Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿತ್ಯವೂ ಹೃದಯದ ಕುರಿತು ಕಾಳಜಿ ವಹಿಸಿ :ಡಾ.ಹುಬ್ಬಳ್ಳಿ
(ರಾಜ್ಯ ) ಜಿಲ್ಲೆ

ನಿತ್ಯವೂ ಹೃದಯದ ಕುರಿತು ಕಾಳಜಿ ವಹಿಸಿ :ಡಾ.ಹುಬ್ಬಳ್ಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಶ್ವ ಹೃದಯ ದಿನಾಚರಣೆ ಮತ್ತು ವಿಶ್ವ ರೇಬಿಸ್ ದಿನಾಚರಣೆ ಜನಜಾಗೃತಿ ಜಾಥಾಕ್ಕೆ ಚಾಲನೆ

ವಿಜಯಪುರ: ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ವಿಶ್ವಾದ್ಯಂತ ಪ್ರತಿ ವರ್ಷ ೧೭.೩ ಮಿಲಿಯನ್ ಜನರು ಸಾವಿಗಿಡಾಗುತ್ತಿದ್ದಾರೆ. ನಿಯಮಿತ ಯೋಗಾಭ್ಯಾಸ ಅಳವಡಿಸಿಕೊಂಡು ನಿತ್ಯವೂ ಹೃದಯದ ಕುರಿತು ಕಾಳಜಿ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ಕರೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ ಎನ್.ಸಿ.ಡಿ.ಘಟಕ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಜಿಲ್ಲಾ ಶಾಖೆ ಡಾ|| ಬಿದರಿಯವರ ಅಶ್ವಿನಿ ಆಸ್ಪತ್ರೆ ಹಾಗೂ ಅಶ್ವಿನಿ ಇನ್ಸಿಟ್ಯೂಟ್ ವಿವಿದ ನರ್ಸಿಂಗ್ ಕಾಲೇಜಗಳು ಇವರ ಸಹಯೋಗದಲ್ಲಿ ಸೆ.೩೦ರ ಶನಿವಾರ ಆಯೋಜಿಸಲಾದ ವಿಶ್ವ ಹೃದಯ ದಿನಾಚರಣೆ ಮತ್ತು ವಿಶ್ವ ರೇಬಿಸ್ ದಿನಾಚರಣೆ ಜನಜಾಗೃತಿ ಜಾಥಾಕ್ಕೆ ಅಶ್ವಿನಿ ಆಸ್ಪತ್ರೆಯ ಮುಖ್ಯಸ್ಥ ಚಿಕ್ಕಮಕ್ಕಳ ತಜ್ಞ ಡಾ|| ಎಲ್.ಎಚ್ ಬಿದರಿಯವರೊಂದಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಜಗತ್ತಿನಾದ್ಯಂತ ಹೆಚ್ಚು ಮನುಷ್ಯ ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿರುವುದು ಹೃದಯ ಸಂಬಂಧಿ ಕಾಯಿಲೆಗಳು ಈ ಕಾಯಿಲೆಗಳಿಂದಾಗಿ ವಿಶ್ವಾದ್ಯಂತ ಪ್ರತಿ ವರ್ಷ ೧೭.೩ ಮಿಲಿಯನ್ ಜನರು ಸಾವಿಗಿಡಾಗುತ್ತಿದ್ದಾರೆ . ದಿನನಿತ್ಯ ಕನಿಷ್ಠ ೩೦ ನಿಮಿಷ ಬಿರುಸಿನ ನಡಿಗೆ, ವಯಸ್ಸಿಗನುಗುಣವಾಗಿ ವ್ಯಾಯಾಮ ದಿನಾಲೂ ೨೦ ನಿಮಿಷ ನೀರಿನಲ್ಲಿ ಈಜಾಡುವುದು, ಸೇರಿದಂತೆ ನಿಯಮಿತ ಯೋಗಾಭ್ಯಾಸ ಶರೀರಕ್ಕೆ ಹಾಗೂ ಹೃದಯಕ್ಕೆ ಉತ್ತಮವಾಗಿದ್ದು, . ನಿಯಮಿತ ಧ್ಯಾನದಿಂದ ಮಾನಸಿಕ ಒತ್ತಡ ಹಾಗೂ ಉದ್ವೇಗವನ್ನು ತಡೆಗಟ್ಟುಬಹುದು ಎಂದು ಹೇಳಿದರು.
