ವಿಜಯಪುರ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಎಂ.ಎಸ್.ಕರಡಿ ಹಾಗೂ ಉಪಮೇಯರ್ ಆಗಿ ಸುಮಿತ್ರಾ ಜಾಧವ ಆಯ್ಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಾನಗರ ಪಾಲಿಕೆಯಲ್ಲಿ ಕಮಲ ಅರಳಿದ್ದು, ನೂತನ ಮೇಯರ್ ಆಗಿ ಆಯ್ಕೆಯಾದ ಎಂ.ಎಸ್. ಕರಡಿ ಹಾಗೂ ಉಪಮೇಯರ್ ಆಗಿ ಆಯ್ಕೆಯಾದ ಸುಮಿತ್ರಾ ಜಾಧವ ಅವರು ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದರು.
ಈ ವೇಳೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಪಾಲಿಕೆಯ ಬಿಜೆಪಿ ಸದಸ್ಯರು ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿದ ನೂತನ ಮೇಯರ್ ಎಂ.ಎಸ್. ಕರಡಿ ಮಾತನಾಡಿ, ನಗರದ ಸರ್ವತೋಮುಖ ಪ್ರಗತಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುವೆ ಎಂದರು.
ಉಪಮೇಯರ್ ಸುಮಿತ್ರಾ ಜಾಧವ ಮಾತನಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಪಾಲಿಕೆ ಸದಸ್ಯರಾದ ರಾಜಶೇಖರ ಮಗಿಮಠ, ಶಿವರುದ್ರ ಬಾಗಲಕೋಟ, ಮಳುಗೌಡ ಪಾಟೀಲ, ರಾಹುಲ್ ಜಾಧವ, ಸ್ವಪ್ನಾ ಕಣಮುಚನಾಳ, ಪ್ರೇಮಾನಂದ ಬಿರಾದಾರ, ವಿಠ್ಠಲ ಹೊಸಪೇಟ, ಗಿರೀಶ ಪಾಟೀಲ, ಕಿರಣ ಪಾಟೀಲ, ಜವಾಹರ ಗೋಸಾವಿ, ಭೀಮಾಶಂಕರ ಹದನೂರ, ಮಂಜುನಾಥ ಮೀಸೆ, ಮಹೇಂದ್ರ ನಾಯಕ, ಚಿದಾನಂದ ಚಲವಾದಿ, ಮಲ್ಲು ಕಲಾದಗಿ, ಆನಂದ ಮುಚ್ಚಂಡಿ, ಕಾಂತು ಶಿಂಧೆ, ವಿಜಯ ಜೋಶಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

