Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಈ ರಾಜ್ಯ ಹೆದ್ದಾರಿಯಲ್ಲಿ ತಗ್ಗು-ದಿನ್ನೆ ಹೊಂಡಗಳದೇ ಸಾಮ್ರಾಜ್ಯ!
(ರಾಜ್ಯ ) ಜಿಲ್ಲೆ

ಈ ರಾಜ್ಯ ಹೆದ್ದಾರಿಯಲ್ಲಿ ತಗ್ಗು-ದಿನ್ನೆ ಹೊಂಡಗಳದೇ ಸಾಮ್ರಾಜ್ಯ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಡಂಗಲ್ ರಾಜ್ಯ ಹೆದ್ದಾರಿಯಲ್ಲಿನ ತಗ್ಗು-ಗುಂಡಿಗಳು ಜಲಮಯ | ಕಣ್ತೆರೆಯದ ಅಧಿಕಾರಿಗಳು

ಉದಯರಶ್ಮಿ ದಿನಪತ್ರಿಕೆ

ವರದಿ: ರಶ್ಮಿ ನೂಲಾನವರ
ಸಿಂದಗಿ: ಇದು ರಾಜ್ಯ ಹೆದ್ದಾರಿ. ಆದರೆ ಸ್ಥಳೀಯ ರಸ್ತೆಗಿಂತಲೂ ಹೆಚ್ಚು ಹಾಳಾಗಿದೆ. ನಿತ್ಯ ಈ ರಸ್ತೆ ಮೇಲೆ ಸಾವಿರಾರು ವಾಹನಗಳು ಸಂಚರಿಸುತ್ತವೆ. ಶಹಾಪೂರ, ಮಳ್ಳಿ, ಕೆಂಭಾವಿ, ಗೋಲಗೇರಿ, ಸಿಂದಗಿಗೆ ಬರಲು ಇದೇ ಪ್ರಮುಖ ದಾರಿಯಾದರೂ ಈ ರಸ್ತೆ ಇದುವರೆಗೂ ದುರಸ್ತಿಯಾಗದಿರುವುದು ದುರಂತವೇ ಸರಿ.
ಈ ರಸ್ತೆಯುದ್ದಕ್ಕೂ ತಗ್ಗು-ದಿನ್ನೆಗಳು ನಿರ್ಮಾಣವಾಗಿವೆ. ಪ್ರತಿದಿನ ಹಲವು ಬೈಕ್ ಸವಾರರು, ವಾಹನ ಚಾಲಕರು ಸಂಚರಿಸಲು ಪರದಾಡುವಂತಾಗಿದೆ.
ಹೇಳಿಕೊಳ್ಳಲು ಮಾತ್ರ ಇದು ಕೊಡಂಗಲ್ ರಾಜ್ಯ ಹೆದ್ದಾರಿ. ಆದರೆ ಈ ಹೆದ್ದಾರಿಯಲ್ಲಿ ಒಮ್ಮೆ ಸಂಚರಿಸಿದರೆ ಸಾಕು ಹೊಲದ ರಸ್ತೆಯಲ್ಲಿ ಸಂಚರಿಸುವ ಅನುಭವವಾಗುತ್ತದೆ. ಈ ರಸ್ತೆಯ ಮೇಲೆ ನಿತ್ಯ ಇಲ್ಲಿಂದ ಪ್ರಯಾಣ ಬೆಳೆಸುವವರ ಸ್ಥಿತಿ ಅಧೋಗತಿ ಎನ್ನುವಂತಾಗಿದೆ. ಹೇಳೋರು-ಕೇಳೋರು ಯಾರು ಇಲ್ಲದಂತಾಗಿದೆ ಎಂದು ಸವಾರರು ಬೇಸರ ವ್ಯಕ್ತಪಡಿಸುತ್ತಾರೆ.
ಮಳೆ ಬಂದರೆ ಸಾಕು ಈ ರಸ್ತೆಯಲ್ಲಿನ ತಗ್ಗು-ಗುಂಡಿಗಳ ಜಲಮಯವಾಗಲಿದ್ದು, ವಾಹನ ಸವಾರರಿಗೆ ರಸ್ತೆಯೇ ಗೊತ್ತಾಗುತ್ತಿಲ್ಲ. ಇಂತಹ ದುಸ್ಥಿತಿಯೆಡೆಯ ಸುಧಾರಣೆಗೆ ಸರಕಾರ ಮೊದಲ ಆದ್ಯತೆ ನೀಡಬೇಕು. ಈ ಹೆದ್ದಾರಿಯು ಸಿಂದಗಿಯಿಂದ ಪ್ರಾರಂಭವಾಗುತ್ತದೆ. ಮನ್ನಾಪೂರ, ಯಂಕಂಚಿ, ಗೋಲಗೇರಿ ಸೇರಿದಂತೆ ವಿವಿಧೆಡೆ ರಸ್ತೆಯ ಮಧ್ಯದಲ್ಲಿಯೇ ಐದಾರು ಇಂಚುಗಳಷ್ಟು ಆಳ ಮತ್ತು ಅಗಲವಾದ ಹೊಂಡಗಳಾಗಿವೆ. ಹೊಂಡಗಳನ್ನು ತಪ್ಪಿಸುವ ಭರದಲ್ಲಿ ವಾಹನಗಳು ಮುಖಾಮುಖಿ ಡಿಕ್ಕಿಯಾಗುವ ಸಾಧ್ಯತೆಗಳಿವೆ. ಇತ್ತೀಚೆಗೆ ಅಸಂತಾಪೂರ ಸಾರಿಗೆ ಇಲಾಖೆಯ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಡಾಂಬರ್ ಕಿತ್ತುಹೋಗಿರುವ ಪರಿಣಾಮ ಪ್ರಯಾಣಿಕರ ಸುಗಮ ಸಂಚಾರಕ್ಕೆ ಕಂಟಕವಾಗಿ ಪರಿಣಮಿಸಿದೆ. ಈ ರಸ್ತೆಗೆ ಸಂಚರಿಸುವ ಅದೇಷ್ಟೋ ವಾಹನಗಳು ಅನೇಕ ಬಾರಿ ರಸ್ತೆ ಮಧ್ಯದಲ್ಲಿ ಹಾಳಾಗಿ ನಿಂತಿರುವ ಅನೇಕ ಉದಾಹರಣೆಗಳು ಇವೆ. ಸಂಬಂಧಿಕರು ಮಾತ್ರ ಇದಕ್ಕೂ ನಮಗೂ ಏನು ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಕಳೆದ ಎರಡು-ಮೂರು ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹೆಚ್ಚಿನ ಹೊಂಡಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ವಾಹನಗಳ ಓಡಾಟ ಕ್ಕೆ ಮತಷ್ಟು ಸಮಸ್ಯೆಯಾಗುತ್ತಿದೆ. ಆದ್ದರಿಂದ ಇನ್ನಾದರೂ ಈ ರಸ್ತೆ ದುರಸ್ತಿಗೆ ಸಂಬಂಧಿಕರು ಮುಂದಾಗಲಿ ಎಂಬುದು ಸಾರ್ವಜನಿಕರ ಆಶಯವಾಗಿದೆ.

