Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿ ಜಲಾಶಯ ನೀರಿನ ಮಟ್ಟ ಹೆಚ್ಚಳಕ್ಕೆ ರೈತ ಸಂಘ ಆಗ್ರಹ
(ರಾಜ್ಯ ) ಜಿಲ್ಲೆ

ಆಲಮಟ್ಟಿ ಜಲಾಶಯ ನೀರಿನ ಮಟ್ಟ ಹೆಚ್ಚಳಕ್ಕೆ ರೈತ ಸಂಘ ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪ್ರಸ್ತುತ ಇರುವ ಆಲಮಟ್ಟಿ ಅಣೆಕಟ್ಟು ೫೧೯-೬೦ ಮೀ. ಎತ್ತರದಿಂದ ೧೨೩೩-೦೮೧ ಟಿಎಂಸಿ ನೀರು ರಾಜ್ಯದ ಪಾಲಾಗಿದ್ದು, ಇದರಲ್ಲಿ ವಿಜಯಪುರ, ಬಾಗಲಕೋಟ, ಕೊಪ್ಪಳ, ಕಲಬುರಗಿ, ಯಾದಗಿರಿ, ರಾಯಚೂರ ಜಿಲ್ಲೆಗಳಿಗೆ ಉಪಯೋಗಿಸಲಾಗುತ್ತಿದೆ. ಇನ್ನು ಅಣೆಕಟ್ಟು ೫೨೪-೨೫೬ ಮೀ.ಗೆ ಹೆಚ್ಚಳವಾದರೆ ೧೩೦ಟಿಎಂಸಿ ನೀರು ಹೆಚ್ಚುವರಿಯಾಗಿ ಲಿಭಿಸಲಿದೆ. ಹಾಗಾಗಿ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಬೇಕು ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಆಗ್ರಹಿಸಿದ್ದಾರೆ.
ಸಿಂದಗಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನ್ಯಾ|| ಬ್ರಜೇಶ್‌ಕುಮಾರ ನೇತೃತ್ವದ ೨ನೆಯ ನ್ಯಾಯಾಧೀಕರಣ ೨೦೧೦ರಲ್ಲಿ ತೀರ್ಪು ನೀಡಿತ್ತು. ೨೦೧೩ರಲ್ಲಿ ಸೃಷ್ಟಿಕರಣ ತೀರ್ಪು ನೀಡಿ, ಲಾಲ್‌ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು ೫೨೪-೨೫೬ ನಿಲ್ಲಿಸಲು ಅನುಮತಿ ನೀಡಿದೆ. ತೀರ್ಪು ನೀಡಿ ೧೫ ವರ್ಷಗಳಾದರೂ ಇಲ್ಲಿಯವರೆಗೂ ಜಲಾಯಶಯದ ನೀರಿನ ಮಟ್ಟವನ್ನು ಹೆಚ್ಚಿಸಲು ಸರಕಾರ ಮುತುವರ್ಜಿ ವಹಿಸಿಲ್ಲ. ಅಲ್ಲದೇ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿಲ್ಲ. ಮಹಾರಾಷ್ಟ್ರ ಸರಕಾರದ ತಕರಾರಿನ ನೆಪವನ್ನು ಮುದ್ದಿಟ್ಟುಕೊಂಡು ಅನಾವಶ್ಯಕ ಕಾಲಹರಣ ಮಾಡುತ್ತಿದೆ. ಈ ವಿಚಾರವಾಗಿ ರಾಜ್ಯ ಸರಕಾರ ಕೇಂದ್ರ ಸರಕಾರದ ಕಡೆಗೆ ಬೆರಳು ಮಾಡಿ ತೋರಿಸುತ್ತಾ ಕೇಂದ್ರ ಸರಕಾರವೇ ಅಧಿಸೂಚನೆ ಹೊರಡಿಸಿಲ್ಲ ಎಂದು ಹೇಳುತ್ತಾ, ಉತ್ತರ ಕರ್ನಾಟಕ ಮಹತ್ವಾಕಾಂಕ್ಷಿ ಯೋಜನೆ ಹಳಿ ತಪ್ಪಿದೆ. ಅವಳಿ ಜಿಲ್ಲೆಗಳ ರೈತರು ಸರಕಾರಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಈ ಜಲಾಶಯದ ಕಥೆ ರೈತರಿಗೆ ಕಣ್ಣಿರಿನ ಕಥೆಯಾಗಿದೆ. ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಪಾಳಿಗೆ ಅಕ್ಷಯ ಪಾತ್ರೆಯಾಗಿ, ಅವರ ಸ್ವಾರ್ಥಕ್ಕೆ ಬಲಿಯಾಗಿ ಈ ಯೋಜನೆ ದಶಕಗಳಿಂದ ನೆನೆಗುದಿಗೆ ಬಿದ್ದು ನಲಗುವಂತಾಗಿದೆ ವಿಷಾಧಿಸಿದರು.
ಸದ್ಯ ಅಣೆಕಟ್ಟು ೫೧೯-೬೦ ರಿಂದ ೫೨೪-೨೫೬ಮೀ.ಗೆ ಹೆಚ್ಚಿಸಲು ಮತ್ತು ಈ ಯೋಜನೆ ಸಾಕಾರಗೊಳಿಸಲು ೧ಲಕ್ಷ ಕೋಟಿಗೂ ಅಧಿಕ ಹಣದ ಅಗತ್ಯವಿದೆ. ಇಷ್ಟೊಂದು ಹಣ ಒದಗಿಸುವುದು ರಾಜ್ಯ ಸರಕಾರಕ್ಕೆ ಅಸಾಧ್ಯ. ಈ ಯೋಜನೆಯನ್ನು ಪೂರ್ಣಗೊಳಿಸಲು ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ ಕೇಂದ್ರ ಸರಕಾರ ತನ್ನ ಸುಪರ್ಧಿಗೆ ತೆಗೆದುಕೊಂಡು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ
    In (ರಾಜ್ಯ ) ಜಿಲ್ಲೆ
  • ಇಂದು ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಮಳೆಯಿಂದ ಮನೆಯೊಳಗೆ ನೀರು ನುಗ್ಗಿ ವಸ್ತುಗಳ ಹಾನಿ!
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದ ಮೇರು ಶಿಖರ ಪಂ.ಪುಟ್ಟರಾಜ ಗವಾಯಿಗಳು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ಮತ್ತೆ ಅಪಾರ ಪ್ರಮಾಣದ ನೀರು!
    In (ರಾಜ್ಯ ) ಜಿಲ್ಲೆ
  • ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಬೆಳೆಹಾನಿಪುನಃ ಪರಿಶೀಲಿಸಿದ ಎಸಿ ವಸ್ತ್ರದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.