Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
(ರಾಜ್ಯ ) ಜಿಲ್ಲೆ

ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಹಾನಗರ ಪಾಲಿಕೆ ೨೨ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರರನ್ನು ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ದಿನಾಂಕ:೧೧-೦೮-೨೦೨೫ ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ದಿನಾಂಕ:೧೧-೦೮-೨೦೨೫ರ ಬೆಳಿಗ್ಗೆ ೬ ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶಿಸಿದ್ದಾರೆ.
ಈ ಸಮಯದಲ್ಲಿ ನಿಷೇಧಿತ ಪ್ರದೇಶದಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡಿ ಓಡಾಡುವುದನ್ನು ನಿಷೇಧಿಸಿದೆ..ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ ೨೦೦ ಮೀಟರ್ ಪ್ರದೇಶದಲ್ಲಿ ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು, ಕ್ಷಾರಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳನ್ನು ಈ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ, ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.
ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕದಡುವಂತೆ ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಯಾವುದೇ ವ್ಯಕ್ತಿ ಬಹಿರಂಗವಾಗಿ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರ್ಕಾರ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರಿತ್ಯ ಕ್ರಮ ಜರುಗಿಸಲಾಗುವುದು.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಹೊರತುಪಡಿಸಿ ಮಾರ್ಗಸೂಚಿ-ನಿಯಮಗಳನ್ನು ಪಾಲಿಸುವಂತೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೦೭ ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ಎಸ್‌ಎಸ್‌ಎಲ್‌ಸಿಪರೀಕ್ಷಾ ಕೇಂದ್ರಗಳಿಗೆ ಡಿಸಿ ಡಾ.ಆನಂದ ಕೆ. ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.