“ಕೊಡಂಗಲ್ ರಾಜ್ಯ ಹೆದ್ದಾರಿಯ ಸ್ಥಿತಿ ಚಿಂತಾಜನಕವಾಗಿದೆ. ಆ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಕಾರಣ ಇದಕ್ಕೆ ಸಂಬಂದಿಸಿದ ಜನಪ್ರತಿನಿಧಿಗಳು, ಅಧಿಕಾರಿಗಳು ಆದಷ್ಟು ಬೇಗ ಸರಿಪಡಿಸಬೇಕು.”

– ಚಂದ್ರಶೇಖರ ಕೆಂಭಾವಿ
ಸಮಾಜ ಸೇವಕರು

“ಯಂಕಂಚಿ ಗ್ರಾಮದಿಂದ ಸಿಂದಗಿ ನಗರಕ್ಕೆ ಹೋಗಬೇಕಾದರೆ ಇದು ಪ್ರಮುಖ ರಾಜ್ಯ ಹೆದ್ದಾರಿ ರಸ್ತೆ. ಪ್ರತಿನಿತ್ಯ ಸಂಚಿರಿಸುವ ನಮಗೆ ಇದರಿಂದ ತುಂಬಾ ಕಷ್ಟವಾಗುತ್ತಿದೆ. ಸ್ವಲ್ಪ ಆಯಾ ತಪ್ಪಿದರೂ ನಮ್ಮ ಕೈ-ಕಾಲು ಮುರಿಯುತ್ತೋ ಏನೋ ಎಂಬಂತಾಗಿದೆ.”

*- ಸಿದ್ದರಾಮ ಡಗ್ಗಾ*

ಯಂಕಂಚಿ ಗ್ರಾಮದ ನಿವಾಸಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೦೭ ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ಎಸ್‌ಎಸ್‌ಎಲ್‌ಸಿಪರೀಕ್ಷಾ ಕೇಂದ್ರಗಳಿಗೆ ಡಿಸಿ ಡಾ.ಆನಂದ ಕೆ. ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.