಂಬಳ, ಈ ತಿಂಗಳ ಸಂಬಳ ಮುಂದಿನ ತಿಂಗಳು ನೀಡುತ್ತಿದ್ದಾಗ ಅಧಿಕಾರದಲ್ಲಿದ್ದದ್ದು ನಿಮ್ಮದೇ ಪಕ್ಷ ಅಲ್ಲವೇ?
ನಮ್ಮ ಸರ್ಕಾರದ ಅವಧಿಯಲ್ಲಿ 2012-2016 ರವರೆಗೆ ವೇತನ ಹೆಚ್ಚಳ ಮಾಡಿ ಅದನ್ನು 2012 ರಿಂದಲೇ ಪೂರ್ವಾನ್ವಯ ಆಗುವಂತೆ ಜಾರಿಗೊಳಿಸಿದ್ದೆವು. 2016-2020 ರವರೆಗೆ ವೇತನ ಹೆಚ್ಚಳ ಮಾಡಿದಾಗ 2016 ರಿಂದ ಜಾರಿ ಮಾಡಿದ್ದೆವು.
ಆದರೆ ತಮ್ಮ‌ ಪಕ್ಷದ ಆಡಳಿತದ ಅವಧಿಯಲ್ಲಿ ಸಾರಿಗೆ ನೌಕರರು 2020ರಿಂದಲೇ ವೇತನ ಹೆಚ್ಚಳ ಮಾಡಬೇಕೆಂದು ಬೇಡಿಕೆ ಸಲ್ಲಿಸಿದ್ದರೂ 01-03-2023ರಿಂದ ಜಾರಿಗೊಳಿಸಿ ( ಸರ್ಕಾರದ ಆದೇಶ ಸಂಖ್ಯೆ: ಟಿಡಿ 12 ಟಿಸಿಬಿ 2023, ಬೆಂಗಳೂರು) ನೌಕರರಿಗೆ ಅನ್ಯಾಯ ಮಾಡಿದ್ದು ನೀವೇ ಅಲ್ಲವೇ? ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕಾತಿ ಮತ್ತು ಹೊಸ ಬಸ್ ಸೇರ್ಪಡೆ ಸ್ಥಗಿತಗೊಂಡಿತ್ತು, ನೌಕರರ ಭವಿಷ್ಯ ನಿಧಿ ಮತ್ತು ಡೀಸೆಲ್ ಹಣ ಪಾವತಿ, ಇತರೆ ಹೊಣೆಗಾರಿಕೆ ಹೀಗೆ ರೂ.5,900 ಕೋಟಿ ಬಾಕಿ ಇತ್ತು ಎಂಬುದರ‌ ಬಗ್ಗೆ ನಿಮಗೆ ಮಾಹಿತಿಯಿದೆಯೇ? ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ಪಕ್ಷದ ಅಧಿಕಾರವಾಧಿಯಲ್ಲಿ ಸಂಪೂರ್ಣ ಸ್ಥಗಿತಗೊಂಡಿದ್ದ ನೇಮಕಾತಿಗೆ‌ ಚಾಲನೆ ನೀಡಿದವರು ನಾವು. 10,000 ಹೊಸ‌ ನೇಮಕಾತಿ ಮಾಡಿದ್ದೆವು. ಇದರಲ್ಲಿ 8 ವರ್ಷಗಳಿಂದ ಅನುಕಂಪದ ಆಧಾರದ ನೌಕರಿ ನೀಡದಿರುವ 1,000 ಮೃತರ ಅವಲಂಬಿತರು ಇದ್ದಾರೆ. 5,200 ಹೊಸ ಬಸ್ಸುಗಳ ಸೇರ್ಪಡೆ ಮಾಡಿದ್ದೇವೆ. ಕನಿಷ್ಠ ಈ ಮಾಹಿತಿಯಾದರೂ ನಿಮಗೆ ತಿಳಿದಿಯೇ? ತಮ್ಮ ಕಾಲದ ನೌಕರರ ಭವಿಷ್ಯ ನಿಧಿ ಮತ್ತು ಡೀಸೆಲ್‌ ಮೊತ್ತ ಪಾವತಿ ಬಾಕಿ ಪಾವತಿಗಾಗಿ ರೂ.2,000 ಕೋಟಿ ಹಣವನ್ನು ಬ್ಯಾಂಕ್ ಗಳಿಂದ ಸಾಲ‌ ಪಡೆಯಲು ಅವಕಾಶ ಕಲ್ಪಿಸಿ, ಅದರ ಅಸಲು ಮತ್ತು ಬಡ್ಡಿಯನ್ನು ನಮ್ಮ ಸರ್ಕಾರ ಮರುಪಾವತಿ ಮಾಡುತ್ತಿದೆ. ಇದೇನಾ ನಿಮ್ಮ ಕಾಲದ ಸರ್ಕಾರದ ಸಾಧನೆ? ಎಂದು ಕಿಡಿ ಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು. ನಿಮ್ಮ ಅಧಿಕಾರದ ಲಾಲಸೆಗೆ, ದುರಾಡಳಿತಕ್ಕೆ ಜನಸಾಮಾನ್ಯರು ಇನ್ಯಾವ್ಯಾವ ರೀತಿ ಪರದಾಡಬೇಕು, ಇನ್ನೆಷ್ಟು ಕಷ್ಟ ಅನುಭವಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಇದರ ಪರಿಣಾಮವಾಗಿ ರಾಜ್ಯಾದ್ಯಂತ ಬಸ್ ಸಂಚಾರ ಭಾಗಶಃ ಸ್ಥಗಿತಗೊಂಡಿದೆ.
ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಸ್ಸಿಲ್ಲ..ಬಸ್ಸಿಲ್ಲ, ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಬಸ್ಸಿಲ್ಲ. ನೌಕರರು, ಉದ್ಯೋಗಿಗಳು ಕೆಲಸಕ್ಕೆ ಹೋಗಲು ಬಸ್ಸಿಲ್ಲ. ನೆಂಟರಿಷ್ಟರ ಮನೆಗಳಿಗೆ, ಶುಭ ಸಮಾರಂಭಗಳಿಗೆ, ಸಾವು-ನೋವಿಗೆ ಹೋಗಲು ಬಸ್ಸಿಲ್ಲ. ಇದು ಬಹುಪಾಲು ಕನ್ನಡಿಗರ ಇವತ್ತಿನ ಬವಣೆ ಎಂದು ವಿವರಿಸಿದ್ದಾರೆ.

BIJAPUR NEWS bjp congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.