ಅಶ್ವಿನಿ ಆಸ್ಪತ್ರೆಯ ಮುಖ್ಯಸ್ಥ ಚಿಕ್ಕಮಕ್ಕಳ ತಜ್ಞ ಡಾ|| ಎಲ್.ಎಚ್ ಬಿದರಿ ಅವರು ಮಾತನಾಡಿ, ಧೂಮಪಾನದಿಂದ ರಕ್ತದಲ್ಲಿ ಕೊಬ್ಬಿನಾಂಶ ಹೆಪ್ಪುಗಟ್ಟಿ ರಕ್ತನಾಳಗಳನ್ನು ಕುಗ್ಗಿಸುತ್ತದೆ, ಇದರಿಂದ ಹೃದಯಾಘಾತವಾಗುವ ಸಾಧ್ಯತೆ ಹೆಚ್ಚಾಗುತ್ತದೆ. ನಿಯಮಿತ ವ್ಯಾಯಾಮದಿಂದ ಹೃದಯಾಘಾತವನ್ನು ತಡೆಗಟ್ಟಿಬಹುದು, ಒಂದು ವೇಳೆ ಹೃದಯಾಘಾತವಾದರೂ ಬದುಕುಳಿಯುವ ಸಾಧ್ಯತೆ ಹೆಚ್ಚು-ಕಾಫಿ, ಚಹಾ ಸೇವನೆ ಮಿತವಾಗಿರಲಿ. ಸಕ್ಕರೆ ಕಾಯಿಲೆ (ಮಧುಮೇಹ)ಯಿಂದ ಹೃದಯಾಘಾತವಾಗುವ ಸಂಭವ ಹೆಚ್ಚಾಗಿರುವುದರಿಂದ ಸಕ್ಕರೆ ಕಾಯಿಲೆಯವರು ಸರಿಯಾದ ಚಿಕಿತ್ಸೆಯನ್ನು ಪಡೆಯಬೇಕು. ರಕ್ತದಲ್ಲಿನ ಕೊಬ್ಬಿನಾಂಶ ಹಾಗೂ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ನಿಮ್ಮ ತೂಕ ಹಾಗೂ ಆಹಾರಕ್ರಮದ ಬಗ್ಗೆ ಕಾಳಜಿವಹಿಸಿದರೆ ಹೃದಯಾಘಾತವನ್ನು ತಪ್ಪಿಸಬಹುದೆಂದು ಹೇಳಿದರು.
ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ: ಕವಿತಾ ದೊಡ್ಡಮನಿ, ಜಿಲ್ಲಾ ಮಲೇರಿಯಾ ಅಧಿಕಾರಿಗಳಾದ ಡಾ: ಜೈಬುನಿಸಾ ಬಿಳಗಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳಾದ ಡಾ|| ಸಂಪತ ಗುಣಾರಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಕೆ.ಡಿ.ಗುಂಡಬಾವಡಿ, ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ|| ಪರಸುರಾಮ ಹಿಟ್ಟನಳ್ಳಿ, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿಗಳಾದ ಎಸ್.ಜಿ. ಮುರನಾಳ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಿ.ಎಮ್.ಕೊಲೂರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಎನ್ ಆರ್ ಬಾಗವಾನ ಅಶ್ವಿನಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದ, ಜಿಲ್ಲಾ ಎನ್.ಸಿ.ಡಿ ಘಟಕದ ಸಿಬ್ಬಂದಿ, ನಗರ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಅಧಿಕಾರಿಗಳು-ಸಿಬ್ಬಂದಿಗಳು ಉಪಸ್ಥಿತರಿದ್ದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ ಕಾರ್ಯಕ್ರಮ ನಿರೂಪಿಸಿದರು.

BIJAPUR NEWS public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ
    In (ರಾಜ್ಯ ) ಜಿಲ್ಲೆ
  • ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್
    In (ರಾಜ್ಯ ) ಜಿಲ್ಲೆ
  • ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಭೈರವಾಡಗಿ ಪಿಕೆಪಿಎಸ್ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ರೈತರಲ್ಲಿ ಆತಂಕ ತಂದ ಅಕಾಲಿಕ ಮಳೆ
    In (ರಾಜ್ಯ ) ಜಿಲ್ಲೆ
  • ಗೋವಿನ ಜೋಳ & ತೊಗರಿ ಖರೀದಿ ಕೇಂದ್ರ ತೆರೆಯಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.