Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೂಲನಂದೀಶ್ವರ ಜಾತ್ರೆ ಪಲ್ಲಕ್ಕಿ ಉತ್ಸವ ಸಂಪನ್ನ
(ರಾಜ್ಯ ) ಜಿಲ್ಲೆ

ಮೂಲನಂದೀಶ್ವರ ಜಾತ್ರೆ ಪಲ್ಲಕ್ಕಿ ಉತ್ಸವ ಸಂಪನ್ನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ (ಬಸವೇಶ್ವರ) ಜಾತ್ರಾಮಹೋತ್ಸವದಂಗವಾಗಿ ಐತಿಹಾಸಿಕ ಹೋರಿಮಟ್ಟಿ ಗುಡ್ಡಕ್ಕೆ ತೆರಳಿದ್ದ ಅಲಂಕೃತ ಮೂಲನಂದೀಶ್ವರ ಬೆಳ್ಳಿ ಪಲ್ಲಕ್ಕಿ ಉತ್ಸವ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಭಕ್ತರ ಜಯಘೋಷ, ಬಸವಣ್ಣನ ಕುದರಿ ಶಿವಾನಂದ ಈರಕಾರಮುತ್ಯಾ ಅವರ ಹೇಳಿಕೆ ನುಡಿದ ನಂತರ ದೇವಸ್ಥಾನದಲ್ಲಿರುವ ಬೆಳ್ಳಿ ಪಲ್ಲಕ್ಕಿ ಇಡುವ ಕಟ್ಟೆಗೆ ಮರಳುವ ಮೂಲಕ ಪಲ್ಲಕ್ಕಿ ಉತ್ಸವ ಸಂಪನ್ನಗೊಂಡಿತ್ತು.
ಪಟ್ಟಣದಿಂದ ಸುಮಾರು ೫ ಕಿಮೀ ಅಂತರದಲ್ಲಿರುವ ಐತಿಹಾಸಿಕ ಹೋರಿಮಟ್ಟಿ ಗುಡ್ಡಕ್ಕೆ ಸೋಮವಾರ ತೆರಳಿದ್ದ ಮೂಲನಂದೀಶ್ವರ (ಬಸವೇಶ್ವರ) ದೇವರ ಅಲಂಕೃತ ಬೆಳ್ಳಿ ಪಲ್ಲಕ್ಕಿ ಉತ್ಸವ ಸಂಜೆ ಆಕರ್ಷಕ ಸಿಡಿಮದ್ದು, ವಿವಿಧ ಕಲಾ ತಂಡಗಳ ಮೆರವಣಿಗೆ, ವಿವಿಧ ವಾದ್ಯಮೇಳದೊಂದಿಗೆ ಭಕ್ತರ ಜಯಘೋಷದೊಂದಿಗೆ ಪುರ ಪ್ರವೇಶ ಮಾಡಿದ ನಂತರ ಅದ್ದೂರಿ ಮೆರವಣಿಗೆಯ ಮೂಲಕ ದೇವಸ್ಥಾನಕ್ಕೆ ತಲುಪಿದ ನಂತರ ರಾತ್ರಿ ಪಲ್ಲಕ್ಕಿ ಪಲ್ಲಕ್ಕಿ ಕಟ್ಟೆಗೆ ಮರಳಿತು. ಮಂಗಳವಾರ ನಸುಕಿನ ಜಾವ ಬಸವಣ್ಣನ ಕುದರಿ ಶಿವಾನಂದ ಈರಕಾರಮುತ್ಯಾ ಅವರು ಆಗಮಿಸಿದ ನಂತರ ಪಲ್ಲಕ್ಕಿ ಉತ್ಸವವು ದೇವಸ್ಥಾನದ ಪ್ರಾಂಗಣದಲ್ಲಿ ಮೂರು ಪ್ರದಕ್ಷಿಣೆ ಹಾಕಿದ ನಂತರ ಶಿವಾನಂದ ಈರಕಾರಮುತ್ಯಾ ಅವರು ಈ ವರ್ಷದ ಮಳೆ-ಬೆಳೆ ಹೇಳಿಕೆ ನುಡಿದರು. ಈರಕಾರಮುತ್ಯಾ ನುಡಿದ ಹೇಳಿಕೆಯನ್ನು ಹಿರಿಯರಾದ ಬಸವರಾಜ ಹಾರಿವಾಳ ಅವರು ಕೇಳಿ ನೆರೆದ ಭಕ್ತಗಣಕ್ಕೆ ಧ್ವನಿವರ್ದಕದ ಮೂಲಕ ಹೇಳಿದರು. ಹೇಳಿಕೆ ನುಡಿಯಾಗುತ್ತಿದ್ದಂತೆ ಪಲ್ಲಕ್ಕಿಯು ಇನ್ನೊಂದು ಪ್ರದಕ್ಷಿಣೆ ಹಾಕಿದ ನಂತರ ಪಲ್ಲಕ್ಕಿ ಸ್ವಸ್ಥಾನಕ್ಕೆ ಆಗಮಿಸುವ ಮೂಲಕ ಪಲ್ಲಕ್ಕಿ ಉತ್ಸವ ಸಂಪನ್ನಗೊಂಡಿತ್ತು.
