Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ :ಸಚಿವ ಶಿವಾನಂದ ಪಾಟೀಲ
(ರಾಜ್ಯ ) ಜಿಲ್ಲೆ

ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ :ಸಚಿವ ಶಿವಾನಂದ ಪಾಟೀಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪಪೂ ಕಾಲೇಜುಗಳ ಅಥ್ಲೆಟಿಕ್ಸ ಕ್ರೀಡಾಕೂಟ ಹಾಗೂ ಬಾಲ್ ಬ್ಯಾಡ್ಮಿಂಟನ್ ಟೆನ್ನಿಸ್ ವ್ಹಾಲಿಬಾಲ್ ಪಂದ್ಯಾವಳಿ

ಬಸವನಬಾಗೇವಾಡಿ: ಕ್ರೀಡೆಯಲ್ಲಿ ಸೋಲು-ಗೆಲವು ಮುಖ್ಯವಲ್ಲ. ಕ್ರೀಡೆಯಲ್ಲಿ ಕ್ರೀಡಾಮನೋಭಾವ, ಹೃದಯವೈಶಾಲ್ಯತೆಯಿಂದ ಭಾಗವಹಿಸುವುದು ಮುಖ್ಯ. ಗ್ರಾಮೀಣ ಮಟ್ಟದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಮಿಂಚುವಂತಾಗಲಿ ಎಂದು ಜವಳಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಹಾಗೂ ಬಸವೇಶ್ವರ ಸರ್ಕಾರಿ ಪಪೂ ಕಾಲೇಜಿನ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬಸವನಬಾಗೇವಾಡಿ, ನಿಡಗುಂದಿ, ಕೊಲ್ಹಾರ ತಾಲೂಕು ಪಪೂ ಕಾಲೇಜುಗಳ ಅಥ್ಲೇಟಿಕ್ಸ ಕ್ರೀಡಾಕೂಟ ಹಾಗೂ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಟೆನ್ನಿಸ್ ವ್ಹಾಲಿಬಾಲ್ ಪಂದ್ಯಾವಳಿಯನ್ನು ಸಸಿಗೆ ನೀರುಣಿಸಿ ಉದ್ಘಾಟಿಸಿದ ನಂತರ ಕ್ರೀಡಾಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕ್ರೀಡೆಯು ಯಾರ ಸ್ವತ್ತಲ್ಲ. ಯಾರೂ ಛಲದಿಂದ ಕ್ರೀಡೆಯಲ್ಲಿ ತೊಡಗಿಕೊಳ್ಳುತ್ತಾರೋ ಅವರಿಗೆ ಕ್ರೀಡೆ ಒಲಿಯುತ್ತದೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಯಲ್ಲಿ ನಿರಂತರ ಅಧ್ಯಯನದೊಂದಿಗೆ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಬೇಕು ಎಂದರು.
ಕ್ರೀಡಾ ಜ್ಯೋತಿ ಸ್ವೀಕರಿಸಿದ ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಮಾತನಾಡಿ, ಇಂದು ಸ್ಪರ್ಧಾತ್ಮಕ ಯುಗವಾಗಿರುವದರಿಂದಾಗಿ ಪಾಲಕರು ತಮ್ಮ ಮಕ್ಕಳು ಹೆಚ್ಚು ಅಂಕ ಪಡೆಯಬೇಕೆಂಬ ಧಾವಂತದಲ್ಲಿ ಕ್ರೀಡಾಕೂಟಕ್ಕೆ ಒತ್ತು ನೀಡದೇ ಇರುವದನ್ನು ನೋಡುತ್ತೇವೆ.ಇಂದು ಸಾಕಷ್ಟು ಸೌಲಭ್ಯಗಳು ಇರುವದರಿಂದಾಗಿ ಇದರ ಸದುಪಯೋಗಪಡೆದುಕೊಂಡು ವಿದ್ಯಾರ್ಥಿಗಳು ಉತ್ತಮ ಕ್ರೀಡಾಪಟುಗಳಾಗಿ ನಾಡಿನ,ದೇಶದ ಕೀರ್ತಿಯನ್ನು ತರಬೇಕೆಂದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಎಸ್.ಡಿ.ಪಾಟೀಲ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪಪೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ, ಮುಖಂಡರಾದ ಈರಣ್ಣ ಪಟ್ಟಣಶೆಟ್ಟಿ, ಬಿ.ಕೆ.ಕಲ್ಲೂರ, ಅನಿಲ ಅಗರವಾಲ, ಸುರೇಶ ಹಾರಿವಾಳ, ಶೇಖರ ಗೊಳಸಂಗಿ, ಶಂಕರಗೌಡ ಬಿರಾದಾರ, ಎಂ.ಬಿ.ಆದಿಗೊಂಡ, ಸಂಗಮೇಶ ಓಲೇಕಾರ, ರವಿ ರಾಠೋಡ, ಸಂಜೀವ ಕಲ್ಯಾಣಿ, ಕಮಲಸಾಬ ಕೊರಬು, ಪುರಸಭೆ ಸದಸ್ಯೆ ಜಗದೇವಿ ಗುಂಡಳ್ಳಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ, ಉಪಪ್ರಾಚಾರ್ಯ ರಮೇಶ ಪೂಜಾರಿ ಇತರರು ಇದ್ದರು. ದೈಹಿಕ ಶಿಕ್ಷಣ ಉಪನ್ಯಾಸಕ ಎಂ.ಬಿ.ಹೂಗಾರ ಪ್ರತಿಜ್ಞಾ ವಿಧಿ ಬೋಧಿಸಿದರು.
ಚೈತ್ರಾ ಸಣ್ಣತಂಗಿ ಸಂಗಡಿಗರು ಪ್ರಾರ್ಥಿಸಿದರು. ರಾಜಶೇಖರ ಐನಾಪೂರ ಸ್ವಾಗತಿಸಿದರು. ಎಸ್.ವ್ಹಿ.ಅಗಸರ ನಿರೂಪಿಸಿದರು. ಜಿ.ಎಸ್.ಡೋಮನಾಳ ವಂದಿಸಿದರು.

BIJAPUR NEWS congress patil public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.