ಶಿವಾನಂದ ಈರಕಾರಮುತ್ಯಾ ನುಡಿದ ಹೇಳಿಕೆಗಳು: ಹಿಂಗಾರಿ ಮಳಿ ಹುಬ್ಬಿ ಉತ್ತರಿಗೆ ಮಂಡಿ ಕಟ್ಟಿ ಸಾಗ ಮಾಡಿನಿ, ಮುಂಗಾರಿ ಬೆಳೆಯೊಳಗ ಸಜ್ಜಿ ಕಟ್ಟಿಗೆ ವಕ್ಕಳ ಆಯಿತು, ಜೋಳದ ಬೆಳಿ ಬಂಡಿ ತುಂಬಾ ಅನ್ನಕೊಟ್ಟಿನಿ ಹಾಗೂ ಗೋಧಿ, ಕಡ್ಲಿ, ಕುಸುಬಿ ಜೋಳದ ಬೆನ್ನ ಹತ್ಯಾವು, ಹತ್ತಿ ಸಾಲಾಗ ಹಮಿನಿ(ಬಂಗಾರ) ವಗದಿನಿ, ಹಿಂಗಾರಿ ಮಳಿಗಳು ಒಕ್ಕಲಿಗ್ಯಾಗ ಹಸ್ತಾಗ ಹಾಲು ಹಾಕಿನಿ, ಹತ್ತು ಮಳಿಗಳು ಒಕ್ಕಲಿಗ್ಯಾಗ ಬೇಕಾದಾಗ ಉಡಿ ಕಟ್ಟಿ ಆಡಿನಿ, ಮುಂದಕ್ಕೆ ಇಟ್ಟ ಕಾಲು ಹಿಂದಕ್ಕೆ ಇಡಬ್ಯಾಡ, ನಾ ನಾ ಅಂದಾವ ಹಿದ್ಕ್ಕೆ ಉಳಿತ್ತಾನ ನೀ ನೀ ಅಂದವ್ವ ಮುಂದಕ್ಕ ಬರತಾನ, ಮಳಿ ಬೆಳಿ ಎಲ್ಲಾ ಆನಂದ ಕೊಟ್ಟಿನಿ ಒಕ್ಕಲಿಗ್ಯಾಗ ಚಿಂತಿ ಮಾಡಬ್ಯಾಡ ನಾಲ್ಕು ಮೂಲಿಗಿ ಜಾಡಿ ಟೋಪಿಗಿ ಹಾಕೊಂಡು ನಿಂತಿನಿ, ಹಂಬಲ ಇಟ್ಟು ಜಾತ್ರಿ ಮಾಡಿದವರ ಮನಿಯಾಗ ಬಂಗಾರ ಕಂಬ ಆಗಿ ಇರತಿನಿ ಎಂಬ ಈ ವರ್ಷದ ಹೇಳಿಕೆಗಳನ್ನು ಶಿವಾನಂದ ಈರಕಾರಮುತ್ಯಾ ನುಡಿದರು.
ಪಲ್ಲಕ್ಕಿ ಉತ್ಸವದಲ್ಲಿ ಬಸವರಾಜ ಹಾರಿವಾಳ, ಸಂಗಪ್ಪ ಡಂಬಳ, ಚಂದ್ರಶೇಖರ ಮುರಾಳ, ಪಾವಡೆಪ್ಪ ಕರಮಳಕರ, ಶರಣಪ್ಪ ಕೂಡಗಿ, ನಾಗಪ್ಪ ಬಾಡಗಿ, ಸಿದ್ದಲಿಂಗ ಪೂಜಾರಿ, ಗಿರೀಶ ಬಿರಾದಾರ, ಪುಟ್ಟು ಪಟ್ಟಣಶೆಟ್ಟಿ, ಶಿವು ಸಿಂದಗಿ, ಕುಮಾರ ಒಣರೊಟ್ಟಿ, ಪರಶುರಾಮ ದೇವಕರ, ಸಿದ್ದು ಚವ್ಹಾಣ, ಪ್ರಭು ಮಾಲಗಾರ, ಮಂಜು ಹಾರಿವಾಳ, ಭೀಮು ನಿಕ್ಕಂ, ಮಲ್ಲು ಡೋಣೂರ, ಸಂತೋಷ ಕೂಡಗಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರನ ವರಪ್ರಸಾದದಿಂದ ಬಸವೇಶ್ವರರ ತಾಯಿ ಮಾದಲಾಂಬಿಕೆಯು ಬಸವೇಶ್ವರರ ಜನ್ಮ ನೀಡಿದಳು ಎಂಬ ಪ್ರತೀತಿಯಿದೆ. ಬಸವೇಶ್ವರರು ಬಾಲ್ಯದಲ್ಲಿ ಜನ್ಮಸ್ಥಳ ಬಸವನಬಾಗೇವಾಡಿಯ ಮೂಲನಂದೀಶ್ವರ ದೇವಸ್ಥಾನ ಪ್ರಾಂಗಣ, ಬಾವಿಯ ಸುತ್ತಮುತ್ತ ತನ್ನ ಗೆಳೆಯರರೊಂದಿಗೆ ಆಟ ಆಡುವ ಜೊತೆಗೆ ಸಮೀಪದ ಹೋರಿಮಟ್ಟಿ ಗುಡ್ಡದಲ್ಲಿಯೂ ತನ್ನ ಬಾಲ್ಯದ ಆಟ, ಪೂಜೆ ಪುನಸ್ಕಾರ ಮಾಡಿದ್ದರು. ಇದ ಸವಿನೆನಪಿಗಾಗಿ ಪಲ್ಲಕ್ಕಿ ಉತ್ಸವವು ಹೋರಿಮಟ್ಟಿ ಗುಡ್ಡಕ್ಕೆ ತೆರಳಿ ಮರಳಿ ದೇವಸ್ಥಾನಕ್ಕೆ ಬರುತ್ತದೆ ಎಂಬ ಪ್ರತೀತಿಯೂ ಇದೆ. ಇದರ ಬಗ್ಗೆ ಹೆಚ್ಚು ಬೆಳಕು ಚೆಲ್ಲುವ ಅಗತ್ಯವಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ
    In (ರಾಜ್ಯ ) ಜಿಲ್ಲೆ
  • ಇಂದು ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಮಳೆಯಿಂದ ಮನೆಯೊಳಗೆ ನೀರು ನುಗ್ಗಿ ವಸ್ತುಗಳ ಹಾನಿ!
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದ ಮೇರು ಶಿಖರ ಪಂ.ಪುಟ್ಟರಾಜ ಗವಾಯಿಗಳು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ಮತ್ತೆ ಅಪಾರ ಪ್ರಮಾಣದ ನೀರು!
    In (ರಾಜ್ಯ ) ಜಿಲ್ಲೆ
  • ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಬೆಳೆಹಾನಿಪುನಃ ಪರಿಶೀಲಿಸಿದ ಎಸಿ ವಸ್ತ್ರದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.